ಶ್ರೀಗಂಧ ಕೃಷಿಗೆ ಪ್ರೋತ್ಸಾಹ: ನೀತಿ ಸರಳೀಕರಣಕ್ಕೆ ಸರ್ಕಾರ ಮುಂದು, ಶೀಘ್ರದಲ್ಲೇ ಅಧಿಸೂಚನೆ ಪ್ರಕಟ

ರಾಜ್ಯದಲ್ಲಿ ರೈತರು ಕೂಡ ಶ್ರೀಗಂಧ ಬೆಳೆಯುತ್ತಿದ್ದಾರೆ. ಇವರಿಗೆ ಶ್ರೀಗಂಧ ಕಟಾವು ಮಾಡಲು, ಸಾಗಾಟ ಮಾಡಲು ಅನುವಾಗುವಂತೆ ಶೀಘ್ರವೇ ಶ್ರೀಗಂಧದನೀತಿ ಸರಳೀಕರಣ ಮಾಡಿ ಅಧಿಸೂಚನೆ ಹೊರಡಿಸಲಾಗುವುದು.
Eshwar Khandre
ಈಶ್ವರ್ ಖಂಡ್ರೆ
Updated on

ಮೈಸೂರು: ಶ್ರೀಗಂಧದ ಮರಗಳನ್ನು ಬೆಳೆಸಲು ಪ್ರೋತ್ಸಾಹಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಇದಕ್ಕಾಗಿ ಅಸ್ತಿತ್ವದಲ್ಲಿರುವ ಕಾನೂನುಗಳು ಮತ್ತು ನೀತಿಗಳನ್ನು ಸರಳೀಕರಣಗೊಳಿಸಲು ಮುಂದಾಗಿದೆ.

ನಗರದಲ್ಲಿ ಬುಧವಾರ ಆಯೋಜಿಸಿದ್ದ ಮೈಸೂರು ವಿಭಾಗದ ಅರಣ್ಯ ಇಲಾಖೆಯ ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಕಿಟ್ ವಿತರಣೆ ಸಮಾರಂಭದಲ್ಲಿ ಮಾತನಾಡಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅವರು ಈ ವಿಚಾರವನ್ನು ತಿಳಿಸಿದರು.

ರಾಜ್ಯದಲ್ಲಿ ರೈತರು ಕೂಡ ಶ್ರೀಗಂಧ ಬೆಳೆಯುತ್ತಿದ್ದಾರೆ. ಇವರಿಗೆ ಶ್ರೀಗಂಧ ಕಟಾವು ಮಾಡಲು, ಸಾಗಾಟ ಮಾಡಲು ಅನುವಾಗುವಂತೆ ಶೀಘ್ರವೇ ಶ್ರೀಗಂಧದನೀತಿ ಸರಳೀಕರಣ ಮಾಡಿ ಅಧಿಸೂಚನೆ ಹೊರಡಿಸಲಾಗುವುದು. ಅರಣ್ಯ ಇಲಾಖೆಯ ವತಿಯಿಂದ ನೆಡುತೋಪಿನಲ್ಲಿ ಶ್ರೀಗಂಧದ ಮರ ಬೆಳೆಸಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಪ್ರಕ್ರಿಯೆಯನ್ನು ಸರಳಗೊಳಿಸಲು ಮುಂದಿನ ವಾರ ಅಥವಾ 10 ದಿನಗಳಲ್ಲಿ ನೀತಿಗಳನ್ನು ತಿದ್ದುಪಡಿ ಮಾಡಲಾಗುವುದು. ಇದರೊಂದಿಗೆ, ಕ್ಷೀಣಿಸಿದ ಅರಣ್ಯ ಭೂಮಿ ಮತ್ತು ಕಂದಾಯ ಇಲಾಖೆಯ ಅಡಿಯಲ್ಲಿ ಲಕ್ಷಾಂತರ ಎಕರೆ ಬಳಕೆಯಾಗದ ಭೂಮಿಯಲ್ಲಿ ಶ್ರೀಗಂಧದ ಕೃಷಿಯನ್ನು ಉತ್ತೇಜಿಸಲಾಗುವುದು ಎಂದು ತಿಳಿಸಿದರು.

