ಸರ್ಕಾರದಲ್ಲಿ ಅನುದಾನದ ಕೊರತೆ ಇಲ್ಲ; ತಮಾಷೆಗೆ ಹೇಳಿದೆ ಅಷ್ಟೇ; ನಾನು ಸಚಿವನಾದ್ರೆ ಪುರುಷರಿಗೂ ಉಚಿತ ಬಸ್ ಪ್ರಯಾಣ!

ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತೇನೆ. ಆರ್ಥಿಕ ಪರಿಸ್ಥಿತಿ ಸುಧಾರಣೆಯಾದರೆ, ಪುರುಷರಿಗೂ ಬಸ್ ಪ್ರಯಾಣ ಉಚಿತ ಮಾಡುತ್ತೇವೆ. ನಾನು ಗ್ಯಾರಂಟಿಗೆ ವಿರೋಧ ಮಾಡಲ್ಲ.
Basvaraj Rayareddi
ಬಸವರಾಜ ರಾಯರೆಡ್ಡಿ
Updated on

ಕೊಪ್ಪಳ: ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿ, ನಾನು ಸಚಿವನಾದರೆ ಪುರುಷರಿಗೂ ಬಸ್ ಪ್ರಯಾಣ ಉಚಿತ ಮಾಡುತ್ತೇನೆ. ನನ್ನನ್ನು ಮಂತ್ರಿ ಮಾಡುತ್ತಾರೋ ಇಲ್ಲವೋ ನೋಡೋಣ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.

ಕೊಪ್ಪಳದ ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿ ಬಾಲಕಿಯರ ನೂತನ ಸರ್ಕಾರಿ ಪ್ರೌಢ ಶಾಲೆ ಪ್ರಾರಂಭೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಮ್ಮ ಸರ್ಕಾರದಲ್ಲಿ ಹಣ ಕಡಿಮೆ ಇದೆ ಎಂದು ಹೇಳಿದವರು ಯಾರು? ನಮ್ಮ ಸರ್ಕಾರದಲ್ಲಿ ಅಭಿವೃದ್ದಿಗೆ ಹಿನ್ನಡೆಯಾಗಿಲ್ಲ. ಈಗಾಗಲೇ ರಾಜ್ಯದ ಮಹಿಳೆಯರಿಗೆ 2000 ರೂಪಾಯಿ ನೀಡುತ್ತಿದ್ದೇವೆ. ನಮ್ಮ ಸರ್ಕಾರದಲ್ಲಿ ಅನುದಾನದ ಕೊರತೆ ಇಲ್ಲ. ಅಲ್ಲಿ ನಾನು ತಮಾಷೆಯಾಗಿ ಮಾತಾಡಿದೆ ಎಂದು ಬಸವರಾಜ ರಾಯರೆಡ್ಡಿ ಅವರು ಹೇಳಿದರು.

ನನ್ನನ್ನು ಮಂತ್ರಿ ಮಾಡುತ್ತಾರೋ ಇಲ್ಲವೋ ಗೊತ್ತಿಲ್ಲ. ಆದರೆ, ಒಂದೊಮ್ಮೆ ನನ್ನನ್ನು ಹಣಕಾಸು ಸಚಿವನಾಗಿ ಮಾಡಿದರೆ, ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತೇನೆ. ಆರ್ಥಿಕ ಪರಿಸ್ಥಿತಿ ಸುಧಾರಣೆಯಾದರೆ, ಪುರುಷರಿಗೂ ಬಸ್ ಪ್ರಯಾಣ ಉಚಿತ ಮಾಡುತ್ತೇವೆ. ನಾನು ಗ್ಯಾರಂಟಿಗೆ ವಿರೋಧ ಮಾಡಲ್ಲ. ನಾನು ಜನರ ಮುಂದೆ ತಮಾಷೆ ಆಗಿ ಮಾತನಾಡಿದ್ದನ್ನೆಲ್ಲ ಮಾಧ್ಯಮದವರು ವರದಿ ಮಾಡುತ್ತಾರೆ.

