
ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. 40 ವರ್ಷದ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ. ಹಲಸೂರು ಕೆರೆಯ ಬಳಿ ಮನೆಯ ಮುಂದೆ ನಿಂತಿದ್ದಾಗಲೇ ನಾಲ್ಕೈದು ದುಷ್ಕರ್ಮಿಗಳ ತಂಡ ದಾಳಿ ಮಾಡಿ ಕೊಲೆಗೈದು ಪರಾರಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Advertisement