Veeragallu
ವೀರಗಲ್ಲು

Kargil Vijay Diwas: ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ 75 ಅಡಿ ಎತ್ತರದ ಏಕಶಿಲಾ ವೀರಗಲ್ಲು ಅನಾವರಣ

ಇಡೀ ದೇಶದಲ್ಲಿ ಹುತಾತ್ಮ ಯೋಧರಿಗೆ ರಾಷ್ಟ್ರೀಯ ಸೈನಿಕ ಸ್ಮಾರಕ ನಿರ್ಮಿಸಿರುವ ಏಕೈಕ ರಾಜ್ಯ ಕರ್ನಾಟಕವಾಗಿದೆ.
Published on

ಬೆಂಗಳೂರು: ಕಾರ್ಗಿಲ್ ವಿಜಯ ದಿನಾಚರಣೆ ಹಿನ್ನೆಲೆ ರಾಜ್ಯ ರಾಜಧಾನಿಯಲ್ಲಿರುವ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಸ್ಥಾಪಿಸಿರುವ 75 ಅಡಿ ಎತ್ತರದ ಏಕಶಿಲಾ ‘ವೀರಗಲ್ಲು’ ಸ್ತಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಅನಾವರಣಗೊಳಿಸಿದರು.

ನಗರದ ಸೈನಿಕ ಮತ್ತು ಪುನರ್ವಸತಿ ಇಲಾಖೆ, ರಾಷ್ಟ್ರೀಯ ಸೈನಿಕ್ ಸ್ಮಾರಕ ಮ್ಯಾನೇಜ್‍ಮೆಂಟ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮದಲ್ಲಿ ದೇಶದ ಹೆಮ್ಮೆಯ ಸೈನಿಕರ ತ್ಯಾಗ-ಬಲಿದಾನದ ಸಂಕೇತವಾಗಿರುವ ಏಕಶಿಲಾ ‘ವೀರಗಲ್ಲು’ ಸ್ತಂಭವನ್ನು ಅನಾವರಣಗೊಳಿಸಿ ಹುತಾತ್ಮ ಯೋಧರಿಗೆ ಮುಖ್ಯಮಂತ್ರಿಗಳು ನಮನ ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ಹಿರಿಯ ಮಿಲಿಟರಿ ಅಧಿಕಾರಿಗಳು, ವೀರ ಯೋಧರು ಮತ್ತು ಹುತಾತ್ಮ ಯೋಧರ ಕುಟುಂಬಗಳು ಭಾಗವಹಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಡಿದ ಸೈನಿಕರಿಗೆ ಗೌರವ ಸಲ್ಲಿಸಿದರು ಮತ್ತು ರಾಷ್ಟ್ರದ ಗಡಿಗಳನ್ನು ರಕ್ಷಿಸುವಲ್ಲಿ ಅವರ ಕೊಡುಗೆಯನ್ನು ಶ್ಲಾಘಿಸಿದರು.

Veeragallu
ಚಿತ್ರದುರ್ಗ: ತಮಟಕಲ್ಲಿನಲ್ಲಿ 6ನೇ ಶತಮಾನದ ವೀರಗಲ್ಲು, ಪುರಾತನ ತಮಿಳು ಶಾಸನ ಮರುಸ್ಥಾಪನೆ!

ರಾಷ್ಟ್ರೀಯ ಮಿಲಿಟರಿ ಸ್ಮಾರಕದ ಹಿಂದಿನ ದಾರ್ಶನಿಕ ಏರ್ ಕಮಾಂಡರ್ ಚಂದ್ರಶೇಖರ್ (ನಿವೃತ್ತ) ಅವರನ್ನು ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಇಡೀ ದೇಶದಲ್ಲಿ ಹುತಾತ್ಮ ಯೋಧರಿಗೆ ರಾಷ್ಟ್ರೀಯ ಸೈನಿಕ ಸ್ಮಾರಕ ನಿರ್ಮಿಸಿರುವ ಏಕೈಕ ರಾಜ್ಯ ಕರ್ನಾಟಕವಾಗಿದೆ. ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಮತ್ತು ಗೌರವ ಸಲ್ಲಿಸಲು ನಿರ್ಮಾಣವಾಗಿರುವ 75 ಅಡಿ ಎತ್ತರ ಸುಮಾರು 400 ಟನ್ ತೂಕವುಳ್ಳ ಏಕಶಿಲ ‘ವೀರಗಲ್ಲು’ ಸ್ತಂಭ ಭಾರತೀಯ ಸೇನೆಯ ವೀರರಂತೆಯೇ ಅಚಲ, ಧೃಡ, ಅಮರ ಮತ್ತು ಎಲ್ಲ ನೈಸರ್ಗಿಕ ತಾಪಗಳನ್ನು ತಡೆದುಕೊಳ್ಳಬಲ್ಲಷ್ಟು ಶಕ್ತಿಶಾಲಿ ಆಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಫ್ಲೈಟ್ ಲೆಫ್ಟಿನೆಂಟ್ ಲೋಲಾಕ್ಷ ಮಾಡಾಳು ಶ್ರೀನಿವಾಸ, ಗೃಹ ಸಚಿವ ಜಿ. ಪರಮೇಶ್ವರ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕೂಡ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com