ಹುಬ್ಬಳ್ಳಿ: ತಪ್ಪಿಸಿಕೊಳ್ಳಲು ಯತ್ನ, ಇಬ್ಬರು ದರೋಡೆಕೋರರ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ಇಬ್ಬರೂ ಆರೋಪಿಗಳು ರಾಜೀವ್ ಗಾಂಧಿ ನಗರದ ನಿವಾಸಿಗಳಾಗಿದ್ದು, ಸಂಘಟಿತ ದರೋಡೆಕೋರ ತಂಡದ ಭಾಗವಾಗಿದ್ದಾರೆ ಎನ್ನಲಾಗಿದೆ.
Representative Image
ಸಾಂದರ್ಭಿಕ ಚಿತ್ರ
Updated on

ಹುಬ್ಬಳ್ಳಿ/ಧಾರವಾಡ: ಪೊಲೀಸ್ ತರಬೇತಿ ಶಾಲೆಯ ಬಳಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರು ಶಂಕಿತ ದರೋಡೆಕೋರರ ಮೇಲೆ ಗುರುವಾರ ಬೆಳಗಿನ ಜಾವ ಗುಂಡು ಹಾರಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ.

ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಶಶಿಕುಮಾರ್ ಅವರ ಪ್ರಕಾರ, ಬುಧವಾರ ರಾತ್ರಿ ದೂರದರ್ಶನದ ಉದ್ಯೋಗಿಯೊಬ್ಬರು ತಮ್ಮ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಶಸ್ತ್ರಸಜ್ಜಿತ ದರೋಡೆಕೋರರು ಅವರನ್ನು ತಡೆದು ದರೋಡೆ ಮಾಡಲು ಪ್ರಯತ್ನಿಸಿದರು. ಅವರು ತಪ್ಪಿಸಿಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ.

ಪೊಲೀಸರು ಕಾರ್ಯಪ್ರವೃತ್ತರಾಗಿ ಆರೋಪಿಗಳಲ್ಲಿ ಒಬ್ಬನಾದ ಹುಸೇನ್‌ಸಾಬ್ ಕನವಳ್ಳಿ ಎಂಬಾತನನ್ನು ಬಂಧಿಸಿದ್ದಾರೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದಾದ್ಯಂತ 35ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಈತ ಬೇಕಾಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕನವಳ್ಳಿಯನ್ನು ವಿಚಾರಣೆ ನಡೆಸಿದ ನಂತರ ಪೊಲೀಸರು ಉಳಿದ ಗ್ಯಾಂಗ್ ಸದಸ್ಯರು ತಂಗಿರುವ ಜಾಗಕ್ಕೆ ತೆರಳಿದ ವೇಳೆ ಕನವಳ್ಳಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಂಡಿದ್ದಾನೆ ಎಂದು ವರದಿಯಾಗಿದೆ.

ನಂತರ ಇನ್ನಿಬ್ಬರು ಆರೋಪಿಗಳಾದ ವಿಜಯ್ ಅಣ್ಣಿಗೇರಿ ಮತ್ತು ಮುಜಮ್ಮಿಲ್ ಸೌದಾಗರ್ ಪರಾರಿಯಾಗಲು ಯತ್ನಿಸಿದ್ದಾರೆ. ಆಗ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮಲ್ಲಿಕಾರ್ಜುನ್ ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಶಶಿಕುಮಾರ್ ಹೇಳಿದರು.

Representative Image
ಜೈಲಿನಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ವ್ಯಕ್ತಿ ಕೊಲೆ; ಪರಾರಿ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಆರೋಪಿಗಳ ಕಾಲಿಗೆ ಗುಂಡೇಟು, ಬಂಧನ

ಇಬ್ಬರೂ ಆರೋಪಿಗಳು ರಾಜೀವ್ ಗಾಂಧಿ ನಗರದ ನಿವಾಸಿಗಳಾಗಿದ್ದು, ಸಂಘಟಿತ ದರೋಡೆಕೋರ ತಂಡದ ಭಾಗವಾಗಿದ್ದಾರೆ ಎನ್ನಲಾಗಿದೆ.

ಪೊಲೀಸರ ಕಣ್ಗಾವಲಿನಿಂದ ತಪ್ಪಿಸಿಕೊಳ್ಳಲು ಈ ಗ್ಯಾಂಗ್ ಫೋನ್ ಸಂಭಾಷಣೆಗಳನ್ನು ತಪ್ಪಿಸಿ ಇನ್‌ಸ್ಟಾಗ್ರಾಂ ಸಂದೇಶಗಳನ್ನು ಬಳಸಿಕೊಂಡು ತಮ್ಮ ಕಾರ್ಯಾಚರಣೆಗಳನ್ನು ಯೋಜಿಸುತ್ತಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ.

ಧಾರವಾಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಶಶಿಕುಮಾರ್, ಕಾರ್ಯಾಚರಣೆಯ ಸಮಯದಲ್ಲಿ ಗಾಯಗೊಂಡಿದ್ದ ಮಲ್ಲಿಕಾರ್ಜುನ್ ಮತ್ತು ಕಾನ್‌ಸ್ಟೆಬಲ್ ಇಶಾಕ್ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು. ಬಿಗಿ ಪೊಲೀಸ್ ಭದ್ರತೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಣ್ಣಿಗೇರಿ ಮತ್ತು ಸೌದಾಗರ್ ಅವರ ಬಗ್ಗೆಯೂ ಅವರು ವಿಚಾರಿಸಿದರು.

ದೂರದರ್ಶನ ಉದ್ಯೋಗಿಯಿಂದ ಮೂವರು ಬೈಕ್ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ ಮತ್ತು ಅವರ ಪ್ರಯತ್ನ ವಿಫಲವಾಯಿತು. ಅವರು ನೀಡಿದ ಸುಳಿವಿನ ಆಧಾರದ ಮೇಲೆ, ಧಾರವಾಡದ ಮೂರು ಠಾಣೆಗಳ ಪೊಲೀಸ್ ತಂಡಗಳು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ಕನವಳ್ಳಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು ಎಂದು ಶಶಿಕುಮಾರ್ ಹೇಳಿದರು.

ಆದರೆ, ಇತರ ಶಂಕಿತರನ್ನು ಗುರುತಿಸಲು ಅವರಿರುವ ಜಾಗಕ್ಕೆ ಕರೆದೊಯ್ಯುವಾಗ ಆತ ತಪ್ಪಿಸಿಕೊಂಡನು. ಆತನನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com