ಗಾಣಿಗ ಮಠ ಅನುದಾನಕ್ಕೂ ಕಮಿಷನ್: ಸ್ವಾಮೀಜಿ ಆರೋಪ; ಸಚಿವ ಶಿವರಾಜ್ ತಂಗಡಗಿ ವಿರುದ್ಧ JDS ತೀವ್ರ ಕಿಡಿ

ಮಠದ ಜೀರ್ಣೋದ್ಧಾರಕ್ಕಾಗಿ 3.5 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಅನುದಾನ ಬಿಡುಗಡೆ ಮಾಡಲು ಸಚಿವ ಶಿವರಾಜ್ ತಂಗಡಗಿಯವರು 25 ಪರ್ಸೆಂಟ್​ ಕಮಿಷನ್​ ಕೇಳಿದ್ದಾರೆ ಎಂದು ಸ್ವಾಮೀಜಿ ಆರೋಪ ಮಾಡಿದ್ದಾರೆ.
 Minister Shivaraj Tangadagi
ಶಿವರಾಜ್ ತಂಗಡಗಿ
Updated on

ಬೆಂಗಳೂರು: ಗಾಣಿ ಮಠ ಅನುದಾನ ಬಿಡುಗಡೆಗೆ ಕಮಿಷನ್ ಕೇಳಿದ್ದಾರೆಂದು ಸಚಿವ ಶಿವರಾಜ್ ತಂಗಡಗಿ ವಿರುದ್ಧ ನೆಲಮಂಗಲದ ಶ್ರಿಕ್ಷೇತ್ರ ತೈಲೇಶ್ವರ ಗಾಣಿಗರ ಮಹಸಂಸ್ಥಾನ ಮಠದ ಪೂರ್ಣಾನಂದಪೂರಿ ಸ್ವಾಮೀಜಿಗಳು ಆರೋಪ ಮಾಡಿದ್ದು, ಇದರ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ತೀವ್ರವಾಗಿ ಕಿಡಿಕಾರಿದೆ.

ಮಠದ ಜೀರ್ಣೋದ್ಧಾರಕ್ಕಾಗಿ 3.5 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಅನುದಾನ ಬಿಡುಗಡೆ ಮಾಡಲು ಸಚಿವ ಶಿವರಾಜ್ ತಂಗಡಗಿಯವರು 25 ಪರ್ಸೆಂಟ್​ ಕಮಿಷನ್​ ಕೇಳಿದ್ದಾರೆ ಎಂದು ಸ್ವಾಮೀಜಿ ಆರೋಪ ಮಾಡಿದ್ದಾರೆ.

ಈ ಕುರಿತು ಖಾಸಗಿ ಸುದ್ದಿ ಸಂಸ್ಥೆಯೊಂದು ವರದಿ ಪ್ರಕಟಿಸಿದ್ದು, ವರದಿ ಬೆನ್ನಲ್ಲೇ ಜೆಡಿಎಸ್ ಸಚಿವರ ವಿರುದ್ಧ ತೀವ್ರವಾಗಿ ಕಿಡಿಕಾರಿದೆ.

ಕಮಿಷನ್ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರೇ ವಸೂಲಿ ಏಜೆಂಟ್'ಗಳಾಗಿದ್ದಾರೆ. ಗಾಣಿಗ ಮಠದ ಅನುದಾನ ಬಿಡುಗಡೆಗೆ ಸಚಿವ ಶಿವರಾಜ್ ತಂಗಡಗಿ ಕಮಿಷನ್ ಕೇಳಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿ ಪೂರ್ಣಾನಂದ ಪುರಿ ಸ್ವಾಮೀಜಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಆದಿಯಾಗಿ ಮಂತ್ರಿಗಳು, ಕಾಂಗ್ರೆಸ್ ಶಾಸಕರು ಲಂಚ‌ ಹೊಡೆಯುವುದರಲ್ಲೇ ನಿರತರಾಗಿದ್ದಾರೆ. ಇದು ಅಭಿವೃದ್ಧಿ ಶೂನ್ಯ ಶೇ.60 ಕಮಿಷನ್ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ ಎಂದು ವಾಗ್ದಾಳಿ ನಡೆಸಿದೆ.

 Minister Shivaraj Tangadagi
ಶೇ.60 ರಷ್ಟು ಕಮಿಷನ್: ಕುಮಾರಸ್ವಾಮಿ ಆರೋಪ ಸಾಬೀತುಪಡಿಸಲಿ- ಸಿಎಂ ಸಿದ್ದರಾಮಯ್ಯ ಸವಾಲು!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com