Hemavati Link Canal: ಕೂಡಲೇ ಯೋಜನೆ ನಿಲ್ಲಿಸಿ; ಪ್ರತಿಭಟನಾಕಾರರ ವಿರುದ್ಧದ ಪ್ರಕರಣಗಳ ಹಿಂಪಡೆಯಿರಿ; ಸಿಎಂಗೆ ಸೋಮಣ್ಣ ಆಗ್ರಹ

ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ಪ್ರಕರಣ ದಾಖಲಿಸಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿರುವುದು ವಿಷಾದನೀಯ ಸಂಗತಿ.
V. Somanna
ಕೇಂದ್ರ ಸಚಿವ ವಿ. ಸೋಮಣ್ಣ
Updated on

ಬೆಂಗಳೂರು: ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಫೀಡರ್ ಯೋಜನೆಯನ್ನು ಕೂಡಲೇ ನಿಲ್ಲಿಸಿ, ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಿರಿ ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಫೀಡರ್ ಯೋಜನೆಯಿಂದ ತುಮಕೂರು ಭಾಗದ ರೈತರಿಗೆ ಅನ್ಯಾಯ ಆಗುತ್ತಿದ್ದು, ತಕ್ಷಣವೇ ಈ ಯೋಜನೆಯ ಕಾಮಗಾರಿಯನ್ನು ನಿಲ್ಲಿಸುವಂತೆ ಸಾಕಷ್ಟು ಭಾರಿ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದರೂ, ಅವರು ಈ ಬಗ್ಗೆ ಗಮನಹರಿಸದಿರುವುದು ಹಾಗೂ ಈ ಅನ್ಯಾಯದ ವಿರುದ್ಧ ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ಪ್ರಕರಣ ದಾಖಲಿಸಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿರುವುದು ವಿಷಾದನೀಯ ಸಂಗತಿ ಎಂದು ಹೇಳಿದ್ದಾರೆ.

ಈ ಸಂಬಂಧ ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ ಅವರು ಸಹ ಪ್ರಸ್ತುತ ಬೆಳವಣಿಗೆಯ ಬಗ್ಗೆ ದೂರವಾಣಿ ಮುಖಾಂತರ ಚರ್ಚಿಸಿದ್ದು, ಅತ್ಯಂತ ಕಳವಳವನ್ನು ವ್ಯಕ್ತಪಡಿಸಿದ್ದಾರೆ.

ಆದಾಗ್ಯೂ ಈ ಭಾಗದ ಜನರ ಹಿತದೃಷ್ಟಿಯಿಂದ ಹಾಗೂ ರೈತರ ಜೀವನಾಡಿ ನೀರಿಲ್ಲದೇ ಬದುಕು ಇಲ್ಲ ಎಂಬುದರ ಸಾಧಕ ಬಾಧಕಗಳ ಬಗ್ಗೆ ರೈತರ, ಮಠಾಧೀಶರ ಹಾಗೂ ಜನಸಾಮಾನ್ಯರ ಮೇಲಿನ ದೌರ್ಜನ್ಯ ನಿವಾರಣೆಗೊಳಿಸಲು ಮತ್ತು ವಿವಾದಿತ ಯೋಜನೆಯ ನಿಜವಾದ ತಾಂತ್ರಿಕ ಅಂಶಗಳ ಮೇಲೆ ಚರ್ಚಿಸಲು ಈ ಯೋಜನಾ ವ್ಯಾಪ್ತಿಯಲ್ಲಿ ಬರುವ ಸಂಬಂಧಪಟ್ಟ ಎಲ್ಲಾ ಜನಪ್ರತಿನಿಧಿಗಳ ಸಭೆಯನ್ನು ಉಪ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರ ಉಪಸ್ಥಿತಿಯಲ್ಲಿ ತಕ್ಷಣ ಏರ್ಪಡಿಸುವಂತೆ ಒತ್ತಾಯಿಸಿದ್ದಾರೆ.

ಈ ಸಭೆಗೆ ತಾಂತ್ರಿಕ ತಜ್ಞರನ್ನು ಮತ್ತು ಈ ಹಿಂದೆ ಯೋಜನೆಯ ಕಾರ್ಯಸಾಧ್ಯತೆ ಇಲ್ಲವೆಂದು ಈಗ ಯೋಜನೆಯ ಕಾರ್ಯಸಾಧ್ಯತೆಯ ಬಗ್ಗೆ ಒಪ್ಪಿಗೆ ನೀಡಿರುವ ಅಧಿಕಾರಿಗಳನ್ನು ಸಹ ಈ ಸಭೆಯಲ್ಲಿ ಹಾಜರಿರುವಂತೆ ಸೋಮಣ್ಣ ಅವರು ಮನವಿ ಮಾಡಿದ್ದಾರೆ.

V. Somanna
ಹೇಮಾವತಿ ಕಾಲುವೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ: 3 ಶಾಸಕರು, ಇಬ್ಬರು ಶ್ರೀಗಳು ಸೇರಿ 11 ಮಂದಿ ವಿರುದ್ಧ FIR ದಾಖಲು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com