ಕರ್ನಾಟಕ ಕ್ವಾಂಟಮ್ ಮಿಷನ್ ಘೋಷಿಸಿದ ಸಿಎಂ ಸಿದ್ದರಾಮಯ್ಯ; ಸಾವಿರ ಕೋಟಿ ರೂ ಮೀಸಲು

ಕ್ವಾಂಟಮ್ ಇಂಡಿಯಾ ಬೆಂಗಳೂರು' ಶೃಂಗಸಭೆಯ ಮೊದಲ ಆವೃತ್ತಿಯನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
Siddaramaiah
ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯದಲ್ಲಿ 20 ಬಿಲಿಯನ್ ಡಾಲರ್ ಕ್ವಾಂಟಮ್ ಆರ್ಥಿಕತೆಯನ್ನು ನಿರ್ಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ 1,000 ಕೋಟಿ ರೂ. ನಿಧಿಯನ್ನು ಮೀಸಲಿಸಿ ಕರ್ನಾಟಕ ಕ್ವಾಂಟಮ್ ಮಿಷನ್(ಕೆಕ್ಯೂಎಂ) ಅನ್ನು ಘೋಷಿಸಿದ್ದಾರೆ. ಇದು ಕರ್ನಾಟಕದ ಕ್ವಾಂಟಮ್ ವಿಷನ್ 2035 ರ ಭಾಗವಾಗಿರುತ್ತದೆ.

ಇಂದು ಬೆಂಗಳೂರಿನಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಚಾರ ಸೊಸೈಟಿ(ಕೆಎಸ್‌ಟಿಇಪಿಎಸ್), ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಐಐಎಸ್‌ಸಿ ಕ್ವಾಂಟಮ್ ಟೆಕ್ನಾಲಜಿ ಇನಿಶಿಯೇಟಿವ್(ಐಕ್ಯೂಟಿಐ) ಸಹಯೋಗದೊಂದಿಗೆ ಆಯೋಜಿಸಲಾಗಿದ್ದ 'ಕ್ವಾಂಟಮ್ ಇಂಡಿಯಾ ಬೆಂಗಳೂರು' ಶೃಂಗಸಭೆಯ ಮೊದಲ ಆವೃತ್ತಿಯನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

"2025 ಅನ್ನು ಅಂತರರಾಷ್ಟ್ರೀಯ ಕ್ವಾಂಟಮ್ ವರ್ಷವಾಗಿ ಜಗತ್ತು ಆಚರಿಸುತ್ತಿರುವಾಗ, ಕರ್ನಾಟಕ ಕ್ವಾಂಟಮ್ ವಿಷನ್ 2035 ಅನ್ನು ಘೋಷಿಸಲು ನನಗೆ ಹೆಮ್ಮೆಯಾಗುತ್ತಿದೆ. 2035 ರ ವೇಳೆಗೆ, ನಾವು 10,000 ಉನ್ನತ ಕೌಶಲ್ಯದ ಉದ್ಯೋಗಗಳನ್ನು ಸೃಷ್ಟಿಸುವ ಮತ್ತು ಕರ್ನಾಟಕವನ್ನು ಏಷ್ಯಾದ ಕ್ವಾಂಟಮ್ ರಾಜಧಾನಿಯಾಗಿ ಸ್ಥಾಪಿಸುವ ಗುರಿ ಹೊಂದಿದ್ದೇವೆ" ಎಂದು ಹೇಳಿದರು.

ದೇಶದಲ್ಲಿ ಮೊಟ್ಟಮೊದಲ ಕ್ವಾಂಟಮ್ ಕಂಪ್ಯೂಟಿಂಗ್ ಅನ್ನು ಅಭಿವೃದ್ಧಿ ಪಡಿಸಿರುವ ಮತ್ತು ಕ್ವಾಂಟಮ್ ಕಂಪ್ಯೂಟಿಂಗ್ ಸಮ್ಮೇಳನವನ್ನು ಆಯೋಜಿಸಿರುವ ರಾಜ್ಯ ಕರ್ನಾಟಕ. ಈ ಪರಂಪರೆಯನ್ನು ಮುನ್ನಡೆಸಿಕೊಂಡು ಹೋಗುವ ನಿಟ್ಟಿನಲ್ಲಿ ನಾವು ಬದ್ಧರಿದ್ದೇವೆ.

Siddaramaiah
ಈಗಾಗಲೇ ಬೆಂಗಳೂರಿನಲ್ಲಿ ಮೊದಲ ಕ್ವಾಂಟಮ್ ಕಂಪ್ಯೂಟರ್ ಕಾರ್ಯನಿರ್ವಹಿಸುತ್ತಿದೆ: ಆಂಧ್ರ ಸಿಎಂಗೆ ಸಚಿವ ಬೋಸರಾಜು ಟಾಂಗ್

ಕರ್ನಾಟಕವು ವಿಜ್ಞಾನ, ತಂತ್ರಜ್ಞಾನ ಹಾಗೂ ಆವಿಷ್ಕಾರದ ತವರು. ಈ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವ ಉದ್ಯಮಗಳಿಗೆ ನಮ್ಮ ಸರ್ಕಾರ ಪೂರ್ಣ ಸಹಕಾರ ಹಾಗೂ ಬೆಂಬಲ ನೀಡಲಿದೆ ಎಂದರು.

