Dharmasthala Case: ದೂರುದಾರನ ಮಾಹಿತಿ ಬೆನ್ನಲ್ಲೇ ಅಸ್ಥಿಪಂಜರಗಳ ಅವಶೇಷ ವಶಪಡಿಸಿಕೊಂಡ ಪೊಲೀಸರು! ಆರೋಪಿ ಯಾರು?

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರಿನಲ್ಲಿ ಹೇಳಲಾಗಿರುವಂತೆ ಹೂತು ಹಾಕಿದ್ದ ಅಸ್ಥಿಪಂಜರವೊಂದನ್ನು ಸಾಕ್ಷಿಯಾಗಿ ಹೊರತೆಗೆಯಲಾಗಿದ್ದು, ಅದನ್ನು ಬೆಳ್ತಂಗಡಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
Belthangady police station
ಬೆಳ್ತಂಗಡಿ ಪೊಲೀಸ್ ಸ್ಟೇಶನ್
Updated on

ಮಂಗಳೂರು: ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿರುವ ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ದೂರುದಾರನ ಹೇಳಿಕೆ ದಾಖಲು ಬೆನ್ನಲ್ಲೇ ಇದೀಗ ಬೆಳ್ತಂಗಡಿ ಪೊಲೀಸರು ಅಸ್ಥಿಪಂಜರಗಳ ಅವಶೇಷಗಳನ್ನು ವಶಪಡಿಸಿಕೊಂಡಿದ್ದಾರೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರಿನಲ್ಲಿ ಹೇಳಲಾಗಿರುವಂತೆ ಹೂತು ಹಾಕಿದ್ದ ಅಸ್ಥಿಪಂಜರವೊಂದನ್ನು ಸಾಕ್ಷಿಯಾಗಿ ಹೊರತೆಗೆಯಲಾಗಿದ್ದು, ಅದನ್ನು ಬೆಳ್ತಂಗಡಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಕಾನೂನು ಪ್ರಕಾರ ಎಲ್ಲ ಪ್ರಕ್ರಿಯೆಗಳನ್ನು ಪೂರೈಸಿ ನ್ಯಾಯಾಧೀಶರ ಎದುರು ಹೇಳಿಕೆ ನೀಡಲಾಗಿದೆ ಎಂದು 'ಧರ್ಮಸ್ಥಳ ದೂರುದಾರರ ಪರ ವಕೀಲ ಪವನ್ ಶ್ಯಾಮ್ ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಸಾಮೂಹಿಕವಾಗಿ ಹೂತು ಹಾಕಿದ ಆರೋಪ ಮಾಡಿರುವ ದೂರುದಾರನನ್ನು ಜುಲೈ 11ರಂದು ಬೆಳ್ತಂಗಡಿ ತಾಲ್ಲೂಕಿನ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ದೂರುದಾರ ಸಾಕ್ಷಿದಾರರು ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ತಿಳಿಸಿದ್ದಾರೆ. "ದೂರುದಾರ ಸಾಕ್ಷಿಯು ಸ್ವತಃ ಹೊರತೆಗೆದಿರುವುದಾಗಿ ಹೇಳಿಕೊಂಡ ಅಸ್ಥಿಪಂಜರದ ಅವಶೇಷಗಳನ್ನು ಸಹ ಹಾಜರುಪಡಿಸಿದರು ಮತ್ತು ದೂರುದಾರ ಸಾಕ್ಷಿಯ ವಕೀಲರು ಮತ್ತು ಪಂಚ ಸಾಕ್ಷಿಗಳ ಸಮ್ಮುಖದಲ್ಲಿ ಪೊಲೀಸರು ಅದನ್ನು ವಶಪಡಿಸಿಕೊಂಡಿದ್ದಾರೆ ಎಂದರು.

Belthangady police station
Dharmasthala ಹಲವು ಶವಗಳ ಅಂತ್ಯಕ್ರಿಯೆ ಕೇಸ್: ಬಿಗಿ ಭದ್ರತೆಯಲ್ಲಿ ಕೋರ್ಟ್ ಮುಂದೆ ಹೇಳಿಕೆ ದಾಖಲಿಸಿದ ಹೆಣಗಳ ಹೂತ್ತಿದ್ದ ವ್ಯಕ್ತಿ!

ನಿನ್ನೆ ಸಂಜೆ ಜಿಲ್ಲೆಯ ಸಕ್ಷಮ ಪ್ರಾಧಿಕಾರವು ಸಾಕ್ಷಿಗಳ ರಕ್ಷಣೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದಿಸಿದೆ ಎಂದು ಎಸ್ಪಿ ಹೇಳಿದರು.

"ಆದರೆ ದೂರುದಾರ ಸಾಕ್ಷಿಯ ಗುರುತಿನ ರಕ್ಷಣೆಗೆ ಸಂಬಂಧಿಸಿದಂತೆ, ದೂರುದಾರ ಸಾಕ್ಷಿಯನ್ನು ಪ್ರತಿನಿಧಿಸುವವರು ಸಾರ್ವಜನಿಕ ವೇದಿಕೆಗಳಲ್ಲಿ ಪ್ರಸಾರ ಮಾಡಿದ ಪತ್ರಿಕಾ ಟಿಪ್ಪಣಿ ಮತ್ತು ಎಫ್‌ಐಆರ್ ಪ್ರತಿ (ವಯಸ್ಸು; ಸ್ವರೂಪ, ಅವಧಿ, ಕೆಲಸದ ಸ್ಥಳ ಇತ್ಯಾದಿ) ಈಗಾಗಲೇ ಅನೇಕ ಸ್ಥಳೀಯರು ದೂರುದಾರ ಸಾಕ್ಷಿಯ ಗುರುತನ್ನು ಕಡಿಮೆ ಮಾಡಲು ಕಾರಣವಾಗಿದೆ.

