ಚಿಕ್ಕಮಗಳೂರು: ತಾಯಿಯನ್ನು ಕೊಂದು ಸುಟ್ಟು ಹಾಕಿ ಪಕ್ಕದಲ್ಲೇ ಮಲಗಿದ್ದ ಪುತ್ರ

ಕೂಲಿ ಕೆಲಸ ಮಾಡಿಕೊಂಡು ಅಮ್ಮನ ಜೊತೆಯಲ್ಲಿದ್ದ ಪವನ್‌ ಹಕ್ಕಿಮಕ್ಕಿ ಗ್ರಾಮದಲ್ಲಿ ವಾಸವಾಗಿದ್ದ. ಕಳೆದ ರಾತ್ರಿ ಕಂಠಪೂರ್ತಿ ಕುಡಿದುಬಂದು ತಾಯಿಯ ಜೊತೆ ವಿನಾಕಾರಣ ಜಗಳ ತೆಗೆದಿದ್ದ.
Pavan
ಬಂಧಿತ ಆರೋಪಿ ಪವನ್
Updated on

ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಪುತ್ರನೇ ತಾಯಿಯನ್ನ ಕೊಂದು, ಆಕೆ ಮೃತ ದೇಹಕ್ಕೆ ಬೆಂಕಿ ಹಾಕಿ ಪಕ್ಕದಲ್ಲೇ ಮಲಗಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ.

ಕೂಲಿ ಕೆಲಸ ಮಾಡಿಕೊಂಡು ಅಮ್ಮನ ಜೊತೆಯಲ್ಲಿದ್ದ ಪವನ್‌ ಹಕ್ಕಿಮಕ್ಕಿ ಗ್ರಾಮದಲ್ಲಿ ವಾಸವಾಗಿದ್ದ. ಕಳೆದ ರಾತ್ರಿ ಕಂಠಪೂರ್ತಿ ಕುಡಿದುಬಂದು ತಾಯಿಯ ಜೊತೆ ವಿನಾಕಾರಣ ಜಗಳ ತೆಗೆದಿದ್ದು, ಆಕೆಯನ್ನು ಕೊಂದು ಬೆಂಕಿ ಹಚ್ಚಿ ಸುಟ್ಟಿದ್ದಲ್ಲದೆ, ಪ್ರಜ್ಞಾಹೀನನಾಗಿ ಪಕ್ಕದಲ್ಲೇ ಮಲಗಿದ್ದನು.

ಅಕ್ಕಪಕ್ಕದವರು ದೌಡಾಯಿಸಿ ಬಂದು ನೋಡುವಷ್ಟರಲ್ಲೇ ಭವಾನಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದರು. ವಿಷಯ ತಿಳಿದ ಕೂಡಲೇ ಆಲ್ಲೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತಾಯಿ ಕೊಂದ ಪಾಪಿ ಮಗನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಳೆದ 2 ತಿಂಗಳ ಹಿಂದೆ ಪವನ್ ಕುಡಿದು ಬಂದ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದನು. ಗ್ರಾಮದ ಹಿರಿಯರು ಬುದ್ದಿ ಹೇಳಿದ್ದರು.

Pavan
ಕಣ್ಣೂರು ಜೈಲಿನಿಂದ ತಪ್ಪಿಸಿಕೊಂಡ ಕೆಲವೇ ಗಂಟೆಗಳಲ್ಲಿ ಸಿಕ್ಕಿಬಿದ್ದ ಕೊಲೆ ಅಪರಾಧಿ ಗೋವಿಂದಚಾಮಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com