ನಾಳೆಯಿಂದ ಬೆಂಗಳೂರಿನಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಿಎಂಗಳು, ವಿವಿಧ ರಾಜ್ಯಗಳ ಹಾಲಿ ಮತ್ತು ಮಾಜಿ ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.
Representative Image
ಸಂಗ್ರಹ ಚಿತ್ರ
Updated on

ಬೆಂಗಳೂರು: ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಸಭೆ ಜುಲೈ 15 ಮತ್ತು 16 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಸೋಮವಾರ ತಿಳಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಿಎಂಗಳು, ವಿವಿಧ ರಾಜ್ಯಗಳ ಹಾಲಿ ಮತ್ತು ಮಾಜಿ ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.

ಜುಲೈ 15 ರಂದು ಸಂಜೆ 5 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಮತ್ತು ಜುಲೈ 16 ರಂದು ಬೆಳಿಗ್ಗೆ 10 ಗಂಟೆಗೆ ಹೋಟೆಲ್ ಶಾಂಗ್ರಿಲಾದಲ್ಲಿ ಸಭೆ ನಡೆಯಲಿದೆ ಎಂದು ಅದು ತಿಳಿಸಿದೆ.

ದೇಶದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಪರಿಹಾರ ಒದಗಿಸಲು ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಷ್ಟ್ರ ಮಟ್ಟದ ಸಲಹಾ ಮಂಡಳಿಯನ್ನು ಎಐಸಿಸಿ ರಚಿಸಿದೆ.

Representative Image
ಜಾತಿ ಗಣತಿ ಮರು ಸಮೀಕ್ಷೆ: ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ನಾಲ್ವರು ಸದಸ್ಯರ ನಾಮನಿರ್ದೇಶನ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಮಂಡಳಿಯ ರಚನೆಗೆ ಅನುಮೋದನೆ ನೀಡಿದ್ದು, ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಮತ್ತು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯಿಲಿ ಕೂಡ ಮಂಡಳಿಯಲ್ಲಿದ್ದಾರೆ. ನಾಲ್ವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಒಟ್ಟು 24 ಸದಸ್ಯರು ಈ ಮಂಡಳಿಯಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com