ಬೆಂಗಳೂರು: PSI ದರ್ಪಕ್ಕೆ ಶಾಶ್ವತ ಕಿವುಡನಾದ ಬಾಡಿಗೆದಾರ! ಪೊಲೀಸ್ ಆಯುಕ್ತರಿಗೆ ದೂರು

ಬೇಗೂರಿನಲ್ಲಿ ಈ ಘಟನೆ ನಡೆದಿದ್ದು, PSI ಪುನೀತ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಮನೆ ಖಾಲಿ ಮಾಡುವ ವಿಚಾರಕ್ಕೆ ಬಾಡಿಗೆದಾರ ಉದಯ್‌ ಮೇಲೆ ಪುನೀತ್ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
Uday and PSI Puneeth
ಬಾಡಿಗೆದಾರ ಉದಯ್ ಹಾಗೂ ಪಿಎಸ್ ಐ ಪುನೀತ್
Updated on

ಬೆಂಗಳೂರು: ನಗರದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರ ದರ್ಪಕ್ಕೆ ಬಾಡಿಗೆದಾರ ವ್ಯಕ್ತಿಯೋರ್ವ ಶಾಶ್ವತವಾಗಿ ಕಿವುಡನಾಗಿರುವ ಆರೋಪ ಕೇಳಿಬಂದಿದೆ.

ಬೇಗೂರಿನಲ್ಲಿ ಈ ಘಟನೆ ನಡೆದಿದ್ದು, PSI ಪುನೀತ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಮನೆ ಖಾಲಿ ಮಾಡುವ ವಿಚಾರಕ್ಕೆ ಬಾಡಿಗೆದಾರ ಉದಯ್‌ ಮೇಲೆ ಪುನೀತ್ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಪಿಎಸ್‌ಐ ಕಪಾಳ ಮೋಕ್ಷಕ್ಕೆ ಉದಯ್‌ಗೆ ಕಿವಿ ಕೇಳಿಸದೆ ಶ್ರವಣ ದೋಷವಾಗಿದೆ ಎಂಬುದು ವೈದ್ಯಕೀಯ ವರದಿಯಲ್ಲಿ ದೃಢವಾಗಿದೆ. ಉದಯ್ ಪರ ವಕೀಲರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಸಿವಿಲ್ ವ್ಯಾಜ್ಯದಲ್ಲಿ ಪೊಲೀಸರು ಮದ್ಯ ಪ್ರವೇಶ ಮಾಡಿದ್ದು, ಉದಯ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ. ವೈದ್ಯಕೀಯ ಪರೀಕ್ಷೆ ವೇಳೆ ಎಡಕಿವಿ ಸಂಪೂರ್ಣ ಶ್ರವಣ ದೋಷವಾಗಿರುವ ವರದಿ ಕೂಡ ದೂರಿನ ಜೊತೆ ಸಲ್ಲಿಸಲಾಗಿದೆ.

ಹಿರಿಯ ಅಧಿಕಾರಿಗಳಿಗೆ ದೂರು ನೀಡಿದರೂ ಪಿಎಸ್‌ಐ ಮೇಲೆ ಕ್ರಮ ಆಗದ ಹಿನ್ನೆಲೆಯಲ್ಲಿ ಉದಯ್ ನ್ಯಾಯಕ್ಕಾಗಿ ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ.

Uday and PSI Puneeth
ಆರೋಪಿ ಬಚಾವ್ ಮಾಡಲು ಲಂಚ: ಗೋವಿಂದಪುರ ಮಹಿಳಾ PSI ಲೋಕಾಯುಕ್ತ ಬಲೆಗೆ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com