ಹಗಲಿರುಳೆನ್ನದೆ, ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೆ ಅರಣ್ಯ ಮತ್ತು ಅರಣ್ಯ ಸಂಪತ್ತು ಕಾಯುವ ಸಿಬ್ಬಂದಿಗೆ ವೇತನದ ಜೊತೆಗೆ ಆಹಾರಭತ್ಯೆ ನೀಡಲು ಮತ್ತು ಹೆಚ್ಚುವರಿಯಾಗಿ ಮಾಸಿಕ 2 ಸಾವಿರ ರೂ.ಅಪಾಯ ಭತ್ಯೆ ನೀಡಲು ಆದೇಶ ನೀಡಿದ್ದು, ಕಾರ್ಯಗತಗೊಳಿಸಲಾಗುತ್ತಿದೆ ಎಂದರು.

ಅರಣ್ಯ ಸಿಬ್ಬಂದಿಗೂ ಸಹ ಮಿಲಿಟರಿ ಮತ್ತು ಪೊಲೀಸ್‌ ಸಿಬ್ಬಂದಿಗೆ ಇರುವ ರೀತಿಯ ಕ್ಯಾಂಟೀನ್ ಸೌಲಭ್ಯ ಕಲ್ಪಿಸಬೇಕು ಎಂಬ ಬೇಡಿಕೆ ಇದೆ. ಈ ಬಗ್ಗೆ ಈಗಾಗಲೇ ಮುಖ್ಯ ಮಂತ್ರಿಗೆ ಮನವಿ ಮಾಡಿದ್ದು, ಹಾಲಿ ಇರುವ ಪೊಲೀಸ್ ಕ್ಯಾಂಟೀನ್ ಸೌಲಭ್ಯವನ್ನು ಅರಣ್ಯ ಸಿಬ್ಬಂದಿಗೂ ವಿಸ್ತರಿಸಲು ಪ್ರಯತ್ನಿಸಲಾಗುವುದು. ಜೊತೆಗೆ ವಸತಿ ನಿಲಯಗಳು ಮತ್ತು ಸಾಕಷ್ಟು ವಾಹನಗಳನ್ನು ಸಹ ಒದಗಿಸಲಾಗುವುದು ಎಂದು ಹೇಳಿದರು.

ಇಂದು ಮಾನವ ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದ್ದು, ಅರಣ್ಯ ಪ್ರದೇಶ ಕ್ಷೀಣಿಸುತ್ತಿದೆ. ಕರ್ನಾಟಕವು 6,395 ಆನೆಗಳಿಗೆ ನೆಲೆಯಾಗಿದ್ದು ಇದು ದೇಶದಲ್ಲಿ ಅತಿ ಹೆಚ್ಚು. ಇದಲ್ಲದೆ, ಹುಲಿಗಳ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಮಾನವ-ಪ್ರಾಣಿ ಸಂಘರ್ಷಗಳನ್ನು ತಗ್ಗಿಸಲು, ಅರಣ್ಯ ಗಡಿಗಳಲ್ಲಿ ರೈಲು ಬ್ಯಾರಿಕೇಡ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಅರಣ್ಯ ವೃದ್ಧಿಸಲು ಸರ್ಕಾರ ಶ್ರಮಿಸುತ್ತಿದ್ದು, ಕಳೆದ 2 ವರ್ಷದಲ್ಲಿ 15 ಸಾವಿರ ಎಕರೆ ಜಮೀನನ್ನು ಹೊಸದಾಗಿ ಅರಣ್ಯ ಪ್ರದೇಶ ಎಂದು ಅಧಿಸೂಚನೆ ಮಾಡಲಾಗಿದೆ.

