ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಡವಿನಕೊಡಿ ಗ್ರಾಮದಲ್ಲಿ ಕಾರ್ಯಕ್ರಮ ಮುಗಿಸಿ ವಾಪಸ್​ ಬೆಂಗಳೂರಿಗೆ ತೆರಳುವಾಗ ದುರಂತ ಸಂಭವಿಸಿದೆ.
Car after the accident
ಎಕ್ಸ್ ಪ್ರೆಸ್ ವೇಯಲ್ಲಿ ಅಪಘಾತಕ್ಕೆ ನಜ್ಜುಗುಜ್ಜಾದ ಕಾರು
Updated on

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಇಂದು ಭಾನುವಾರ ನಸುಕಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ತಡೆಗೋಡೆಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಬೆಳಗಿನ ಜಾವ ಘಟನೆ ನಡೆದಿದೆ. ಚಿಕ್ಕನಾಯಕಹಳ್ಳಿಯ ತಮ್ಮಣ್ಣಗೌಡ (56ವ), ಪುತ್ರ ಮುತ್ತುರಾಜ್ (28ವ) ಮತ್ತು ಹಾಸನ ಮೂಲದ ಚಾಲಕ ಸಚಿನ್ (27ವ) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಂಜು ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬೆಂಗಳೂರಿನಲ್ಲಿ ವಾಸವಾಗಿದ್ದರು. ಮಡವಿನಕೊಡಿ ಗ್ರಾಮದಲ್ಲಿ ಕಾರ್ಯಕ್ರಮ ಮುಗಿಸಿ ವಾಪಸ್​ ಬೆಂಗಳೂರಿಗೆ ತೆರಳುವಾಗ ದುರಂತ ಸಂಭವಿಸಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Car after the accident
ತಿರುಪತಿ ಬಳಿ ಭೀಕರ ಅಪಘಾತ: ಟೆಂಪೋ ಟ್ರಾವೆಲರ್ ಗೆ ಲಾರಿ ಡಿಕ್ಕಿ; ಕರ್ನಾಟಕದ ಮೂವರು ದುರ್ಮರಣ, 12 ಮಂದಿಗೆ ಗಾಯ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com