ಚಿಕ್ಕಬಳ್ಳಾಪುರ: ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಂದ ಚಿನ್ನಾಭರಣ ಕಳವು; ಮೂವರು ಮಹಿಳೆಯರ ಬಂಧನ

ಆರೋಪಿಗಳಿಂದ ಏಳು ಲಕ್ಷ ರೂ. ಮೌಲ್ಯದ ಸುಮಾರು 70 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Representational image
ಸಾಂದರ್ಭಿಕ ಚಿತ್ರ
Updated on

ಚಿಕ್ಕಬಳ್ಳಾಪುರ: ಪ್ರಯಾಣಿಕರ ಸೋಗಿನಲ್ಲಿ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಂದ ಚಿನ್ನಾಭರಣಗಳನ್ನು ಕದ್ದ ಆರೋಪದ ಮೇಲೆ ಮೂವರು ಮಹಿಳೆಯರನ್ನು ಚಿಕ್ಕಬಳ್ಳಾಪುರ ಪಟ್ಟಣ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ಪಟ್ಟಣದ ನಿವಾಸಿ ರಿಹಾನಾ ಖಾನಮ್ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 27 ರಂದು ನೀಡಿದ ದೂರಿನಲ್ಲಿ, ಮಧ್ಯಾಹ್ನ 2 ಗಂಟೆ ಸುಮಾರಿಗೆ, ಜನದಟ್ಟಣೆಯಿಂದ ಕೂಡಿದ್ದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುಡಿಬಂಡೆಗೆ ಹೋಗುವ ಬಸ್ ಹತ್ತುವಾಗ, ಯಾರೋ ತನ್ನ ಬ್ಯಾಗ್‌ನಿಂದ ಚಿನ್ನದ ಬಳೆಗಳನ್ನು ಕದ್ದಿರುವುದನ್ನು ಗಮನಿಸಿರುವುದಾಗಿ ಅವರು ತಿಳಿಸಿದ್ದಾರೆ.

ಅವರ ದೂರಿನ ಮೇರೆಗೆ, ಚಿಕ್ಕಬಳ್ಳಾಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 303(2) ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಆರಂಭಿಸಲಾಗಿದೆ.

Representational image
ಪ್ರಿಯಕರನೊಂದಿಗೆ ಮೋಜು-ಮಸ್ತಿ: ಚಿಕ್ಕಪ್ಪನ ಮನೆಯಲ್ಲಿ 1 ಕೆಜಿಗೂ ಹೆಚ್ಚು ಚಿನ್ನಾಭರಣ ಕಳ್ಳತನ; ವಿದ್ಯಾರ್ಥಿನಿ ಸೇರಿ ನಾಲ್ವರ ಬಂಧನ

ಈ ಸಂಬಂಧ ಜುಲೈ 25 ರಂದು ಕಲಬುರಗಿ ಮೂಲದ ಮೂವರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತುಳಸಿ (22), ಪ್ರೇಮಾ (21) ಮತ್ತು ಸೋನಿಯಾ ಬಾಬಾ ಶೇಖ್ (25) ಎಂದು ಹೇಳಲಾಗಿದ್ದು, ಅವರು ಚಿಂದಿ ಆಯುವವರಾಗಿ ಕೆಲಸ ಮಾಡುತ್ತಿದ್ದರು.

ವಿಚಾರಣೆಯ ನಂತರ, ಮೂವರು ಕಳ್ಳತನ ಮಾಡಿದ್ದಾಗಿ ಒಪ್ಪಿಕೊಂಡಿದ್ದು, ಅದೇ ಪೊಲೀಸ್ ಠಾಣೆಯಲ್ಲಿ ವರದಿಯಾಗಿದ್ದ ಈ ಹಿಂದಿನ ಪ್ರಕರಣದಲ್ಲಿಯೂ ಅವರು ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಿಂದ ಏಳು ಲಕ್ಷ ರೂ. ಮೌಲ್ಯದ ಸುಮಾರು 70 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com