ಚಾಮರಾಜನಗರ: ಪಾಠ ಕೇಳುವಾಗಲೇ 4ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಮೃತ ವಿದ್ಯಾರ್ಥಿಯನ್ನು ದೊಡ್ಡಹುಂಡಿ ಗ್ರಾಮದ ಲೇ.ನಾಗರಾಜು ಹಾಗೂ ನಾಗರತ್ನ ಅವರ ಪುತ್ರ ಮನೋಜ್ ಕುಮಾರ್(10) ಎಂದು ಗುರುತಿಸಲಾಗಿದೆ.
Manoj Kumar
ಮನೋಜ್ ಕುಮಾರ್
Updated on

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕುರಬರಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪಾಠ ಕೇಳುತ್ತಿರುವಾಗಲೇ ನಾಲ್ಕನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ದೊಡ್ಡಹುಂಡಿ ಗ್ರಾಮದ ಲೇ.ನಾಗರಾಜು ಹಾಗೂ ನಾಗರತ್ನ ಅವರ ಪುತ್ರ ಮನೋಜ್ ಕುಮಾರ್(10) ಎಂದು ಗುರುತಿಸಲಾಗಿದೆ.

ಕಳೆದ ಎರಡು ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮನೋಜ್ ಕುಮಾರ್ ಇಂದು ಶಾಲೆಯಲ್ಲಿ ಪಾಠ ಕೇಳುತ್ತಿದ್ದಾಗ ಕುಸಿದುಬಿದ್ದು, ಮೃತಪಟ್ಟಿದ್ದಾನೆ.

Manoj Kumar
ಹಾಸನಕ್ಕೆ ಹೃದಯಾಘಾತ: ಮೊನ್ನೆ ವಿದ್ಯಾರ್ಥಿನಿ, ಇಂದು ಆಟೋ ಚಾಲಕ Heart Attack ಗೆ ಬಲಿ!

ಮೃತ ಮನೋಜ್ ಕುಮಾರ್ ಹೃದಯದಲ್ಲಿ ರಂಧ್ರ​ ಇದ್ದು, ಜಯದೇವ, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದನು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com