ಕರಾವಳಿ ಭಾಗದಲ್ಲಿ ಭಾರಿ ಮಳೆ; ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ

ಪೊಲೀಸರ ಪ್ರಕಾರ, ಭಾರಿ ವಾಹನಗಳನ್ನು ಲಭ್ಯವಿರುವ ರಾಜ್ಯ ಹೆದ್ದಾರಿಗಳ ಮೂಲಕ ಮತ್ತು ಸಣ್ಣ ವಾಹನಗಳನ್ನು ಪ್ರಮುಖ ಜಿಲ್ಲಾ ರಸ್ತೆಗಳ ಮೂಲಕ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ.
Representative Image
ಪ್ರಾತಿನಿಧಿಕ ಚಿತ್ರ
Updated on

ಮಂಗಳೂರು: ಕಡಬ ತಾಲ್ಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಭಾನುವಾರ ತಡರಾತ್ರಿ ಭಾರಿ ಭೂಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ನಂತರ, ಪೊಲೀಸರು ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಹಲವಾರು ರಸ್ತೆಗಳ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಮಣ್ಣು ಕುಸಿತಗೊಂಡಿದ್ದ ರಸ್ತೆಯನ್ನು ಮುಚ್ಚಲಾಗಿದೆ. ಹೆದ್ದಾರಿಯಲ್ಲಿನ ಮಣ್ಣನ್ನು ತೆರವುಗೊಳಿಸಲು ಕೆಲಸ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಭಾರಿ ವಾಹನಗಳನ್ನು ಲಭ್ಯವಿರುವ ರಾಜ್ಯ ಹೆದ್ದಾರಿಗಳ ಮೂಲಕ ಮತ್ತು ಸಣ್ಣ ವಾಹನಗಳನ್ನು ಪ್ರಮುಖ ಜಿಲ್ಲಾ ರಸ್ತೆಗಳ ಮೂಲಕ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ.

ಇದೀಗ ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಯಾಣಿಕರು ಒಳ ರಸ್ತೆಗಳಲ್ಲಿ ಪ್ರಯಾಣಿಸಲು ತೆಗೆದುಕೊಳ್ಳುವ ಸಮಯವನ್ನು ಕಡಿಮೆ ಮಾಡಿದೆ.

Representative Image
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಭೂಕುಸಿತ: ಸಂಚಾರ ಬಂದ್

ಮಣ್ಣು ಕುಸಿತಗೊಂಡಿರುವ ಪ್ರದೇಶದಲ್ಲಿ ಭಾರಿ ವಾಹನಗಳನ್ನು ತಡೆಹಿಡಿಯಲಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿನ ಮಣ್ಣು ತೆರವುಗೊಂಡ ನಂತರವೇ ಅವುಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com