ಬೆಂಗಳೂರು: ರಸ್ತೆ ಬದಿ ಹೋಟೆಲ್ ಗೆ BMTC ಬಸ್ ಡಿಕ್ಕಿ; ಓರ್ವ ಸಾವು, ನಾಲ್ವರಿಗೆ ಗಾಯ

ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಪೀಣ್ಯದಲ್ಲಿ ನಡೆದಿದೆ. ಅಪಘಾತಕ್ಕೆ ಕಾರಣವೇನೆಂದು ಪೊಲೀಸರು ಇನ್ನೂ ಖಚಿತಪಡಿಸಿಲ್ಲ.
BMTc Bus
ಬಿಎಂಟಿಸಿ ಬಸ್
Updated on

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ ರಸ್ತೆಬದಿಯ ಹೊಟೆಲ್ ಗೆ ಡಿಕ್ಕಿ ಹೊಡೆದ ಪರಿಣಾಮ, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಇತರ ಐದು ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಪೀಣ್ಯದಲ್ಲಿ ನಡೆದಿದೆ. ಅಪಘಾತಕ್ಕೆ ಕಾರಣವೇನೆಂದು ಪೊಲೀಸರು ಇನ್ನೂ ಖಚಿತಪಡಿಸಿಲ್ಲ.

ಇತ್ತೀಚಿನ ದಿನಗಳಲ್ಲಿ ಬಿಎಂಟಿಸಿ ಬಸ್ ಅಪಘಾತಗಳು ಹೆಚ್ಚುಚ್ಚಿವೆ. ಜುಲೈ 2 ರಂದು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಬಳಿಯ ಜಿಗಣಿಯಲ್ಲಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಶಾಲಾ ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದ.

ಮುಖ್ಯ ರಸ್ತೆಯಿಂದ ಮಕ್ಕಳನ್ನು ಕರೆದುಕೊಂಡು ಹೋಗಲು ಶಾಲಾ ಬಸ್ ನಿಂತಿದ್ದಾಗ ಈ ಘಟನೆ ಸಂಭವಿಸಿತ್ತು. ಇಂತಹ ದುರಂತ ಘಟನೆಗಳು ಮರುಕಳಿಸದಂತೆ ಬಿಎಂಟಿಸಿ ಮತ್ತು ಸಂಚಾರ ಇಲಾಖೆಯವರು ಎಚ್ಚರಿಕೆ ವಹಿಸಬೇಕಾಗಿದೆ.

BMTc Bus
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಡ್ರೈವರ್ ಬದಲಿಗೆ ಕಂಡೆಕ್ಟರ್​ನಿಂದ ಬಸ್ ಚಾಲನೆ

ಘಟಕ 22ರ KA.51.AK.4170 ನಂಬರ್​ನ ಬಿಎಂಟಿಸಿ ಬಸ್​ ಪೀಣ್ಯ 2ನೇ ಹಂತದಿಂದ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಡ್ರೈವರ್ ಬದಲು ಕಂಡೆಕ್ಟರ್​ ಬಸ್ ಚಲಾಯಿಸಲು ಹೋಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಡ್ರೈವರ್ ಬದಲಾಗಿ ಕಂಡೆಕ್ಟರ್‌ ರಮೇಶ್ ಬಸ್ ಚಾಲನೆ ಮಾಡ್ತಿದ್ದರು. ಈ ವೇಳೆ ಬ್ರೇಕ್‌ ಬದಲು‌ ಎಕ್ಸಲೇಟರ್ ಒತ್ತಿದ ಪರಿಣಾಮ ಬಸ್ ಫುಟ್​ಪಾತ್​ಗೆ ನುಗ್ಗಿದೆ. ಈ ವೇಳೆ ರಸ್ತೆಯಲ್ಲಿ‌ ಹೋಗುತ್ತಿದ್ದ ಯುವತಿ ಬಸ್ ನಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಫುಟ್ ಪಾತ್ ನಲ್ಲಿದ್ದ ಬೀದಿ ಬದಿ ಹೋಟೆಲ್ ನಲ್ಲಿದ್ದ ಇಬ್ಬರು ಸೇರಿದಂತೆ ಐದು ಮಂದಿಗೆ ಗಾಯವಾಗಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಮೃತ ಯುವತಿಯನ್ನು 25 ವರ್ಷದ ಸುಮಾ ಎಂದು ಗುರುತಿಸಲಾಗಿದೆ. ಈ ಯುವತಿ ಹೆಬ್ಬಾಳದ ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸಕ್ಕೆ ಹೋಗ್ತಿದ್ದ ಸುಮಾಗೆ ಬಸ್ ಡಿಕ್ಕಿ ಹೊಡೆದಿದ್ದು, ಸಾವನ್ನಪ್ಪಿದ್ದ ಯುವತಿಯ ಮೃತದೇಹವನ್ನ ಖಾಸಗಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com