'ಮನೆ ಜಗಳ ಅಂತ ಕರೆದ್ರೆ.. 4 ಬಾರಿ Rape ಮಾಡಿದ ಪೊಲೀಸಪ್ಪ': ಮಹಿಳೆ ಗಂಭೀರ ಆರೋಪ!

ರಾಮನಗರದಲ್ಲಿ ಡಿಎಆರ್ ಪೇದೆಯೊಬ್ಬರ ವಿರುದ್ಧ ಮಹಿಳೆ ಅತ್ಯಾಚಾರದ ಆರೋಪ ಮಾಡಿದ್ದು, ಮಾತ್ರವಲ್ಲದೇ ತನ್ನಿಂದ 12 ಲಕ್ಷ ರೂ ಹಣ ಕೂಡ ಪಡೆದು ವಂಚಿಸಿದ್ದಾನೆ ಎಂದು ಆರೋಪಿಸಿದ್ದಾರೆ.
Rape case filled against 112 police constable in channapatna
ಸಾಂದರ್ಭಿಕ ಚಿತ್ರ
Updated on

ಚನ್ನಪಟ್ಟಣ: ಕುಟುಂಬದ ಗಲಾಟೆ ನಿಲ್ಲಿಸಲು ಬಂದ ಪೊಲೀಸ್ ಪೇದೆ ತನ್ನನ್ನು 4 ಬಾರಿ ಅತ್ಯಾಚಾರ ಮಾಡಿದ ಎಂದು ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

ಹೌದು.. ರಾಮನಗರದಲ್ಲಿ ಡಿಎಆರ್ ಪೇದೆಯೊಬ್ಬರ ವಿರುದ್ಧ ಮಹಿಳೆ ಅತ್ಯಾಚಾರದ ಆರೋಪ ಮಾಡಿದ್ದು, ಮಾತ್ರವಲ್ಲದೇ ತನ್ನಿಂದ 12 ಲಕ್ಷ ರೂ ಹಣ ಕೂಡ ಪಡೆದು ವಂಚಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಇದೀಗ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ಡಿಎಆರ್ ಪೇದೆ ಪುಟ್ಟಸ್ವಾಮಿ ವಿರುದ್ಧ ಈ ಗಂಭೀರ ಆರೋಪ ಕೇಳಿಬಂದಿದ್ದು, ಈತ 112 ವಾಹನದ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಚನ್ನಪಟ್ಟಣ ತಾಲ್ಲೂಕಿನ ಮಹಿಳೆಯೊಬ್ಬರನ್ನು ಅತ್ಯಾಚಾರ ಮಾಡಿ, ಮಹಿಳೆಯನ್ನ ಪುಸಲಾಯಿಸಿ 12 ಲಕ್ಷ ರೂ ಹಣ ಕೂಡಾ ಪಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Rape case filled against 112 police constable in channapatna
ಕರಡಿ ದಾಳಿ: ಗ್ರೀನ್ ಕಾರಿಡಾರ್ ಮೂಲಕ ಆಸ್ಪತ್ರೆಗೆ ಸಾಗಣೆ, ವೃದ್ಧ ವ್ಯಕ್ತಿಯ ಜೀವ ಉಳಿಸಿದ ಅರಣ್ಯಾಧಿಕಾರಿ..!

ಗಲಾಟೆ ಅಂತ 112ಗೆ ರೆ ಮಾಡಿದ್ದ ಮಹಿಳೆ

ಮೂಲಗಳ ಪ್ರಕಾರ ಯಾವುದೋ ಗಲಾಟೆ‌ ಪ್ರಕರಣ ಸಂಬಂಧ ಸಂತ್ರಸ್ಥ ಮಹಿಳೆ 112 ಗೆ ಕರೆ ಮಾಡಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ 112 ವಾಹನದ ಚಾಲಕ ಡಿಎಆರ್ ಪೇದೆ ಪುಟ್ಟಸ್ವಾಮಿ ಸಂತಸ್ಥ ಮಹಿಳೆಯ ಪರಿಚಯ ಮಾಡಿಕೊಂಡು ಸ್ನೇಹ ಬೆಳೆಸಿಕೊಂಡಿದ್ದ. ಬಳಿಕ ಆಕೆಯಿಂದ ಪೋನ್ ನಂಬರ್ ಪಡೆದು ಸಲುಗೆ ಬೆಳೆಸಿಕೊಂಡಿದ್ದ.

ಬಳಿಕೆ ಆಕೆಗೆ ಹತ್ತಿರವಾಗಿ ವಿವಿಧ ಸಂದರ್ಭಗಳಲ್ಲಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ರೀತಿ ಪೇದೆ ಪುಟ್ಟಸ್ವಾಮಿ ತನ್ನ ಮೇಲೆ ನಾಲ್ಕು ಬಾರಿ ಅತ್ಯಾಚಾರ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಅಲ್ಲದೆ ತನ್ನ ಬಳಿ ಸುಮಾರು 12 ರೂ ಹಣ ಪಡೆದು ಹಣವನ್ನೂ ನೀಡದ ಸತಾಯಿಸುತ್ತಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾಳೆ.

Rape case filled against 112 police constable in channapatna
7 ವರ್ಷಗಳ ಬಳಿಕ ಮತ್ತೆ ಕನ್ನಡ ಧ್ವಜಕ್ಕೆ ಹಕ್ಕು ಮಂಡಿಸಿದ ಸರ್ಕಾರ: ಕೇಂದ್ರಕ್ಕೆ ಸಚಿವ Shivaraj Thangadagi ಪತ್ರ!

ಈ ಬಗ್ಗೆ ಎಂ ಕೆ ದೊಡ್ಡಿ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಪೇದೆ ಪುಟ್ಟಸ್ವಾಮಿ ತಲೆಮರೆಸಿಕೊಂಡಿದ್ದಾನೆ. ಪ್ರಕರಣ ಸಂಬಂಧ ಈಗಾಗಲೇ ಎಸ್ ಪಿ ಶ್ರೀನಿವಾಸ್ ಗೌಡ ಪೇದೆಯನ್ನ ಅಮಾನತು ಮಾಡಿದ್ದಾರೆ. ಇನ್ನು ಪ್ರಕರಣ ತನಿಖೆ ಡಿಸಿ ಆರ್ ಇ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಜುಲೈ 3 ರಂದು ಪ್ರಕರಣ ದಾಖಲಾಗಿದ್ದು, ಈಗ ಪೇದೆ ತಲೆ ಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com