ರಸಗೊಬ್ಬರ ಕೊರತೆ: ಕೇಂದ್ರಕ್ಕೆ ಆರು ಪತ್ರ ಬರೆದಿದ್ದೇವೆ; ರಾಜ್ಯ ಕೃಷಿ ಇಲಾಖೆ ಮಾಹಿತಿ

ವಾರಕ್ಕೊಮ್ಮೆ ನಡೆಯುವ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿಯೂ ಸಹ, ಅಧಿಕಾರಿಗಳು ಕೇಂದ್ರದ ಅಧಿಕಾರಿಗಳನ್ನು ಯೂರಿಯಾ ಮತ್ತು ಇತರ ರಸಗೊಬ್ಬರಗಳನ್ನು ಪೂರೈಸುವಂತೆ ವಿನಂತಿಸಿದ್ದಾರೆ ಎಂದು ಇಲಾಖೆ ತಿಳಿಸಿದೆ.
Representational image
ಸಂಗ್ರಹ ಚಿತ್ರ
Updated on

ಬೆಂಗಳೂರು: ರಸಗೊಬ್ಬರ ಸಮಸ್ಯೆಗೆ ಸಂಬಂಧಿಸಿದಂತೆ ವಿರೋಧ ಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದೆ, ಇದೇ ವೇಳೆ ಏಪ್ರಿಲ್‌ನಿಂದ ರಸಗೊಬ್ಬರ ಇಲಾಖೆಗೆ ಅಗತ್ಯವಿರುವ ಡಿಎಪಿ ಮತ್ತು ಯೂರಿಯಾ ರಸಗೊಬ್ಬರಗಳನ್ನು ಪೂರೈಸುವಂತೆ ಕೋರಿ ಆರು ಪತ್ರಗಳನ್ನು ಬರೆದಿರುವುದಾಗಿ ರಾಜ್ಯಕೃಷಿ ಇಲಾಖೆ ತಿಳಿಸಿದೆ.

ಕೃಷಿ ಇಲಾಖೆಯು ಪತ್ರಗಳನ್ನು ಬರೆದಿರುವುದಾಗಿ ಹೇಳಿಕೊಂಡಿದೆ. ಇದರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ವಾರಕ್ಕೊಮ್ಮೆ ನಡೆಯುವ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿಯೂ ಸಹ, ಅಧಿಕಾರಿಗಳು ಕೇಂದ್ರದ ಅಧಿಕಾರಿಗಳನ್ನು ಯೂರಿಯಾ ಮತ್ತು ಇತರ ರಸಗೊಬ್ಬರಗಳನ್ನು ಪೂರೈಸುವಂತೆ ವಿನಂತಿಸಿದ್ದಾರೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕವು ಮುಂಗಾರು ಆರಂಭದಲ್ಲಿ ಉತ್ತಮ ಮಳೆಯನ್ನು ಪಡೆದಿದೆ ಮತ್ತು ಬಿತ್ತನೆ ಸಾಮಾನ್ಯಕ್ಕಿಂತ ಮೊದಲೇ ಪ್ರಾರಂಭವಾಗಿದೆ ಎಂದು ಇಲಾಖೆ ತಿಳಿಸಿದೆ. ಈ ಬಾರಿ 2 ಲಕ್ಷ ಹೆಕ್ಟೇರ್ ಮೆಕ್ಕೆಜೋಳ ಬಿತ್ತಿನೆ ಮಾಡಲಾಗಿದೆ. ಹೀಗಾಗಿ ರಸಗೊಬ್ಬರಗಳಿಗೆ ಗಮನಾರ್ಹವಾಗಿ ಬೇಡಿಕೆ ಹೆಚ್ಚಿದೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಸಗೊಬ್ಬರಗಳಿಗೆ 1,000 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿತ್ತು, ಈಗ ಸಿದ್ದರಾಮಯ್ಯ ಸರ್ಕಾರ 400 ಕೋಟಿ ರೂ.ಗಳಿಗೆ ಇಳಿಸಿತ್ತು. "ರಾಗಿ, ಜೋಳ, ಮೆಕ್ಕೆಜೋಳ ಮತ್ತು ಹೆಸರುಕಾಳುಗಳನ್ನು ಬಿತ್ತನೆ ಮಾಡಿರುವ ಉತ್ತರ ಮತ್ತು ದಕ್ಷಿಣ ಕರ್ನಾಟಕದ ರೈತರಿಗೆ ರಸಗೊಬ್ಬರಗಳು ಬೇಕಾಗುತ್ತವೆ, ಆದರೆ ಸರ್ಕಾರ ಅವುಗಳನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ನಾಯಕ ಮತ್ತು ಪರಿಷತ್ತಿನ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿದರು.

