ಲೋಕಾಯುಕ್ತ ಅಧಿಕಾರಿ ಅಕ್ರಮ ಸಾಬೀತು! 'ಬೇಲಿಯೇ ಎದ್ದು ಹೊಲ ಮೇಯ್ದರೆ' ರಕ್ಷಿಸೋರು ಯಾರು?

ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿ ಮತ್ತು ಪೊಲೀಸ್ ಪೇದೆ ನಿಂಗಪ್ಪ ಅವರು ಅಬಕಾರಿ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿರುವ ಆರೋಪ ಲೋಕಾಯುಕ್ತ ಹೇಳಿಕೆಯಲ್ಲಿ ಬಹಿರಂಗವಾಗಿದೆ.
Lokayukta office
ಲೋಕಾಯುಕ್ತ ಕಚೇರಿ
Updated on

ಬೆಂಗಳೂರು: 'ಬೇಲಿಯೇ ಎದ್ದು ಹೊಲ ಮೇಯ್ದಂತೆ' ಭ್ರಷ್ಟಾಚಾರ ತಡೆಯಬೇಕಿದ್ದ ಲೋಕಾಯುಕ್ತ ಸಂಸ್ಥೆಯ ಇಬ್ಬರು ಸಿಬ್ಬಂದಿ, ಸರ್ಕಾರಿ ಅಧಿಕಾರಿಗಳಿಂದ ಹಣ ಸುಲಿಗೆ ಮಾಡಿರುವುದು ಹಾಗೂ ಅಕ್ರಮ ಹಣ ವರ್ಗಾವಣೆಯಲ್ಲಿ ತೊಡಗಿಸಿಕೊಂಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ.

ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿ ಮತ್ತು ಪೊಲೀಸ್ ಪೇದೆ ನಿಂಗಪ್ಪ ಅವರು ಅಬಕಾರಿ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿರುವ ಆರೋಪ ಲೋಕಾಯುಕ್ತ ಹೇಳಿಕೆಯಲ್ಲಿ ಬಹಿರಂಗವಾಗಿದೆ. ಇವರು 'ಕೆಜಿ' ಎಂಬ ಕೋಡ್‌ವರ್ಡ್ ಬಳಸಿ ಲಂಚ ವಸೂಲಿ ಮಾಡುತ್ತಿದ್ದರು ಎನ್ನಲಾಗಿದೆ.

ಶ್ರೀನಾಥ್ ಜೋಶಿ ಅವರು ಲಂಚದ ಹಣವನ್ನು ಕ್ರಿಪ್ಟೋಕರೆನ್ಸಿ ಮೂಲಕ ವೈಟ್ ಮನಿಯನ್ನಾಗಿ ಪರಿವರ್ತಿಸಲು ಪ್ರಯತ್ನಿಸಿದರು ಎಂದು ತನಿಖೆಯಿಂದ ತಿಳಿದುಬಂದಿದೆ. ಅವರು 24 ಕ್ರಿಪ್ಟೋ ಖಾತೆಗಳನ್ನು ತೆರೆದಿದ್ದಾರೆ. ಈ ಪೈಕಿ 13 ಖಾತೆಗಳಲ್ಲಿ ಈಗಾಗಲೇ 4 ಕೋಟಿ ರೂ.ಗೂ ಹೆಚ್ಚು ವಹಿವಾಟು ನಡೆದಿದೆ ಎಂದು ಆರೋಪಿಸಲಾಗಿದೆ. ಈ ಕುರಿತ ತನಿಖೆ ನಡೆಯುತ್ತಿದೆ ಎಂದು ಲೋಕಾಯುಕ್ತರು ಖಚಿತಪಡಿಸಿದ್ದಾರೆ.

ಈ ಘಟನೆಯು ಲೋಕಾಯುಕ್ತದಲ್ಲಿಯೇ ಆಂತರಿಕ ಭ್ರಷ್ಟಾಚಾರದ ಬಗ್ಗೆ ಕಳವಳವನ್ನು ಉಂಟುಮಾಡಿದೆ. ಈ ಹಿಂದೆ ಲೋಕಾಯುಕ್ತವು ತನ್ನದೇ ಸಿಬ್ಬಂದಿಯ ಮೇಲೆ ನಿಗಾ ಇಡಲು ಮೀಸಲಾದ 24 ಸದಸ್ಯರ ಜಾಗೃತ ದಳವನ್ನು ರಚಿಸುವಂತೆ ಮನವಿ ಮಾಡಿತ್ತು. ಆದರೆ ಈ ಮನವಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿತ್ತು.

Lokayukta office
IPS ಅಧಿಕಾರಿ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಲೋಕಾಯುಕ್ತ ಪತ್ರ

ಭ್ರಷ್ಟಾಚಾರ ನಿಗ್ರಹ ದಳದಿಂದ ಲೋಕಾಯುಕ್ತಕ್ಕೆ ಈ ಹಿಂದೆ ವರ್ಗಾವಣೆಗೊಂಡ ಸಿಬ್ಬಂದಿಯನ್ನು ಬಳಸಿಕೊಂಡು ಆಂತರಿಕ ಕಣ್ಗಾವಲು ಕಾರ್ಯವಿಧಾನವನ್ನು ಪುನರ್ ರಚಿಸಲು ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಸರ್ಕಾರ ಈಗ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com