ಕರ್ನಾಟಕ ಕ್ವಾಂಟಮ್ ಮಿಷನ್, ಸಂಶೋಧನೆ ಮತ್ತು ಅಭಿವೃದ್ಧಿ, ಕೌಶಲ್ಯ, ಮೂಲಸೌಕರ್ಯ ಮತ್ತು ನವೋದ್ಯಮಗಳನ್ನು ಉತ್ತೇಜಿಸುತ್ತದೆ ಎಂದು ಸಿಎಂ ತಿಳಿಸಿದರು.

"ಕ್ವಾಂಟಮ್ ತಂತ್ರಜ್ಞಾನ ಕಾರ್ಯಪಡೆಯು ನೀತಿ ನಿರೂಪಣೆ, ಮಾರ್ಗದರ್ಶನ ಮಾಡಿದರೆ, ಕ್ವಾಂಟಮ್ ಪಾರ್ಕ್‌ಗಳು, ಉತ್ಪಾದನಾ ವಲಯಗಳು ಮತ್ತು Q-ಸಿಟಿ ನಾವೀನ್ಯತೆಯನ್ನು ಪೋಷಿಸುತ್ತವೆ" ಎಂದು ಸಿದ್ದರಾಮಯ್ಯ ಹೇಳಿದರು.

ಮಾಹಿತಿ ತಂತ್ರಜ್ಞಾನ ಬೆಂಗಳೂರನ್ನು ಜಾಗತಿಕ ನಾಯಕನನ್ನಾಗಿ ಮಾಡಿದಂತೆ ಕರ್ನಾಟಕದ ಸಮಗ್ರ ಕ್ವಾಂಟಮ್ ಹಬ್ ಅಥವಾ Q-ಸಿಟಿ ಭಾರತವನ್ನು ಜಾಗತಿಕ ನಾಯಕನನ್ನಾಗಿ ಮಾಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Siddaramaiah
ನ್ಯಾನೋ ಸಮ್ಮೇಳನ ಮಾದರಿಯಲ್ಲಿ ಕ್ವಾಂಟಮ್ ತಂತ್ರಜ್ಞಾನ ಸಮ್ಮೇಳನ: ಡಿಸಿಎಂ ಡಿ.ಕೆ ಶಿವಕುಮಾರ್

ಕರ್ನಾಟಕದ ಕ್ವಾಂಟಮ್ ತಂತ್ರವು ಐದು ಪ್ರಮುಖ ಸ್ತಂಭಗಳ ಮೇಲೆ ನಿರ್ಮಿಸಲಾಗಿದೆ. ಪ್ರತಿಭಾ ಅಭಿವೃದ್ಧಿ, ಸಂಶೋಧನೆ ಮತ್ತು ಅಭಿವೃದ್ಧಿ, ಮೂಲಸೌಕರ್ಯ ಸೃಷ್ಟಿ, ಉದ್ಯಮ ಬೆಂಬಲ ಮತ್ತು ಜಾಗತಿಕ ಪಾಲುದಾರಿಕೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು

ಪ್ರತಿಭಾ ಅಭಿವೃದ್ಧಿಯನ್ನು ಸಾಧಿಸಲು, ಕರ್ನಾಟಕವು 20 ಕ್ಕೂ ಹೆಚ್ಚು ಕಾಲೇಜುಗಳಲ್ಲಿ ಕ್ವಾಂಟಮ್ ಕೌಶಲ್ಯ ಕಾರ್ಯಕ್ರಮಗಳನ್ನು ಪರಿಚಯಿಸುತ್ತದೆ ಮತ್ತು ಪ್ರತಿ ವರ್ಷ 150 ಪಿಎಚ್‌ಡಿ ಫೆಲೋಶಿಪ್‌ಗಳನ್ನು ಬೆಂಬಲಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

1000-ಕ್ವಿಟ್ ಪ್ರೊಸೆಸರ್‌ಗಳು ಸೇರಿದಂತೆ ಅತ್ಯಾಧುನಿಕ ಕ್ವಾಂಟಮ್ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವ ಮತ್ತು ಆರೋಗ್ಯ ರಕ್ಷಣೆ, ರಕ್ಷಣೆ ಮತ್ತು ಸೈಬರ್ ಭದ್ರತೆಯಲ್ಲಿ ನೈಜ-ಪ್ರಪಂಚದ ಅನ್ವಯಿಕೆಗಳನ್ನು ಪೈಲಟ್ ಮಾಡುವ ಗುರಿಯನ್ನು ರಾಜ್ಯ ಹೊಂದಿದೆ ಎಂದು ಅವರು ಹೇಳಿದರು.

ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ, ಕರ್ನಾಟಕವು ಭಾರತದ ಮೊದಲ ಕ್ವಾಂಟಮ್ ಹಾರ್ಡ್‌ವೇರ್ ಪಾರ್ಕ್, ನಾಲ್ಕು ಇನ್ನೋವೇಶನ್ ಝೋನ್‌ಗಳು ಮತ್ತು ಕ್ವಾಂಟಮ್ ಘಟಕಗಳ ದೇಶೀಯ ಉತ್ಪಾದನೆಯನ್ನು ಹೆಚ್ಚಿಸಲು ಮೀಸಲಾದ ಫ್ಯಾಬ್ ಲೈನ್ ಅನ್ನು ಸ್ಥಾಪಿಸಲಿದೆ ಎಂದು ಸಿಎಂ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com