RDPR ಇಲಾಖೆ ಅಧಿಕಾರಿ, ನೌಕರರ ಬಡ್ತಿಯಲ್ಲಿ ಮೀಸಲಾತಿ: ಸಚಿವ ಹೆಚ್.ಸಿ ಮಹದೇವಪ್ಪ

ಬುದ್ಧ, ಬಸವಣ್ಣನ ಆಳ್ವಿಕೆಯಲ್ಲಿ ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಇತ್ತು, ಅದು ಎಲ್ಲಾ ವರ್ಗಗಳನ್ನು ಒಟ್ಟುಗೂಡಿಸಿತ್ತು. ಆರ್‌ಡಿಪಿಆರ್ ಸಿಬ್ಬಂದಿ ಕೂಡ ಗ್ರಾಮ ಸ್ವರಾಜ್‌ಗಾಗಿ ಕೆಲಸ ಮಾಡಬೇಕು.
HC Mahadevappa
ಎಚ್ ಸಿ ಮಹದೇವಪ್ಪ
Updated on

ಮೈಸೂರು: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯಲ್ಲಿ ಸೇವೆ ಸಲ್ಲಿಸಿರುವ ಅಧಿಕಾರಿಗಳು ಹಾಗೂ ನೌಕರರ ಬಡ್ತಿಯಲ್ಲಿ ಮೀಸಲಾತಿ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್‌ಸಿ ಮಹದೇವಪ್ಪ ಅವರು ಶನಿವಾರ ಭರವಸೆ ನೀಡಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕಲ್ಯಾಣ ಸಂಘ ಹಾಗೂ ನೌಕರರ ಸಮಾವೇಶ ಇಲ್ಲಿನ ಮಾನಸಗಂಗೋತ್ರಿಯ ಸೆನೆಟ್‌ ಭವನದಲ್ಲಿ ಶನಿವಾರ ಅದ್ದೂರಿಯಾಗಿ ನಡೆಯಿತು.

ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಚಿವ ಮಹದೇವಪ್ಪ ಅವರು, ಬಡ್ತಿಯನ್ನು ಪರಿಶೀಲಿಸಲು ಸಮಿತಿಯಿ ಇದೆ. ಸಮಾಜ ಕಲ್ಯಾಣ ಇಲಾಖೆಯಲ್ಲಿ ಬಡ್ತಿಗಳಲ್ಲಿ ಮೀಸಲಾತಿಯನ್ನು ಮೇಲ್ವಿಚಾರಣೆ ಮಾಡುವ ಜಾಗೃತ ಸಮಿತಿಯೂ ಇದೆ ಎಂದು ಹೇಳಿದರು.

ಬುದ್ಧ, ಬಸವಣ್ಣನ ಆಳ್ವಿಕೆಯಲ್ಲಿ ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಇತ್ತು, ಅದು ಎಲ್ಲಾ ವರ್ಗಗಳನ್ನು ಒಟ್ಟುಗೂಡಿಸಿತ್ತು. ಆರ್‌ಡಿಪಿಆರ್ ಸಿಬ್ಬಂದಿ ಕೂಡ ಗ್ರಾಮ ಸ್ವರಾಜ್‌ಗಾಗಿ ಕೆಲಸ ಮಾಡಬೇಕು. ಗ್ರಾಮಗಳಲ್ಲಿ ಉತ್ಪಾದನೆ ಮತ್ತು ಆದಾಯವನ್ನು ಹೆಚ್ಚಿಸುವ ಮೂಲಕ ಸ್ವಾವಲಂಬಿಗಳಾಗಬೇಕೆಂಬ ಗಾಂಧೀಜಿಯವರ ಆಶಯವನ್ನು ನನಸಾಗಿಸಬೇಕು ಎಂದು ತಿಳಿಸಿದರು.

ಆಗಿನ ಆರ್‌ಡಿಪಿಆರ್ ಸಚಿವ ಅಬ್ದುಲ್ ನಸೀರ್ ಸಾಬ್ ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತಂದರು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಸುಧಾರಣೆಗಳನ್ನು ತರಲು ಮೂರು ಹಂತದ ವ್ಯವಸ್ಥೆಯನ್ನು ತರಲು 73 ನೇ ತಿದ್ದುಪಡಿ ತಂದರು ಎಂದರು.

HC Mahadevappa
SCSP-TSP ಅನುಷ್ಠಾನದಲ್ಲಿ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ಮಹದೇವಪ್ಪ ಎಚ್ಚರಿಕೆ

ಇದೇ ವೇಳೆ ಗ್ರಾಮ ಸಭೆಗಳಲ್ಲಿ ಆರೋಗ್ಯಕರ ಚರ್ಚೆ ನಡೆಯದಿರುವ ಕುರಿತು ವಿಷಾದ ವ್ಯಕ್ತಪಡಿಸಿದ ಸಚಿವರು, ಫಲಾನುಭವಿಗಳನ್ನು ಆಯ್ಕೆ ಮಾಡಲು ಗ್ರಾಮ ಸಭೆಗಳನ್ನು ನಡೆಸಬೇಕು ಮತ್ತು ಸದಸ್ಯರು ಜಾತಿ ಮತ್ತು ಪಕ್ಷವನ್ನು ಮೀರಿ ಮೇಲೇರಬೇಕು ಎಂದು ಹೇಳಿದರು.

ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅವರು ಮಾತನಾಡಿ, ಜಾತಿ ಜನಗಣತಿ ಪೂರ್ಣಗೊಂಡ ನಂತರ ಮೀಸಲಾತಿ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸಲಾಗುವುದು ಎಂದು ಹೇಳಿದರು.

ಸಮಾಜದಲ್ಲಿ ತಾರತಮ್ಯವಿದ್ದು, ಇದು ಶೋಷಿತ ವರ್ಗಗಳು ತಮ್ಮ ಸಾಂವಿಧಾನಿಕ ಹಕ್ಕುಗಳಿಗಾಗಿ ಹೋರಾಡುವಂತೆ ಮಾಡಿದೆ, ಭವಿಷ್ಯದ ಪೀಳಿಗೆಗಳು ಜೀವನದಲ್ಲಿ ಎತ್ತರಕ್ಕೆ ಏರಲು ಶಿಕ್ಷಣ ಪಡೆಯಬೇಕೆಂದು ಒತ್ತಾಯಿಸಿದರು.

ಯಾವುದೇ ಒತ್ತಡಕ್ಕೆ ಮಣಿಯದೆ ಮತ್ತು ಎಸ್‌ಸಿ/ಎಸ್‌ಟಿಗಳಿಗೆ ಬಡ್ತಿಯಲ್ಲಿ ಮೀಸಲಾತಿಯನ್ನು ಪರಿಚಯಿಸಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇದೇ ವೇಳೆ ಶ್ಲಾಘಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com