ಆದಾಗ್ಯೂ, ಇದರ ಹೊರತಾಗಿಯೂ, ಎಲ್ಲಾ ಅಧಿಕೃತ ಉದ್ದೇಶಗಳಿಗಾಗಿ ಗುರುತನ್ನು ಬಹಿರಂಗಪಡಿಸದೆ ಇರಿಸಿಕೊಳ್ಳಲು ನಿರ್ಧರಿಸಲಾಯಿತು. ಈ ನಿಟ್ಟಿನಲ್ಲಿ ಬಂಟ್ವಾಳ ಡಿಎಸ್‌ಪಿ ಅವರು ಪ್ರತ್ಯೇಕ ವಿಚಾರಣೆಯನ್ನು ಪ್ರಾರಂಭಿಸಿದ್ದಾರೆ" ಎಂದು ಎಸ್ಪಿ ಹೇಳಿದರು.

ದೂರುದಾರ ಯಾವುದೇ ವಿಚಾರಣೆಗೆ ಸಿದ್ಧ

ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಕೀಲ ಪವನ್ ದೇಶಪಾಂಡೆ, 'ಹೆಣಗಳನ್ನು ಹೂತು ಹಾಕಿರುವ ಜಾಗಗಳನ್ನು ಸ್ಪಷ್ಟವಾಗಿ ದೂರುದಾರನು ಗುರುತಿಸಿ ತೋರಿಸಲು ಸಿದ್ಧನಿದ್ದಾನೆ. ಈ ಬಗ್ಗೆ ಪೊಲೀಸರು ಯಾವಾಗ ಬೇಕಾದರೂ ದಿನ ನಿಗದಿಪಡಿಸಿದ್ದರೂ ನಾವು ದೂರುದಾರನೊಂದಿಗೆ ಬಂದು ಸಹಕರಿಸಲಿದ್ದೇವೆ. ಘಟನೆಯ ಬಗ್ಗೆ ಮಾಹಿತಿಗಳನ್ನು ನೀಡಲಾಗಿದೆ.

ಸಾಕ್ಷ್ಯ ನಾಶವಾಗುವ ಆತಂಕವೂ ಇದ್ದು, ಸಾಧ್ಯವಾದಷ್ಟು ವೇಗವಾಗಿ ಇಲ್ಲಿ ಹೇಳಿಕೆ ನೀಡಿರುವ ವ್ಯಕ್ತಿ ಹೂತು ಹಾಕಿರುವ ಮೃತದೇಹಗಳನ್ನು ಹೊರತೆಗೆಯಲು ಕ್ರಮ ಕೈಗೊಳ್ಳಬೇಕಾದ ಜವಾಬ್ದಾರಿ ಪೊಲೀಸ್ ಇಲಾಖೆಯದ್ದು' ಎಂದು ಅವರು ಹೇಳಿದ್ದರು.

ಅಂತೆಯೇ ನ್ಯಾಯಾಲಯಲಯದಲ್ಲಿ ಹೇಳಿಕೆ ನೀಡಿರುವ ದೂರುದಾರನನ್ನು ಪೊಲೀಸರು ಬಂಧಿಸಿಲ್ಲ ಹಾಗೂ ಪೊಲೀಸ್ ಕಸ್ಟಡಿಗೆ ನೀಡಲಾಗಿಲ್ಲ. ಅವರು ನಮ್ಮೊಂದಿಗೆ ಇರುತ್ತಾರೆ. ಪೊಲೀಸರು ಯಾವಾಗ ಹಾಜರಾಗಲು ಸೂಚಿಸುತ್ತಾರೋ ಆಗ ಅವರನ್ನು ಹಾಜರುಪಡಿಸಲಾಗುವುದು ಎಂದು ವಕೀಲ ಪವನ್ ಶ್ಯಾಮ್ ಹೇಳಿದರು.

Belthangady police station
Dharmasthala: ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದೂರು ಕೊಟ್ಟಿದ್ದಾರೆ, ಶವಗಳ ಹೂತಿದ್ದೇನೆಂದ ಕಾರ್ಮಿಕನ ಹೇಳಿಕೆ ನಮಗೆ ಬೇಕು- ಗೃಹ ಸಚಿವ

ಆರೋಪಿ ಯಾರು?

ಇಡೀ ಪ್ರಕರಣದ ಆರೋಪಿ ಯಾರು ಎಂಬ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ವಕೀಲರು, ಈ ಬಗ್ಗೆ ನ್ಯಾಯಾಲಯಕ್ಕೆ ನೀಡಲಾಗಿರುವ ಹೇಳಿಕೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಅದನ್ನು ನಮಗೆ ನೀಡಿಲ್ಲ. ಅದು ನ್ಯಾಯಾಲಯದಲ್ಲಿ ಮತ್ತು ತನಿಖಾಧಿಕಾರಿಯವರ ಬಳಿ ಇದೆ ಎಂದು ಪ್ರತಿಕ್ರಿಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com