ಕಾರ್ಖಾನೆಗಾಗಿ ಬಲವಂತವಾಗಿ 12 ಸಾವಿರ ಎಕರೆ ಭೂಸ್ವಾಧೀನ: ಸೂಕ್ತ ಬೆಲೆ ನೀಡದೆ ವಂಚನೆ; ಕುಡತಿನಿ ರೈತರ ಆರೋಪ

ಆ ಸಮಯದಲ್ಲಿ, ಸಿದ್ದರಾಮಯ್ಯ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅನ್ಯಾಯವನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು. ಆದರೆ ಅವರು ಮುಖ್ಯಮಂತ್ರಿಯಾದ ನಂತರ ಕೊಟ್ಟ ಮಾತನ್ನು ಪಾಲಿಸುತ್ತಿಲ್ಲ.
File image
ಸಂಗ್ರಹ ಚಿತ್ರ
Updated on

ಬಳ್ಳಾರಿ: ಕುಡತಿನಿಯಲ್ಲಿ 'ಬಲವಂತವಾಗಿ' ಸ್ವಾಧೀನಪಡಿಸಿಕೊಂಡ 12,000 ಎಕರೆ ಭೂಮಿಗೆ ಸರಿಯಾದ ಬೆಲೆಯನ್ನು ನಿಗದಿಪಡಿಸುವಲ್ಲಿ ಸರ್ಕಾರವು 'ವಂಚಸಿದೆ' ಎಂದು ಭೂಮಿ ಕಳೆದುಕೊಳ್ಳುತ್ತಿರುವ ರೈತರು ಆರೋಪಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಅಧ್ಯಕ್ಷ ಯು ಬಸವರಾಜು, ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರವು ತಮ್ಮಿಂದ 'ವಂಚನೆಯಿಂದ' ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ಹೇಳಿದರು. "ಆ ಸಮಯದಲ್ಲಿ, ಸಿದ್ದರಾಮಯ್ಯ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅನ್ಯಾಯವನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು. ಆದರೆ ಅವರು ಮುಖ್ಯಮಂತ್ರಿಯಾದ ನಂತರ ಆ ಕೆಲಸ ಮಾಡುತ್ತಿಲ್ಲ ಎಂದು ದೂರಿದ್ದಾರೆ.

ನ್ಯಾಯಾಲಯಗಳು ರೈತರ ಪರವಾಗಿ ತೀರ್ಪು ನೀಡಿವೆ, ಎಕರೆಗೆ 1.2 ಕೋಟಿಯಿಂದ 1.5 ಕೋಟಿ ರೂ.ಗಳವರೆಗೆ ಪರಿಹಾರವನ್ನು ನಿಗದಿಪಡಿಸಿವೆ. ಸ್ವಾಧೀನಪಡಿಸಿಕೊಂಡ 12,000 ಎಕರೆಗಳಿಗೆ ರೈತರಿಗೆ ಸುಮಾರು 22,000 ಕೋಟಿ ರೂ. ನಷ್ಟವಾಗಿದೆ ಎಂದು ಬಸವರಾಜು ಹೇಳಿದರು.

ಮೂರು ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗಳಿಗಾಗಿ ಇಷ್ಟೊಂದು ಭೂಮಿಯನ್ನು ತೆಗೆದುಕೊಳ್ಳಲಾಗಿದೆ, ಆದರೆ ಅದಕ್ಕೆ 5,000 ರಿಂದ 6,000 ಎಕರೆ ಭೂಮಿ ಸಾಕು. ಹೀಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಯ ಶೇ. 50ರಷ್ಟನ್ನು ರೈತರಿಗೆ ಅಭಿವೃದ್ಧಿ ಹೊಂದಿದ ಭೂಮಿಯಾಗಿ ಹಿಂತಿರುಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮೊದಲು, ನಾವು ಶಾಸಕರ ಮನೆಗಳ ಮುಂದೆ ಪ್ರತಿಭಟನೆ ನಡೆಸುತ್ತೇವೆ. ಮುಂದಿನ ದಿನಗಳಲ್ಲಿ, ನಾವು ಬಳ್ಳಾರಿ ಬಂದ್‌ಗೆ ಕರೆ ನೀಡುತ್ತೇವೆ. ಮೂರನೇ ಹಂತವಾಗಿ 3,000 ರೈತರು ಬೆಂಗಳೂರಿಗೆ ಪಾದಯಾತ್ರೆ ನಡೆಸಲಿದ್ದಾರೆ, ಅಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಆಂದೋಲನ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಎನ್‌ಎಂಡಿಸಿ ಸ್ವಾಧೀನದಲ್ಲಿರುವ 2,800 ಎಕರೆ ಭೂಮಿಯಲ್ಲಿ ಉಕ್ಕಿನ ಕಾರ್ಖಾನೆ ಸ್ಥಾಪಿಸಬೇಕೆಂದು ಒತ್ತಾಯಿಸಿ ರೈತರು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸತ್ಯಬಾಬು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com