RDPR ಹೊರ ಗುತ್ತಿಗೆ ಸಿಬ್ಬಂದಿಗೆ ಆರು ತಿಂಗಳಿನಿಂದ ವೇತನವಿಲ್ಲ: ಸಂಕಷ್ಟದ ಸುಳಿಯಲ್ಲಿ ನೌಕರರು

ಸರ್ಕಾರವು ಸಂಬಳಕ್ಕಾಗಿ ಹಣವನ್ನು ವಿತರಿಸಲು ವೆಬ್ ಪೋರ್ಟಲ್ ರಚಿಸುತ್ತಿರುವುದರಿಂದ ಅವರಿಗೆ ಸಂಬಳ ಸಿಗುತ್ತಿಲ್ಲ.
representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕಳೆದ ಆರು ತಿಂಗಳಿನಿಂದ ರಾಜ್ಯದ ಆರ್ ಡಿಪಿಆರ್ ಗುತ್ತಿಗೆ ಸಿಬ್ಬಂದಿಗೆ ವೇತನ ನೀಡದ ಕಾರಣ ಸಮಸ್ಯೆಯ ಸುಳಿಯಲ್ಲಿ ಸಿಲುಕಿದ್ದಾರೆ.

ರಾಮ್ ನಾಡಗೌಡ ತಮ್ಮ ಸಂಬಳಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ, ವೇತನ ನೀಡುವ ಭರವಸೆ ನೀಡಿದ್ದರೂ ಇದುವರೆಗೂ ಪಾವತಿಯಾಗಿಲ್ಲ. ಹೀಗಾಗಿ ಅವರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಮನೆ ಬಾಡಿಗೆ ಪಾವತಿಸಲು ಸಾಧ್ಯವಾಗುತ್ತಿಲ್ಲ.

ಇಂಡಿ ತಾಲ್ಲೂಕು ಪಂಚಾಯತ್‌ನಲ್ಲಿ ಮಾಹಿತಿ ಸಂಯೋಜಕರಾಗಿ ಕೆಲಸ ಮಾಡುತ್ತಿರುವ ಅವರು, ಕಳೆದ ಆರು ತಿಂಗಳಿನಿಂದ ಸಂಬಳ ಪಡೆಯದೆ ಪಂಚಾಯತ್ ರಾಜ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ 3,000 ಕ್ಕೂ ಹೆಚ್ಚು ಹೊರಗುತ್ತಿಗೆ ನೌಕರರಲ್ಲಿ ಒಬ್ಬರಾಗಿದ್ದಾರೆ.

ನಮ್ಮ ಕೊನೆಯ ಸಂಬಳ ಈ ವರ್ಷದ ಜನವರಿಯಲ್ಲಿ. ಎಲ್ಲಾ ಉದ್ಯೋಗಿಗಳು ಸಂಕಷ್ಟದಲ್ಲಿದ್ದಾರೆ ಮತ್ತು ಚಿಂತಿತರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ MGNREGA ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಸಾಹಿಲ್ ಧನಶೆಟ್ಟಿ ಹೇಳಿದರು.

representational image
ಕಳೆದ ಮೂರು ತಿಂಗಳಿನಿಂದ ಸಂಬಳವಿಲ್ಲ: ಬಿಬಿಎಂಪಿ ಮಾರ್ಷಲ್‌ಗಳ ಗೋಳು ಕೇಳೋರಿಲ್ಲ!

ರಾಜ್ಯದಲ್ಲಿ 3,145 ಹೊರಗುತ್ತಿಗೆ ನೌಕರರಿದ್ದಾರೆ ಎಂದು ಅವರು ಹೇಳಿದರು. ಸರ್ಕಾರವು ಸಂಬಳಕ್ಕಾಗಿ ಹಣವನ್ನು ವಿತರಿಸಲು ವೆಬ್ ಪೋರ್ಟಲ್ ರಚಿಸುತ್ತಿರುವುದರಿಂದ ಅವರಿಗೆ ಸಂಬಳ ಸಿಗುತ್ತಿಲ್ಲ. ನಾವು ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಸಾಫ್ಟ್‌ವೇರ್ ನವೀಕರಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಸಂಘವು ಭಾನುವಾರದಿಂದ ಅಸಹಕಾರ ಚಳವಳಿಯನ್ನು ನಡೆಸುತ್ತಿದೆ. ಈ ಚಳುವಳಿಯಿಂದ ಅಧಿಕಾರಿಗಳು, ನರೇಗಾ ಕಾರ್ಯಕರ್ತರು, ಚುನಾಯಿತ ಸದಸ್ಯರು ಮತ್ತು ಗ್ರಾಮಸ್ಥರಿಗೆ ಅನಾನುಕೂಲವಾಗಬಹುದು ಎಂದು ನಾವು ಅರ್ಥಮಾಡಿಕೊಂಡಿದ್ದೇವೆ, ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ, ನಮ್ಮ ಹೋರಾಟವನ್ನು ಬೆಂಬಲಿಸುವಂತೆ ಎಲ್ಲರೂ ವಿನಂತಿಸುತ್ತೇವೆ ಎಂದು ಸಂಘದ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಪಾಟೀಲ್ ಹೇಳಿದರು.

ನಾವು ಈ ವಿಷಯವನ್ನು ಸರ್ಕಾರದೊಂದಿಗೆ ಪ್ರಸ್ತಾಪಿಸುತ್ತಿದ್ದೇವೆ. ಶೀಘ್ರದಲ್ಲೇ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಅವರು ನಮಗೆ ಭರವಸೆ ನೀಡಿದ್ದಾರೆ" ಎಂದು ಜಿಲ್ಲಾ ಪಂಚಾಯತ್ ಸಿಇಒ ರಿಷಿ ಆನಂದ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com