ಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ ಸ್ಥಳಗಳಿಂದ ಶವಗಳನ್ನು ಹೊರತೆಗೆಯುವ ಪ್ರಕ್ರಿಯೆ ಆರಂಭಿಸಿದ SIT; Video

ಸಮಾಧಿಯನ್ನು ಅಗೆಯುವ ಮುನ್ನ, ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಯಲ್ಲಿ ಡಿಐಜಿ ಎಂ ಎನ್ ಅನುಚೇತ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
witness-complainant in Dharmasthala mass burial case.
ಧರ್ಮಸ್ಥಳ ಪ್ರಕರಣದ ಸಾಕ್ಷಿ-ದೂರುದಾರ
Updated on

ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ-ದೂರುದಾರರು ಗುರುತಿಸಿದ ಸ್ಥಳಗಳಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಶವಗಳನ್ನು ಹೊರತೆಗೆಯುವ ಕಾರ್ಯವನ್ನು ಆರಂಭಿಸಿದೆ.

ಸಮಾಧಿಯನ್ನು ಅಗೆಯುವ ಮುನ್ನ, ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಯಲ್ಲಿ ಡಿಐಜಿ ಎಂ ಎನ್ ಅನುಚೇತ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ದೂರುದಾರರು ಮೊದಲು ಗುರುತಿಸಿದ ನೇತ್ರಾವತಿ ಸ್ನಾನಘಟ್ಟದ ಪಕ್ಕದಲ್ಲಿನ ಸ್ಥಳಕ್ಕೆ ಕಾರ್ಮಿಕರನ್ನು ಕರೆದೊಯ್ಯಲಾಯಿತು. ಪ್ರಕರಣದ ತನಿಖಾಧಿಕಾರಿಯೂ ಆಗಿರುವ ಅಂತರರಾಷ್ಟ್ರೀಯ ಭದ್ರತಾ ವಿಭಾಗದ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ, ಪುತ್ತೂರು ಸಹಾಯಕ ಆಯುಕ್ತ (ಎಸಿ) ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸನಿಕಂ ಸೇರಿದಂತೆ ಎಸ್‌ಐಟಿ ಅಧಿಕಾರಿಗಳು ದೂರುದಾರರನ್ನು ಸ್ಥಳಕ್ಕೆ ಕರೆದೊಯ್ದರು. ವಿಧಿವಿಜ್ಞಾನ ಪ್ರಯೋಗಾಲಯ ಮತ್ತು ಅಪರಾಧದ ದೃಶ್ಯ (SOCO) ಅಧಿಕಾರಿಗಳು ಹಾಜರಿದ್ದರು. ಎಸ್‌ಐಟಿ ತನಿಖಾಧಿಕಾರಿಗಳು ಸಮಾಧಿಯನ್ನು ಅಗೆಯುವ ಸಂಪೂರ್ಣ ಪ್ರಕ್ರಿಯೆಯನ್ನು ವಿಡಿಯೋ ರೆಕಾರ್ಡ್ ಮಾಡುತ್ತಿದ್ದಾರೆ.

ಸಮಾಧಿ ಅಗೆಯುವ ಕಾರ್ಯ ಆರಂಭಿಸಿದ ಎಸ್ಐಟಿ
ಸಮಾಧಿ ಅಗೆಯುವ ಕಾರ್ಯ ಆರಂಭಿಸಿದ ಎಸ್ಐಟಿ

'ಮೊದಲ ಸ್ಥಳದಲ್ಲಿನ ಫಲಿತಾಂಶದ ಆಧಾರದ ಮೇಲೆ ದೂರುದಾರರ ಹೇಳಿಕೆಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತೇವೆ. ಇಲ್ಲದಿದ್ದರೆ, ದೂರುದಾರರು 13 ಸ್ಥಳಗಳನ್ನು ಗುರುತಿಸಿರುವುದರಿಂದ ನಾವು ಅಲ್ಲಿಯೂ ಸಮಾಧಿಯನ್ನು ಅಗೆಯಲು ಕ್ರಮ ಕೈಗೊಳ್ಳುತ್ತೇವೆ. ನಮಗೆ ತಿಳಿದುಕೊಳ್ಳುವ ಕುತೂಹಲವೂ ಇದೆ. ಈ ಸ್ಥಳದಲ್ಲಿ ಸಮಾಧಿ ಅಗೆಯುವ ಪ್ರಕ್ರಿಯೆ ಪೂರ್ಣಗೊಂಡ ನಂತರ ಅವರು ಹೇಳಿದ ಇತರ ಸ್ಥಳಗಳ ಪರಿಶೀಲನೆ ಮಾಡಲಾಗುವುದು' ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

witness-complainant in Dharmasthala mass burial case.
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಶವಗಳ ಹೂತಿದ್ದ 13 ಜಾಗ ತೋರಿಸಿದ ದೂರುದಾರ; Video

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಿರ್ಣಾಯಕ ಹಂತವನ್ನು ತಲುಪಿದ್ದು, ವಿಶೇಷ ತನಿಖಾ ತಂಡ (SIT) ಸೋಮವಾರ ಸಾಕ್ಷಿ-ದೂರುದಾರರನ್ನು ಸ್ಥಳಕ್ಕೆ ಕರೆದೊಯ್ದು ಶವಗಳನ್ನು ಹೂತಿರುವ ಅಥವಾ ದಹನ ಮಾಡಿದ್ದಾರೆ ಎಂದು ಹೇಳಿರುವ 13 ಸ್ಥಳಗಳನ್ನು ಗುರುತಿಸಿದೆ.

ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಭಾರಿ ಭದ್ರತೆಯ ನಡುವೆ ಸಮಾಧಿ ಸ್ಥಳಗಳ ಪರಿಶೀಲನೆ ನಡೆಸಿತು. ಮೊದಲು ಅವರನ್ನು ನೇತ್ರಾವತಿ ಸ್ನಾನಘಟ್ಟ ಪ್ರದೇಶಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಅವರು ಪ್ರಕರಣಕ್ಕೆ ಸಂಬಂಧಿಸಿದ ಸ್ಥಳವನ್ನು ತೋರಿಸಿದರು. ನಂತರ ಅವರು ಎಸ್‌ಐಟಿ ಅಧಿಕಾರಿಗಳನ್ನು ನೇತ್ರಾವತಿ ನದಿಯ ಪಕ್ಕದಲ್ಲಿರುವ ಪೊದೆಗಳು ಮತ್ತು ಮರಗಳಿಂದ ದಟ್ಟವಾಗಿ ಆವೃತವಾದ ಪ್ರದೇಶಕ್ಕೆ ಕರೆದೊಯ್ದರು. ಎಸ್ಐಟಿ ಜೊತೆಗೆ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಂಡ, ಕಂದಾಯ ಮತ್ತು ಅರಣ್ಯ ಇಲಾಖೆಗಳ ಅಧಿಕಾರಿಗಳು ಮತ್ತು ಭೂ ದಾಖಲೆ ವಿಭಾಗದ ಸಿಬ್ಬಂದಿ ಕೂಡ ಇದ್ದರು.

ಸಾಕ್ಷಿ ದೂರುದಾರರನ್ನು ಸಮಾಧಿ ಸ್ಥಳಕ್ಕೆ ಕರೆದೊಯ್ದ ಎಸ್ಐಟಿ
ಸಾಕ್ಷಿ ದೂರುದಾರರನ್ನು ಸಮಾಧಿ ಸ್ಥಳಕ್ಕೆ ಕರೆದೊಯ್ದ ಎಸ್ಐಟಿ

ತಪಾಸಣೆಯ ಸಮಯದಲ್ಲಿ ನೇತ್ರಾವತಿ ನದಿ ದಂಡೆಯ ಬಂಗ್ಲೆಗುಡ್ಡೆ ಮತ್ತು ಹೆದ್ದಾರಿ ಬದಿಯಲ್ಲಿ ಸೇರಿದಂತೆ 13 ಸ್ಥಳಗಳನ್ನು ಗುರುತಿಸಲಾಯಿತು. ಪ್ರತಿ ಸ್ಥಳದಲ್ಲಿ ಇಬ್ಬರು ನಕ್ಸಲ್ ವಿರೋಧಿ ಪಡೆ (ANF) ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆಪಾದಿತ ಸ್ಥಳಗಳ ವಿಡಿಯೋ ರೆಕಾರ್ಡ್ ಮಾಡಲು ಡ್ರೋನ್ ಬಳಸಲಾಯಿತು.

ಮಾಜಿ ಪೌರ ಕಾರ್ಮಿಕರಾಗಿರುವ ದೂರುದಾರರು ಜುಲೈ 3 ರಂದು ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಬಲಿಯಾದವರ ಶವಗಳನ್ನು ಹೂಳಲು ನನ್ನನ್ನು ಒತ್ತಾಯಿಸಲಾಗಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ ಧರ್ಮಸ್ಥಳ ಪೊಲೀಸರು ಜುಲೈ 4 ರಂದು ಪ್ರಕರಣ ದಾಖಲಿಸಿದ್ದರು. ಜುಲೈ 19 ರಂದು ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿತು.

ಸಾಕ್ಷಿ ದೂರುದಾರರು ತಾವೇ ಅಸ್ಥಿಪಂಜರಗಳನ್ನು ಹೊರತೆಗೆದಿರುವುದಾಗಿ ಹೇಳಿಕೊಂಡಿರುವ ಸ್ಥಳವನ್ನು ಇನ್ನೂ ತೋರಿಸಿಲ್ಲ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ಸಾಕ್ಷಿ-ದೂರುದಾರ ಗುರುತಿಸಿರುವ ಸಮಾಧಿ ಸ್ಥಳಗಳಿಗೆ ಭದ್ರತೆ
ಸಾಕ್ಷಿ-ದೂರುದಾರ ಗುರುತಿಸಿರುವ ಸಮಾಧಿ ಸ್ಥಳಗಳಿಗೆ ಭದ್ರತೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com