ಶಿವಮೊಗ್ಗ: ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ದುರ್ಗಾಂಬ ಬಸ್ ಡಿಕ್ಕಿ; ಸ್ಥಳದಲ್ಲೇ ಇಬ್ಬರ ಸಾವು, 9 ಮಂದಿಗೆ ಗಾಯ

ಶಿವಮೊಗ್ಗದಿಂದ ಸುಮಾರು 12 ಕಿ.ಮೀ ದೂರದಲ್ಲಿರುವ ಗಾಜನೂರಿನ ಬಳಿ, ಮಂಗಳೂರಿನಿಂದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಗೆ ಬಸ್ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
bus rams stationary truck
ಲಾರಿಗೆ ಬಸ್ ಡಿಕ್ಕಿ
Updated on

ಶಿವಮೊಗ್ಗ: ಬುಧವಾರ ಬೆಳಗಿನ ಜಾವ ರಸ್ತೆಬದಿಯಲ್ಲಿ ನಿಂತಿದ್ದ ಲಾರಿಗೆ ದುರ್ಗಾಂಬ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಬಸ್ ಕಂಡಕ್ಟರ್ ಅಣ್ಣಪ್ಪ (32) ಮತ್ತು ಪ್ರಯಾಣಿಕ ಹರ್ಷಿತ್ (25) ಎಂದು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಶಿವಮೊಗ್ಗದಿಂದ ಸುಮಾರು 12 ಕಿ.ಮೀ ದೂರದಲ್ಲಿರುವ ಗಾಜನೂರಿನ ಬಳಿ, ಮಂಗಳೂರಿನಿಂದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಗೆ ಬಸ್ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಬಸ್ ಚಾಲಕ ಎದುರುಗಡೆಯಿಂದ ಬರುತ್ತಿದ್ದ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಎಡಕ್ಕೆ ತಿರುಗಿಸಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಣ್ಣಪ್ಪ ಮತ್ತು ಹರ್ಷಿತ್ ಸ್ಥಳದಲ್ಲೇ ಸಾವನ್ನಪ್ಪಿದರು, ಆದರೆ ಗಂಭೀರ ಗಾಯಗೊಂಡ ಇತರ ಒಂಬತ್ತು ಮಂದಿಯನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಅಪಘಾತದ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಿಂದಾಗಿ ಶಿವಮೊಗ್ಗ-ತೀರ್ಥಹಳ್ಳಿ ರಸ್ತೆಯಲ್ಲಿ ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು.

bus rams stationary truck
ಜಾರ್ಖಂಡ್: ಭೀಕರ ಅಪಘಾತ; ಟ್ರಕ್ ಗೆ ಬಸ್ ಡಿಕ್ಕಿ,18 ಕನ್ವಾರಿಯಾ ಭಕ್ತರ ಸಾವು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com