ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ: ಗೃಹ ಸಚಿವ ಪರಮೇಶ್ವರ್ ಸ್ಥಳ ಪರಿಶೀಲನೆ; ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ

ಕ್ರೀಡಾಂಗಣದಲ್ಲಿ ವಿಜಯೋತ್ಸವವನ್ನು ಆಯೋಜಿಸಲು ರಾಜ್ಯ ಸರ್ಕಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಥವಾ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್‌ಗೆ ಹೇಳಿರಲಿಲ್ಲ ಎಂದು ಸ್ಪಷ್ಟಪಡಿಸಿದರು.
Home minister Dr Parameshwar inspects place in Chinnaswamy stadium stampede
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗೃಹ ಸಚಿವ ಡಾ ಪರಮೇಶ್ವರ್ ಪರಿಶೀಲನೆ
Updated on

ಬೆಂಗಳೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ನಿನ್ನೆ ಕಾಲ್ತುಳಿತ ದುರಂತ ಸಂಭವಿಸಿದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬೆಂಗಳೂರು ಪೊಲೀಸ್ ಆಯುಕ್ತರು, ಹಿರಿಯ ಪೊಲೀಸ್ ಅಧಿಕಾರಿಗಳು, ಪೊಲೀಸ್ ಉಪ ಆಯುಕ್ತರು (ಡಿಸಿಪಿಗಳು) ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ (ಕೆಎಸ್‌ಸಿಎ) ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಇದಕ್ಕೂ ಮೊದಲು, ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಸ್ಥಳವನ್ನು ಪರಿಶೀಲಿಸಿದರು. ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟು 56 ಮಂದಿ ಗಾಯಗೊಂಡಿದ್ದಾರೆ. ಕ್ರೀಡಾಂಗಣದಲ್ಲಿ ವಿಜಯೋತ್ಸವವನ್ನು ಆಯೋಜಿಸಲು ರಾಜ್ಯ ಸರ್ಕಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಥವಾ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್‌ಗೆ ಹೇಳಿರಲಿಲ್ಲ ಎಂದು ಸ್ಪಷ್ಟಪಡಿಸಿದರು.

Home minister Dr Parameshwar inspects place in Chinnaswamy stadium stampede
ಬೆಂಗಳೂರು ಕಾಲ್ತುಳಿತದಲ್ಲಿ 11 ಜನ ಮೃತ, 56 ಮಂದಿಗೆ ಗಾಯ; ಶೀಘ್ರದಲ್ಲೆ ಹೊಸ SOP ಜಾರಿ: ಡಾ. ಜಿ ಪರಮೇಶ್ವರ್

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ಆರ್‌ಸಿಬಿ ಅಥವಾ ಕೆಸಿಎ ಅವರನ್ನು ಸಂಭ್ರಮಾಚರಣೆ ಕಾರ್ಯಕ್ರಮ ಮಾಡಿ ಎಂದು ಕೇಳಿಕೊಂಡಿರಲಿಲ್ಲ. ಅವರೇ ವಿಜಯೋತ್ಸವ ಆಯೋಜಿಸಿದ್ದರು. ತಂಡವನ್ನು ಬೆಂಗಳೂರಿಗೆ ಕರೆತಂದವರು ಅವರೇ. ಸರ್ಕಾರವೂ ಇದನ್ನು ಸುಗಮಗೊಳಿಸಬೇಕೆಂದು ಭಾವಿಸಿತ್ತು. ಈ ಘಟನೆ ನಡೆದಿದ್ದಕ್ಕೆ ನನಗೆ ತುಂಬಾ ವಿಷಾದವಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಕಾಲ್ತುಳಿತದ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ. ತನಿಖೆಯ ವರದಿ ಸರ್ಕಾರಕ್ಕೆ ಬರಲಿ, ಯಾವುದೇ ಲೋಪಗಳಿದ್ದರೆ, ಹೊಣೆಗಾರರೆಂದು ಕಂಡುಬಂದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರತಿಷ್ಠಿತ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಈ ಘಟನೆ ಸಂಭವಿಸಿದ್ದು, ಫ್ರಾಂಚೈಸಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ನ್ನು ಗೆದ್ದ ನಂತರ ಆರ್‌ಸಿಬಿ ಆಟಗಾರರನ್ನು ನೋಡಲು ಸಾವಿರಾರು ಅಭಿಮಾನಿಗಳು ಸೇರಿದ್ದರು. ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ 10 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com