ಜಾತಿ ಗಣತಿ ಸಮೀಕ್ಷೆಗೆ ಶಿಕ್ಷಕರ ಬಳಕೆ: ಸಭಾಪತಿ ಬಸವರಾಜ ಹೊರಟ್ಟಿ ಬೇಸರ

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗದಿದ್ದರೆ. ಅದು 6 ರಿಂದ 14 ವರ್ಷ ವಯಸ್ಸಿನ ಎಲ್ಲಾ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಖಾತರಿಪಡಿಸುವ ಸಂವಿಧಾನದ 21 ಎ ವಿಧಿಯ ಉಲ್ಲಂಘನೆಯಾಗುತ್ತದೆ.
Basavaraj Horatti
ಬಸವರಾಜ ಹೊರಟ್ಟಿ
Updated on

ಹುಬ್ಬಳ್ಳಿ: ಜಾತಿ ಗಣತಿ ನಡೆಸಲು ಶಿಕ್ಷಕರನ್ನು ನಿಯೋಜಿಸುವುದಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ಅವರು, ಶಾಲಾ ಶಿಕ್ಷಣದ ಗುಣಮಟ್ಟ ಕುಸಿಯುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದ್ದು, ಇದಕ್ಕೆ ಶಿಕ್ಷಕರ ಮೇಲೆ ಶೈಕ್ಷಣಿಕೇತರ ಕರ್ತವ್ಯಗಳನ್ನು ಹೇರುತ್ತಿರುವುದು ಪ್ರಮುಖ ಕಾರಣಗಳಾಗಿದೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಮುಂಬರುವ ಜಾತಿ ಗಣತಿಗೆ ಶಾಲಾ ಶಿಕ್ಷಕರನ್ನು, ವಿಶೇಷವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರನ್ನು ನಿಯೋಜಿಸುವ ಸರ್ಕಾರದ ಕ್ರಮವನ್ನು ಅವರು ವಿರೋಧಿಸಿದ್ದಾರೆ, ಅಂತಹ ಪದ್ಧತಿಗಳು ವಿದ್ಯಾರ್ಥಿಗಳ ಶೈಕ್ಷಣಿಕ ಅಡಿಪಾಯಕ್ಕೆ ಹಾನಿ ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ.

ಶಿಕ್ಷಣ ಇಲಾಖೆಯ ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಶಾಸ್ತ್ರ ಉಪಕ್ರಮದ ಅಡಿಯಲ್ಲಿ ಯಾದಗಿರಿ ಜಿಲ್ಲೆಯಲ್ಲಿ ನಡೆಸಿದ ಅಧ್ಯಯನವನ್ನು ಉಲ್ಲೇಖಿಸಿರುವ ಅವರು, ಅನೇಕ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಇನ್ನೂ ಓದುವುದು, ಬರೆಯುವುದು ಮತ್ತು ಅಂಕಗಣಿತದಂತಹ ಮೂಲಭೂತ ಕೌಶಲ್ಯಗಳ ಕೊರತೆಯಿದೆ ಎಂಬುದು ಆಘಾತ ತಂದಿದೆ.

Basavaraj Horatti
ಸೆಪ್ಟೆಂಬರ್ 22ರಿಂದ ಜಾತಿ ಗಣತಿ ಮರು ಸಮೀಕ್ಷೆ; ಅಕ್ಟೋಬರ್ ಅಂತ್ಯದೊಳಗೆ ವರದಿ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ಪ್ರಾಥಮಿಕ ಶಾಲೆಯಲ್ಲಿ ಮೂಲಭೂತ ಸಾಕ್ಷರತೆಯನ್ನು ನಿರ್ಮಿಸುವಲ್ಲಿ ವಿಫಲವಾಗಿರುವುದು ಪ್ರಸ್ತುತ ವ್ಯವಸ್ಥೆಯ ಗಂಭೀರ ದೋಷವಾಗಿದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕನ್ನಡ ಅಥವಾ ಇಂಗ್ಲಿಷ್ ವರ್ಣಮಾಲೆ ತಿಳಿದಿಲ್ಲದಿದ್ದರೆ ಮತ್ತು ಮೂಲಭೂತ ಸಂಕಲನ ಅಥವಾ ವ್ಯವಕಲನವನ್ನು ಸಹ ಮಾಡಲು ಸಾಧ್ಯವಾಗದಿದ್ದರೆ ಇದಕ್ಕೆ ಹೊಣೆಗಾರರು ಯಾರು? ಎಂದು ಪ್ರಶ್ನಿಸಿದ್ದಾರೆ.

ಸಮೀಕ್ಷೆಗಳು, ಜನಗಣತಿ ಕೆಲಸ ಮತ್ತು ಚುನಾವಣಾ ಕರ್ತವ್ಯಗಳಂತಹ ಬೋಧಕೇತರ ಕೆಲಸಗಳಿಗೆ ಪದೇ ಪದೇ ಶಿಕ್ಷಕರನ್ನು ಎಳೆತರುತ್ತಿರುವುದು ಬೋಧನೆಯತ್ತ ಗಮನಹರಿಸಲು ಅವರಿಗೆ ಸಾಧ್ಯವಿಲ್ಲದಂತೆ ಮಾಡುತ್ತಿದೆ.

ಜಾತಿ ಸಮೀಕ್ಷೆಗಳು, ಮೌಲ್ಯಮಾಪನಗಳು, ಮಕ್ಕಳ ಎಣಿಕೆ, ಮತಗಟ್ಟೆ ಅಧಿಕಾರಿ ಕರ್ತವ್ಯಗಳು ಮತ್ತು ಇನ್ನೂ ಹೆಚ್ಚಿನದನ್ನು ನಿರ್ವಹಿಸಲು ಶಿಕ್ಷಕರನ್ನು ಒತ್ತಾಯಿಸಲಾಗುತ್ತದೆ. ಇದೆಲ್ಲದರ ಜೊತೆಗೆ ಅವರ ಮಕ್ಕಳಿಗೆ ವಿದ್ಯಾಭ್ಯಾಸ ಹೇಳಿಕೊಡುವುದು ಯಾವಾಗ? ಎಂದು ಪ್ರಶ್ನಿಸಿದ್ದಾರೆ.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗದಿದ್ದರೆ. ಅದು 6 ರಿಂದ 14 ವರ್ಷ ವಯಸ್ಸಿನ ಎಲ್ಲಾ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಖಾತರಿಪಡಿಸುವ ಸಂವಿಧಾನದ 21 ಎ ವಿಧಿಯ ಉಲ್ಲಂಘನೆಯಾಗುತ್ತದೆ. ಹೀಗಾಗಿ ಶಿಕ್ಷಕರನ್ನು ಶೈಕ್ಷಣಿಕೇತರ ಕರ್ತವ್ಯಗಳಿಂದ ತಕ್ಷಣವೇ ಮುಕ್ತಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com