ಧರ್ಮಸ್ಥಳ ರಹಸ್ಯ ಅಂತ್ಯಕ್ರಿಯೆ ಪ್ರಕರಣ: SIT ತನಿಖೆಯಲ್ಲಿ ಸೌಜನ್ಯ ಕೇಸ್ ಸೇರ್ಪಡೆಯಿಲ್ಲ; ರಾಜ್ಯ ಸರ್ಕಾರ ಸ್ಪಷ್ಟನೆ

ಎಸ್ಐಟಿ ಸೌಜನ್ಯ ಪ್ರಕರಣವನ್ನು ತನಿಖೆ ನಡೆಸುವುದಿಲ್ಲ. ಇಲ್ಲಿ ಈಗ ದೂರು ನೀಡಿರುವ ಪ್ರಕರಣದ ಕುರಿತು ಮಾತ್ರ ತನಿಖೆಯಾಗುತ್ತದೆ. ಈ ಬಗ್ಗೆ ಎಸ್‌ಐಟಿ ರಚನೆ ವೇಳೆಯೇ ನಿಬಂಧನೆಗಳನ್ನೂ ತಿಳಿಸಿದ್ದೇವೆ.
Soujanya and minister parameshwar
ಮೃತ ಸೌಜನ್ಯ ಹಾಗೂ ಪರಮೇಶ್ವರ್
Updated on

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ಹೊಸದಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ)ದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸೇರಿಸಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ ಅವರು, ಎಸ್‌ಐಟಿಯ ಕಾರ್ಯಸೂಚಿಯಲ್ಲಿ ಸೌಜನ್ಯ ಪ್ರಕರಣ ಸೇರಿಲ್ಲ ಎಂದು ಸ್ಪಷ್ಟಪಡಿಸಿದರು.

ಧರ್ಮಸ್ಥಳ ಪ್ರಕರಣದಲ್ಲಿ ದೂರಿನ ಆಧಾರದ ಮೇಲೆ ಪ್ರಾಥಮಿಕ ತನಿಖೆ ನಡೆಸಬೇಕೆಂದು ಬಯಸಿದ್ದೆವು. ಅಗತ್ಯವಿದ್ದರೆ, ತನಿಖೆಯನ್ನು ಉನ್ನತ ತನಿಖಾ ಸಂಸ್ಥೆಗೆ ಹಸ್ತಾಂತರಿಸುತ್ತೇವೆಂದೂ ಹೇಳಿದ್ದೆವು. ಇದೀಗ ಮುಖ್ಯಮಂತ್ರಿ, ನಾನು ಮತ್ತು ಪೊಲೀಸ್ ಮಹಾನಿರ್ದೇಶಕರು ಎಸ್‌ಐಟಿ ರಚಿಸಲು ನಿರ್ಧರಿಸಿದ್ದೇವೆ. ಪ್ರಣಬ್ ಮೊಹಂತಿ ಹಿರಿಯ ಅಧಿಕಾರಿಯಾಗಿದ್ದು, ಕಾಲಕಾಲಕ್ಕೆ ಡಿಜಿ ಮತ್ತು ಐಜಿಪಿ ಸಲೀಂ ಅವರಿಗೆ ವರದಿ ಮಾಡುವ ಎಸ್‌ಐಟಿಯ ನೇತೃತ್ವ ವಹಿಸುತ್ತೇವೆ. ಅಂತಿಮ ವರದಿಯನ್ನು ಸಹ ಅವರಿಗೆ ಸಲ್ಲಿಸಲಾಗುತ್ತದೆ ಎಂದು ಹೇಳಿದರು.

ಒತ್ತಡದಿಂದ ಎಸ್ಐಟಿ ರಚಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಇದು ಯಾವುದೇ ಒತ್ತಡದಿಂದಾಗಿ ಮಾಡಿಲ್ಲ. ಪ್ರಕರಣದ ಸಾಧಕ-ಬಾಧಕಗಳನ್ನು ಮತ್ತು ಅದರ ಸ್ಥಿತಿಗತಿಗಳನ್ನು ನಾವು ನೋಡಬೇಕು. ಮೊದಲು ಪ್ರಾಥಮಿಕ ತನಿಖೆಯನ್ನು ಬಯಸುತ್ತೇವೆ. ಇದರಲ್ಲಿ ಮರೆಮಾಚುವ ಯಾವುದೇ ಪ್ರಶ್ನೆ ಇಲ್ಲ. ಪ್ರಾಥಮಿಕ ತನಿಖೆಗೆ ನಾವು ಸಮಯ ತೆಗೆದುಕೊಂಡಿದ್ದೇವೆ. ಅಂತಿಮ ವರದಿಯ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

Soujanya and minister parameshwar
Dharmasthala: 2003ರಲ್ಲಿ ನನ್ನ ಪುತ್ರಿ ನಿಗೂಢ ನಾಪತ್ತೆ; ಕಳೇಬರ ಸಿಕ್ಕರೆ ಬ್ರಾಹ್ಮಣಳಾಗಿ ಘನತೆಯಿಂದ ಅಂತ್ಯಕ್ರಿಯೆ ಮಾಡ್ತೀನಿ, 60 ವರ್ಷದ ತಾಯಿ ಮನವಿ!

ಧರ್ಮಸ್ಥಳ ಪ್ರಕರಣವನ್ನು ಸಣ್ಣ ದೂರು ಎಂದು ಅವರು ಭಾವಿಸಿಲ್ಲ. ಸಾಮಾನ್ಯವಾಗಿ ಯಾವುದೇ ಪ್ರಕರಣವಾದರೂ ಪೊಲೀಸ್ ಠಾಣೆ ಮಟ್ಟದಲ್ಲಿ, ಪ್ರಾಥಮಿಕ ತನಿಖೆ ಪ್ರಾರಂಭವಾಗುತ್ತದೆ. ಅದು ಬೆಳೆದಾಗ, ತನಿಖೆ ವಿಭಿನ್ನ ತಿರುವು ಪಡೆಯುತ್ತದೆ ಎಂದು ಹೇಳಿದರು.

ಎಸ್ಐಟಿ ಸೌಜನ್ಯ ಪ್ರಕರಣವನ್ನು ತನಿಖೆ ನಡೆಸುವುದಿಲ್ಲ. ಇಲ್ಲಿ ಈಗ ದೂರು ನೀಡಿರುವ ಪ್ರಕರಣದ ಕುರಿತು ಮಾತ್ರ ತನಿಖೆಯಾಗುತ್ತದೆ. ಈ ಬಗ್ಗೆ ಎಸ್‌ಐಟಿ ರಚನೆ ವೇಳೆಯೇ ನಿಬಂಧನೆಗಳನ್ನೂ ತಿಳಿಸಿದ್ದೇವೆಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com