ತುಮಕೂರು: ಲಾಡ್ಜ್ ನಲ್ಲಿ ಡೆತ್ ನೋಟ್ ಬರೆದಿಟ್ಟು ದಾವಣಗೆರೆ PSI ನೇಣಿಗೆ ಶರಣು!

ಜು.1ರಂದು ಬೆಳಿಗ್ಗೆ 7 ಗಂಟೆಗೆ ದ್ವಾರಕಾ ಹೋಟೆಲ್‍ನ 4ನೇ ಮಹಡಿಯಲ್ಲಿ ರೂಮ್ ಬಾಡಿಗೆ ಪಡೆದಿದ್ದರು. ರೂಮ್‍ಗೆ ತೆರಳಿದ್ದಾಗಿನಿಂದ ಅವರು ಹೊರಗೆ ಬಂದಿರಲಿಲ್ಲ. ಲಾಡ್ಜ್ ಸಿಬ್ಬಂದಿ ಕರೆ ಮಾಡಿದ್ರೂ ಅವರು ಕರೆ ಸ್ವೀಕರಿಸಿರಲಿಲ್ಲ.
PSI Nagarajappa
ಪಿಎಸ್ ಐ ನಾಗರಾಜಪ್ಪ
Updated on

ತುಮಕೂರು: ಕೌಟುಂಬಿಕ ಕಹಲದಿಂದ ಬೇಸತ್ತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು (PSI) ಲಾಡ್ಜ್ ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ದಾವಣಗೆರೆ ನಗರದ ಬಡಾವಣೆ PSI ನಾಗರಾಜಪ್ಪ (45) ಆತ್ಮಹತ್ಯೆ ಮಾಡಿಕೊಂಡವರು.

ಜು.1ರಂದು ಬೆಳಿಗ್ಗೆ 7 ಗಂಟೆಗೆ ದ್ವಾರಕಾ ಹೋಟೆಲ್‍ನ 4ನೇ ಮಹಡಿಯಲ್ಲಿ ರೂಮ್ ಬಾಡಿಗೆ ಪಡೆದಿದ್ದ ನಾಗರಾಜಪ್ಪ, ರೂಮ್‍ಗೆ ತೆರಳಿದ್ದಾಗಿನಿಂದ ಅವರು ಹೊರಗೆ ಬಂದಿರಲಿಲ್ಲ. ಲಾಡ್ಜ್ ಸಿಬ್ಬಂದಿ ಕರೆ ಮಾಡಿದ್ರೂ ಅವರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಲಾಡ್ಜ್‌ನಲ್ಲಿ ದುರ್ವಾಸನೆ ಬಂದಾಗ, ಸಿಬ್ಬಂದಿ ಮಾಲೀಕರಿಗೆ ಮಾಹಿತಿ ನೀಡಿದ್ದರು. ಬಾಗಿಲು ತೆರೆದು ನೋಡಿದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ತದನಂತರ ಸುದ್ದಿ ತಿಳಿದು ತುಮಕೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ಅವರು ನೇಣಿಗೆ ಶರಣಾಗಿದ್ದು, ಮೃತದೇಹ ಕೊಳೆತು ಹುಳಗಳಾಗಿದ್ದವು ಎಂದು ತಿಳಿದು ಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

PSI Nagarajappa
ಕೌಟುಂಬಿಕ ಕಲಹ: PSI ಪತ್ನಿ ಆತ್ಮಹತ್ಯೆಗೆ ಶರಣು

ನಾಗರಾಜಪ್ಪ ಆತ್ಮಹತ್ಯೆ ಮಾಡಿಕೊಂಡ ರೂಮ್ ನಲ್ಲಿ ಡೆತ್ ನೋಟ್ ಪತ್ತೆಯಾಗಿದೆ. 2 ಪುಟಗಳ ಡೆತ್ ನೋಟ್ ನಲ್ಲಿ `ನನ್ನ ಸಾವಿಗೆ ನಾನೇ ಕಾರಣ’. ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ. ಅಲ್ಲದೇ ಹೋಟೆಲ್ ಮಾಲೀಕರಿಗೂ ಡೆತ್‍ನೋಟ್‍ನಲ್ಲಿ ಕ್ಷಮೆ ಕೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com