ಯಾದಗಿರಿ: ಜಾತಿ ನಿಂದನೆ ಕೇಸ್ ಬೆದರಿಕೆ, ಭಯದಿಂದ ಯುವಕ ಆತ್ಮಹತ್ಯೆ; ಮಗನ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ತಂದೆ ನಿಧನ

ಕಳೆದ ಒಂದು ವಾರದ ಹಿಂದೆ, ವಡಗೇರದಲ್ಲಿ ಜಮೀನಿನ ದಾರಿಯ ವಿಷಯಕ್ಕೆ ಸಂಬಂಧಿಸಿದಂತೆ ದಲಿತ ಕುಟುಂಬವೊಂದರ ಜೊತೆ ಜಗಳ ಉಂಟಾಗಿತ್ತು.
Father and son death
ಸಾವಿಗೀಡಾದ ತಂದೆ ಮಗ
Updated on

ಯಾದಗಿರಿ: ಜಮೀನಿಗೆ ಹೋಗುವ ದಾರಿಯ ವಿಚಾರವಾಗಿ ದಲಿತ ಸಮುದಾಯದವರು ಜಾತಿ ನಿಂದನೆ ಕೇಸ್ ಹಾಕುತ್ತೇವೆ ಎಂದು ಬೆದರಿಕೆ ಹಾಕಿದ್ದರಿಂದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿ ಜಿಲ್ಲೆಯ ವಡಿಗೆರಾ ತಾಲ್ಲೂಕಿನಲ್ಲಿ ನಡೆದಿದೆ. ಈ ವಿಚಾರ ತಿಳಿದು ಯುವಕನ ತಂದೆ ಹೃದಯಾಘಾತದಿಂದ ಮೃತಪಟ್ಟ ಹೃದಯ ವಿದ್ರಾವಕ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮೆಹಬೂಬ್ (21) ಹಾಗೂ ಹೃದಯಾಘಾತದಿಂದ ಮೃತಪಟ್ಟವರನ್ನು ಸೈಯದ್‌ (50) ಎಂದು ಗುರುತಿಸಲಾಗಿದೆ.

ಕಳೆದ ಒಂದು ವಾರದ ಹಿಂದೆ, ವಡಗೇರದಲ್ಲಿ ಜಮೀನಿನ ದಾರಿಯ ವಿಷಯಕ್ಕೆ ಸಂಬಂಧಿಸಿದಂತೆ ದಲಿತ ಕುಟುಂಬವೊಂದರ ಜೊತೆ ಜಗಳ ಉಂಟಾಗಿತ್ತು. ಈ ಜಗಳವು ಮೆಹಬೂಬ್ ಮತ್ತು ಆ ಕುಟುಂಬದ ನಡುವೆ ಜಮೀನಿನ ಮೂಲಕ ಹಾದುಹೋಗುವ ವಿಷಯಕ್ಕೆ ಸಂಬಂಧಿಸಿತ್ತು.

ಈ ಕುರಿತು ಗ್ರಾಮದ ಮುಖಂಡರು ನ್ಯಾಯ ಪಂಚಾಯತ್‌ ಮಾಡಿ ಬಗೆಹರಿಸಿದ್ದರು. ಆದರೆ, ಮತ್ತೆ ಅದೇ ವಿಚಾರವಾಗಿ ಜಾತಿ ನಿಂದನೆ ಕೇಸ್ ಮಾಡುತ್ತೇವೆ ಎಂದು ದಲಿತ ಸಮುದಾಯದವರು ಹೆದರಿಸಿದ್ದಾರೆ. ಕೇಸ್ ದಾಖಲಾದರೆ ಮನೆ ಮಾನ-ಮರ್ಯಾದೆ ಹೋಗುತ್ತದೆ ಎಂಬ ಭಯದಿಂದ ಬುಧವಾರ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Father and son death
ಮುರುಡೇಶ್ವರ ಕರಾವಳಿಯಲ್ಲಿ ದೋಣಿ ಮಗುಚಿ ಒಬ್ಬ ಮೀನುಗಾರ ಸಾವು, ಮತ್ತೋರ್ವ ನಾಪತ್ತೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com