'ಹಿಂದೂ ವಿರೋಧಿ' ಆರೋಪ ಎದುರಿಸಲು ರಾಜ್ಯ ಸರ್ಕಾರದಿಂದ ಮೊದಲ ಮುಜರಾಯಿ ದೇವಸ್ಥಾನ ಸಭೆ!

ಹಿಂದೂ ದೇವಸ್ಥಾನಗಳ ಅಭಿವೃದ್ಧಿಗೆ ಮತ್ತು ಧಾರ್ಮಿಕ ಸಾಮರಸ್ಯವನ್ನು ಖಚಿತಪಡಿಸಿಕೊಳ್ಳಲು ತಮ್ಮ ಪಕ್ಷದ ಬದ್ಧತೆಯನ್ನು ಪುನರುಚ್ಚರಿಸಲು ಕಾಂಗ್ರೆಸ್ ನಾಯಕರಿಗೆ ಈ ಸಭೆ ಒಂದು ವೇದಿಕೆಯಾಗಿ ಕಾರ್ಯನಿರ್ವಹಿಸಿತು.
DK district in-charge minister Dinesh Gundu Rao inaugurates the meeting of muzrai temple committee members in Mangaluru on Friday
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಮಂಗಳೂರಿನಲ್ಲಿ ಮುಜರಾಯಿ ದೇವಾಲಯ ಸಮಿತಿ ಸದಸ್ಯರ ಸಭೆಯನ್ನು ಉದ್ಘಾಟಿಸಿದರು.
Updated on

ಮಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ "ಹಿಂದೂ ವಿರೋಧಿ" ಎಂಬ ಬಿಜೆಪಿಯ ಆರೋಪವನ್ನು ಎದುರಿಸಲು, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಮಂಗಳೂರಿನ ಕುದ್ಮುಲ್ ರಂಗರಾವ್ ಟೌನ್ ಹಾಲ್‌ನಲ್ಲಿ ರಾಜ್ಯದ ಮೊದಲ ಮುಜರಾಯಿ ದೇವಸ್ಥಾನ ನಿರ್ವಹಣಾ ಸಮಿತಿಗಳ ಸಭೆ ನಡೆಸಿದರು.

ಹಿಂದೂ ದೇವಸ್ಥಾನಗಳ ಅಭಿವೃದ್ಧಿಗೆ ಮತ್ತು ಧಾರ್ಮಿಕ ಸಾಮರಸ್ಯವನ್ನು ಖಚಿತಪಡಿಸಿಕೊಳ್ಳಲು ತಮ್ಮ ಪಕ್ಷದ ಬದ್ಧತೆಯನ್ನು ಪುನರುಚ್ಚರಿಸಲು ಕಾಂಗ್ರೆಸ್ ನಾಯಕರಿಗೆ ಈ ಸಭೆ ಒಂದು ವೇದಿಕೆಯಾಗಿ ಕಾರ್ಯನಿರ್ವಹಿಸಿತು.

"ಹಿಂದೂ ದೇವಸ್ಥಾನಗಳ ಹಣವನ್ನು ಮಸೀದಿಗಳು ಮತ್ತು ಚರ್ಚ್‌ಗಳ ಅಭಿವೃದ್ಧಿಗೆ ಬಳಸಲಾಗುತ್ತಿದೆ ಎಂದು ತಪ್ಪು ಮಾಹಿತಿಯನ್ನು ವ್ಯವಸ್ಥಿತವಾಗಿ ಹರಡಲಾಗುತ್ತಿದೆ. ಆದರೆ ಇದು ಸುಳ್ಳು" ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಕಾಂಗ್ರೆಸ್ ಸರ್ಕಾರವು ದೇವಾಲಯಗಳಿಗೆ ನೀಡಿದ ಐತಿಹಾಸಿಕ ಮತ್ತು ಆರ್ಥಿಕ ಬೆಂಬಲವನ್ನು ಎತ್ತಿ ತೋರಿಸಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ದೇವಾಲಯಗಳಿಗೆ ನೀಡಲಾಗುತ್ತಿದ್ದ ತಸ್ತಿಕ್ ಅನುದಾನವನ್ನು ಹಲವು ಪಟ್ಟು ಹೆಚ್ಚಿಸಲಾಗಿದೆ ಎಂದರು.

DK district in-charge minister Dinesh Gundu Rao inaugurates the meeting of muzrai temple committee members in Mangaluru on Friday
ನಾನು ಹಿಂದೂ ವಿರೋಧಿ ಅಲ್ಲ, ಅಯೋಧ್ಯೆಗೆ ಹೋಗಿ ರಾಮ ಮಂದಿರಕ್ಕೂ ಭೇಟಿ ನೀಡುತ್ತೇನೆ: ಸಿಎಂ ಸಿದ್ದರಾಮಯ್ಯ

ತಸ್ತಿಕ್ ಅನ್ನು 24,000 ರೂ.ಗಳಿಂದ 36,000 ರೂ.ಗಳಿಗೆ, ನಂತರ 48,000 ರೂ.ಗಳಿಗೆ ಮತ್ತು ಇತ್ತೀಚೆಗೆ 72,000 ರೂ.ಗಳಿಗೆ. ಹೆಚ್ಚಿಸಲಾಗಿದೆ. ಇನಾಂ ಭೂ ಅನುದಾನ ರದ್ದುಗೊಳಿಸಿದ ನಂತರ ಇದಕ್ಕೆ ಪರಿಹಾರವಾಗಿ ತಸ್ತಿಕ್ ವ್ಯವಸ್ಥೆಯನ್ನು ನಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಪರಿಚಯಿಸಿದರು ಎಂದು ಅವರು ಹೇಳಿದರು.

"ದೇವಾಲಯಗಳನ್ನು ರಾಜಕೀಯ ಉದ್ದೇಶಗಳಿಗಾಗಿ ದುರುಪಯೋಗಪಡಿಸಿಕೊಳ್ಳಬಾರದು. ಧರ್ಮದಲ್ಲಿ ರಾಜಕೀಯ ಬೆರೆಸುವುದು ಸುಲಭ. ಆದರೆ ಅದು ಅಪಾಯಕಾರಿ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ ಈ ಸ್ಥಳಗಳ ಪಾವಿತ್ರ್ಯವನ್ನು ರಕ್ಷಿಸುವುದು ದೇವಾಲಯ ನಿರ್ವಹಣಾ ಸಮಿತಿಗಳ ಜವಾಬ್ದಾರಿಯಾಗಿದೆ" ಎಂದು ತಿಳಿಸಿದರು.

ಸಭೆಯನ್ನು ಸಂಯೋಜಿಸಿದ್ದ ಎಂಎಲ್‌ಸಿ ಮಂಜುನಾಥ್ ಭಂಡಾರಿ, ರಾಜ್ಯ ಸರ್ಕಾರವು ಮುಜರಾಯಿ ದೇವಾಲಯ ಸಮಿತಿಗಳಿಗೆ 1,000 ಕ್ಕೂ ಹೆಚ್ಚು ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡಿದೆ. ಈ ಹುದ್ದೆಗಳನ್ನು ರಾಜಕೀಯಗೊಳಿಸಬಾರದು ಎಂದು ಒತ್ತಿ ಹೇಳಿದರು. ದೇವಾಲಯದ ಆದಾಯವನ್ನು ದೇವಾಲಯಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಕಟ್ಟುನಿಟ್ಟಾಗಿ ಬಳಸಲಾಗುತ್ತದೆ ಎಂಬ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರ ಸ್ಪಷ್ಟೀಕರಣವನ್ನು ಅವರು ಪುನರುಚ್ಚರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com