ಹಿಂದುಳಿದ ವರ್ಗದ ಯುವ ಕೈಗಾರಿಕೋದ್ಯಮಿಗಳಿಗೆ ಪ್ರತ್ಯೇಕ ನಿಧಿ ಸ್ಥಾಪಿಸುವಂತೆ ಮುಖ್ಯಮಂತ್ರಿಗಳಿಗೆ ಸಚಿವ ಸಂತೋಷ್ ಲಾಡ್ ಪತ್ರ

2015ರ ರಾಜ್ಯ ಸಮೀಕ್ಷೆಯ ಪ್ರಕಾರ, ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಜನಸಂಖ್ಯೆ ಶೇಕಡಾ 70ರಷ್ಟಿದ್ದು, ಸುಮಾರು 4.42 ಕೋಟಿ ಜನರನ್ನು ಒಳಗೊಂಡಿದೆ.
Santosh lad
ಸಂತೋಷ್ ಲಾಡ್
Updated on

ಬೆಂಗಳೂರು: ಹಿಂದುಳಿದ ವರ್ಗದ ಯುವ ಕೈಗಾರಿಕೋದ್ಯಮಿಗಳನ್ನು ಪ್ರೋತ್ಸಾಹಿಸಲು ಪ್ರತ್ಯೇಕ ನಿಧಿ ಸ್ಥಾಪಿಸಬೇಕೆಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಿಗೆ ಪತ್ರ ಬರೆದು ಈ ವಿಷಯದಲ್ಲಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

2015ರ ರಾಜ್ಯ ಸಮೀಕ್ಷೆಯ ಪ್ರಕಾರ, ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಜನಸಂಖ್ಯೆ ಶೇಕಡಾ 70ರಷ್ಟಿದ್ದು, ಸುಮಾರು 4.42 ಕೋಟಿ ಜನರನ್ನು ಒಳಗೊಂಡಿದೆ. ಒಬಿಸಿ ವರ್ಗದಡಿ 1880 ಜಾತಿ ಮತ್ತು ಉಪಜಾತಿಗಳು ಸೇರಿವೆ. ಆದರೆ, ಈ ವರ್ಗದ ಯುವ ಕೈಗಾರಿಕೋದ್ಯಮಿಗಳಿಗೆ ಪ್ರತ್ಯೇಕ ಬಂಡವಾಳ ಅಥವಾ ಅನುದಾನ ವ್ಯವಸ್ಥೆ ಇಲ್ಲದಿರುವುದರಿಂದ, ಅವರು ಕೈಗಾರಿಕಾ ವಲಯದಿಂದ ದೂರವಾಗಿದ್ದಾರೆ ಎಂದು ಸಚಿವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರದ ಮಟ್ಟದಲ್ಲಿ ಪ್ರತ್ಯೇಕ ನಿಧಿ ಸ್ಥಾಪನೆ ಅನಿವಾರ್ಯ ಎಂದು ಅವರು ಒತ್ತಿಹೇಳಿದ್ದಾರೆ.

ಈ ಪ್ರತ್ಯೇಕ ನಿಧಿಗೆ ಸರ್ಕಾರದಿಂದ ಅನುದಾನ ಒದಗಿಸಬಹುದು ಮತ್ತು ಖಾಸಗಿ ವಲಯದ ಹೂಡಿಕೆದಾರರಿಂದಲೂ ಹೂಡಿಕೆಗೆ ಅವಕಾಶ ಕಲ್ಪಿಸಬಹುದು ಎಂದು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಈ ನಿಧಿಯಿಂದ ಹಿಂದುಳಿದ ವರ್ಗದ ಯುವ ಉದ್ಯಮಿಗಳಿಗೆ ನವೋದ್ಯಮ (ಸ್ಟಾರ್ಟ್‌ಅಪ್‌) ಆರಂಭಕ್ಕೆ ಅಗತ್ಯ ಬಂಡವಾಳ ಒದಗಿಸಬಹುದು ಎಂದು ಅವರು ವಿವರಿಸಿದ್ದಾರೆ. ಪ್ರತ್ಯೇಕ ನಿಧಿಯಿಂದ ಹಿಂದುಳಿದ ವರ್ಗದ ಯುವ ಉದ್ಯಮಿಗಳಿಗೆ ಕೈಗಾರಿಕೆ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮುನ್ನಡೆಯಲು ಅವಕಾಶ ಸಿಗಲಿದೆ. ಇದರಿಂದ ಅವರು ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಬಹುದು ಎಂಬ ಆಶಾಭಾವನೆಯನ್ನು ಸಚಿವರು ವ್ಯಕ್ತಪಡಿಸಿದ್ದಾರೆ.

Santosh lad
ಸಿಎಂ ಸ್ಥಾನಕ್ಕೆ ಖರ್ಗೆ 'ಮೋಸ್ಟ್ ಎಲಿಜಿಬಲ್ ಪರ್ಸನ್': ಸಚಿವ ಸಂತೋಷ್ ಲಾಡ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com