ಮಂಡ್ಯ: ಸೇತುವೆಗೆ ಬೈಕ್ ಡಿಕ್ಕಿ; ಕಾಲುವೆಗೆ ಬಿದ್ದು ಇಬ್ಬರು ಸಾವು

ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.
road accident
ಪ್ರಾತಿನಿಧಿಕ ಚಿತ್ರ
Updated on

ಮಂಡ್ಯ: ವಿಶ್ವೇಶ್ವರಯ್ಯ ಕಾಲುವೆಯ ಸೇತುವೆಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಮಧ್ಯಾಹ್ನ 2.30ರ ಸುಮಾರಿಗೆ ಈ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ಮೋಟಾರ್ ಸೈಕಲ್‌ನಲ್ಲಿ ಇಬ್ಬರು ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದರು. ಸೇತುವೆ ದಾಟುವಾಗ ಸವಾರನ ನಿಯಂತ್ರಣ ತಪ್ಪಿ ಬೈಕ್ ರೇಲಿಂಗ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಇಬ್ಬರೂ ಕಾಲುವೆಗೆ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮೃತರ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.

road accident
ಮೈಸೂರು: ವಿಶ್ವೇಶ್ವರಯ್ಯ ಕಾಲುವೆಯಲ್ಲಿ ಮುಳುಗಿ SSLC ವಿದ್ಯಾರ್ಥಿನಿ ಸೇರಿ ಒಂದೇ ಕುಟುಂಬ ಮೂವರು ಮಕ್ಕಳು ನೀರುಪಾಲು!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com