Basvaraj Rayareddi
ನಿಮಗೆ ಉತ್ತಮ ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆ ಬಂದ್ ಮಾಡ್ತೀವಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ!

ಕೆಲವೊಂದು ವಿಷಯಗಳನ್ನು ನಾನು ಕ್ಯಾಸುವಲ್ ಇಲ್ಲವೇ ತಮಾಷೆಯಾಗಿ ಹೇಳಿದ್ದೇನೆ. ಆದರೆ, ನನ್ನ ಹೇಳಿಕೆಯನ್ನು ಮಾಧ್ಯಮದಲ್ಲಿ ನಕಾರಾತ್ಮಕವಾಗಿ ಬಿಂಬಿಸಬೇಡಿ. ಕೆಲವೊಂದು ವಿಷಯಗಳನ್ನು ನಾನು ತಮಾಷೆ ಯಾಗಿ ಮಾತನಾಡುವ ಸಂದರ್ಭವನ್ನು ಅರ್ಥಮಾಡಿಕೊಳ್ಳದೇ ನಕಾರಾತ್ಮಕ ವಾಗಿ ಬರೆದರೇ ಏನು ಮಾಡುವುದಕ್ಕೆ ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಗ್ರಾಮೀಣ ರಸ್ತೆಗಳಿಗೆ ಆದ್ಯತೆ ನೀಡಲಾಗುವುದು. ನಮ್ಮ ಸರಕಾರ‌ ಇನ್ನು‌ ಮೂರು ವರ್ಷ ಅಧಿಕಾರ ಅವಧಿ ಇದ್ದು ಸಿದ್ದರಾಮಯ್ಯನವರೇ ಸಿಎಂ‌ ಆಗಿ‌ ಮುಂದುವರಿಯಲ್ಲಿದ್ದಾರೆ. ಈ ಬಗ್ಗೆ ಯಾರಿಗೂ ಅನುಮಾನ ಬೇಡ.

ನಮ್ಮ ಸರ್ಕಾರದಲ್ಲಿ ಹಣದ ಕೊರತೆ ಇಲ್ಲ. ಎಲ್ಲ ಅಭಿವೃದ್ಧಿ ಕೆಲಸ ಆಗುತ್ತಿವೆ. ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡಾಗ ಹಿಂದಿನ‌ ಸರ್ಕಾರ ಸುಮಾರು 2.5 ಲಕ್ಷ ಕೋಟಿ ರೂ. ಬಿಲ್ ಬಾಕಿ ಉಳಿಸಿತ್ತು. ಈ ಭಾರ ನಮ್ಮ ತಲೆ‌ ಮೇಲೆ ಬಿಜೆಪಿ ಅವರು ಹಾಕಿದ್ದಾರೆ. ಇದರಿಂದ ಒಂದಷ್ಟು ಸಮಸ್ಯೆ ಆಗಿದೆ ಅಷ್ಟೇ ಎಂದರು.

ನೀರಾವರಿ ಮಾಡುವುದು ಸುಲಭವಲ್ಲ. ನರೇಂದ್ರ ಮೋದಿ ಯಾವ ರಾಜ್ಯದ ಒಬ್ಬ ಸಿಎಂಗಳನ್ನು ಕರೆದು ಮಾತನಾಡಿಲ್ಲ. ತಾಂತ್ರಿಕ ಸಮಸ್ಯೆಗಳು ಇರುತ್ತವೆ. ಬಿಜೆಪಿಯವರು ಸುಮ್ಮನೇ ಆರೋಪ ಮಾಡುತ್ತಾರೆ. ಜಲ ಹಂಚಿಕೆ ಕಾನೂನು ಬಗ್ಗೆ ತಿಳಿದುಕೊಳ್ಳಬೇಕು. ಅಧ್ಯಯನ ಮಾಡಬೇಕು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com