ಮೈಸೂರು: ಪ್ರೀತ್ಸೆ, ಪ್ರೀತ್ಸೆ ಅಂತ ಹಿಂದೆ ಬಿದ್ದ, ಕೊನೆಗೆ ಚೂರಿ ಇರಿದು ಶಿಕ್ಷಕಿಯನ್ನೇ ಕೊಂದ 'ಪಾಗಲ್ ಪ್ರೇಮಿ'!

ಪ್ರೀತ್ಸೆ, ಪ್ರೀತ್ಸೆ ಅಂತ ಹಿಂದೆ ಬಿದ್ದದ್ದ ಪಾಗಲ್ ಪ್ರೇಮಿಯೊಬ್ಬ ಶಿಕ್ಷಕಿಗೆ ಚಾಕು ಇರಿದು ಹತ್ಯೆ ಮಾಡಿರುವ ದಾರುಣ ಘಟನೆ ಮೈಸೂರಿನ ಅಶೋಕಪುರಂನಲ್ಲಿ ನಡೆದಿದೆ. ಮೃತರನ್ನು ಪಾಂಡವಪುರ ಮೂಲದ 36 ವರ್ಷದ ಶಿಕ್ಷಕಿ ಪೂರ್ಣಿಮಾ ಎಂದು ಗುರುತಿಸಲಾಗಿದೆ.
Abhishek, Poornima
ಅಭಿಷೇಕ್, ಪೂರ್ಣಿಮಾ
Updated on

ಮೈಸೂರು: ಪ್ರೀತ್ಸೆ, ಪ್ರೀತ್ಸೆ ಅಂತ ಹಿಂದೆ ಬಿದ್ದದ್ದ ಪಾಗಲ್ ಪ್ರೇಮಿಯೊಬ್ಬ ಶಿಕ್ಷಕಿಗೆ ಚಾಕು ಇರಿದು ಹತ್ಯೆ ಮಾಡಿರುವ ದಾರುಣ ಘಟನೆ ಮೈಸೂರಿನ ಅಶೋಕಪುರಂನಲ್ಲಿ ನಡೆದಿದೆ. ಮೃತರನ್ನು ಪಾಂಡವಪುರದ ಎಲೆಕೆಡೆ ಹ್ಯಾಂಡ್ ಪೋಸ್ಟ್ ಮೂಲದ 36 ವರ್ಷದ ಪೂರ್ಣಿಮ ಎಂದು ಗುರುತಿಸಲಾಗಿದೆ. ಕ್ಯಾತನಹಳ್ಳಿ ಗ್ರಾಮದ ಅಭಿಷೇಕ್ ಶಿಕ್ಷಕಿಯನ್ನು ಕೊಲೆ ಮಾಡಿ ಜೈಲು ಸೇರಿದ್ದಾನೆ. ಪ್ರೀತಿ ವಿಚಾರಕ್ಕೆ ಅಭಿಷೇಕ್ ನಿನ್ನೆ ಪೂರ್ಣಿಮ ಜೊತೆ ಜಗಳವಾಡಿದ್ದನು. ನಂತರ ಜಗಳ ತಾರಕಕ್ಕೇರಿದ್ದು, ಶಿಕ್ಷಕಿಗೆ ಚಾಕು ಇರಿದು ಪರಾರಿಯಾಗಿದ್ದನು. ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಪೂರ್ಣಿಮ ಮೃತಪಟ್ಟಿದ್ದಾರೆ.

Abhishek, Poornima
Mangaluru: ಕಲ್ಲು ತೂರಾಟ ತನಿಖೆಗೆ ಹೋದ ಪೊಲೀಸರಿಗೆ ಶಾಕ್; ಹಿಂದೂ ಮುಖಂಡನ ಮೊಬೈಲ್​ನಲ್ಲಿ ರಾಜಕಾರಣಿಯ ಅಶ್ಲೀಲ ವಿಡಿಯೋ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com