Representational image
ಯೂರಿಯಾ ಅಭಾವದ ಬಗ್ಗೆ ಕೇಂದ್ರ ಸಚಿವರಿಗೆ CM ಪತ್ರ: ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ; ಗೊಂದಲ ಸೃಷ್ಟಿಸಿದ ಚಲುವರಾಯಸ್ವಾಮಿ ಹೇಳಿಕೆ

ರೈತರಿಗೆ ಗುಣಮಟ್ಟದ ರಸಗೊಬ್ಬರಗಳನ್ನು ನೀಡಲಾಗುತ್ತಿಲ್ಲ ಎಂದು ರವಿಕುಮಾರ್ ಆರೋಪಿಸಿದರು. "ಖಾಸಗಿ ಕಂಪನಿಗಳು ಕಳಪೆ ಗುಣಮಟ್ಟದ ಬೀಜಗಳನ್ನು ಒದಗಿಸುತ್ತಿವೆ, ಇದು ರೈತರಿಗೆ ಉತ್ತಮ ಬೆಳೆಗಳನ್ನು ನೀಡುತ್ತಿಲ್ಲ. ಇದು ರೈತರಿಗೆ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ಅವರು ಹೇಳಿದರು.

"ಮುಂಗಾರು ಆರಂಭಕ್ಕೂ ಮುನ್ನ ಯೂರಿಯಾ ಲಭ್ಯತೆಯನ್ನು ಪರಿಗಣಿಸಿ, ಕೇಂದ್ರವು ಕಡಿಮೆ ಪ್ರಮಾಣದ ಯೂರಿಯಾವನ್ನು ವಿತರಿಸಿತು. ರಾಜ್ಯದಲ್ಲಿ ಯೂರಿಯಾ ಕೊರತೆ ಉಂಟಾಗಲು ಇದೇ ಪ್ರಮುಖ ಕಾರಣ. ಕರ್ನಾಟಕವು 12.95 ಲಕ್ಷ ಮೆಟ್ರಿಕ್ ಟನ್ ಯೂರಿಯಾಕ್ಕಾಗಿ ಕೇಂದ್ರಕ್ಕೆ ಮನವಿ ಮಾಡಿತ್ತು, ಆದರೆ ಅವರು 11.17 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಹಂಚಿಕೆಗೆ ಅನುಮೋದನೆ ನೀಡಿದ್ದರು.

ಏಪ್ರಿಲ್ ನಿಂದ ಜುಲೈ ವರೆಗೆ 3.03 ಲಕ್ಷ ಮೆಟ್ರಿಕ್ ಟನ್ ಡಿಎಪಿ ಬೇಡಿಕೆ ಇತ್ತು, ಆದರೆ ಅವರು ಕೇವಲ 2.21 ಲಕ್ಷ ಮೆಟ್ರಿಕ್ ಟನ್ ಮಾತ್ರ ಪೂರೈಸಿದ್ದಾರೆ ಎಂದು ಕೃಷಿ ಇಲಾಖೆಯ ಹೇಳಿಕೆ ತಿಳಿಸಿದೆ, 6.8 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬೇಡಿಕೆ ಇದ್ದು, ಅದರಲ್ಲಿ 5.35 ಲಕ್ಷ ಮೆಟ್ರಿಕ್ ಟನ್ ಪೂರೈಸಲಾಗಿದೆ. ಎಂದು ಕೃಷಿ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com