ಬೆಂಗಳೂರಿನಲ್ಲಿ 4 ಸಾವಿರ ಕೋಟಿ ರೂ. ಬೆಲೆ ಬಾಳುವ 128 ಎಕರೆ ಸೇರಿದಂತೆ ರಾಜ್ಯದಾದ್ಯಂತ ಸಾವಿರಾರು ಕೋಟಿ ರೂ. ಬೆಲೆ ಬಾಳುವ 6 ಸಾವಿರ ಎಕರೆಗೂ ಹೆಚ್ಚು ಅರಣ್ಯ ಒತ್ತುವರಿ ತೆರವು ಮಾಡಲಾಗಿದೆ. ಕಳೆದ 2 ವರ್ಷದಲ್ಲಿ 15 ಸಾವಿರ ಎಕರೆ ಜಮೀನನ್ನು ಹೊಸದಾಗಿ ಅರಣ್ಯ ಪ್ರದೇಶ ಎಂದು ಅಧಿಸೂಚನೆ ಮಾಡಲಾಗಿದೆ. 5,050 ಎಕರೆಗಳನ್ನು ಖಾಸಗಿ ಸಂಸ್ಥೆಗಳಿಂದ ಹಿಂದಕ್ಕೆ ತೆಗೆದುಕೊಳ್ಳಲಾಗಿದ್ದು, HMT ಯಿಂದ 5,000 ಕೋಟಿ ರೂ. ಮೌಲ್ಯದ ಭೂಮಿಯನ್ನು ಮರಳಿ ಪಡೆಯಲಾಗಿದೆ.

Eshwar Khandre
ಬೆಂಗಳೂರಿನಲ್ಲಿ ಬೃಹತ್ ಜೈವಿಕ ಉದ್ಯಾನ 2.5 ವರ್ಷಗಳಲ್ಲಿ ನಿರ್ಮಾಣ: ಸಚಿವ ಈಶ್ವರ್ ಖಂಡ್ರೆ

ಕೆಎಸ್‌ಡಿಎಲ್' 5 ಸಾವಿರ ಕೋಟಿ ರೂ ವಹಿವಾಟು ಗುರಿ

ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (ಕೆಎಸ್‌ಡಿಎಲ್) ಕಳೆದ ಹಣಕಾಸು ವರ್ಷದಲ್ಲಿ ರೂ.417 ಕೋಟಿ ಲಾಭ ಗಳಿಸಿದ್ದು, ಮುಂದಿನ ಐದು ವರ್ಷದಲ್ಲಿ 5 ಸಾವಿರ ಕೋಟಿ ರೂ.ವಹಿವಾಟಿನ ಗುರಿ ಇದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಅವರು ಹೇಳಿದರು.

ಎರಡು ವರ್ಷಗಳ ಹಿಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಕೆಎಸ್‌ಡಿಎಲ್ ಆದಾಯ ಕುಸಿತ ಮತ್ತು ಭ್ರಷ್ಟಾಚಾರವನ್ನು ಎದುರಿಸುತ್ತಿತ್ತು. ಅದೇ ಸಿಬ್ಬಂದಿ ಮತ್ತು ಉಪಕರಣಗಳೊಂದಿಗೆ ಸುಧಾರಣೆಗಳ ತಂದು ಉತ್ಪಾದನೆಯಲ್ಲಿ ಶೇ.40 ಹೆಚ್ಚಳವಾಗುವಂತೆ ಮಾಡಿದ್ದೇವೆ. ಕಳೆದ ವರ್ಷ, ಕೆಎಸ್‌ಡಿಎಲ್ 414 ಕೋಟಿ ರೂ. ಆದಾಯವನ್ನು ಗಳಿಸಿತ್ತು. ಎರಡು ವರ್ಷಗಳಲ್ಲಿ 3,000 ಕೋಟಿ ರೂ ಗಳಿದೆ. ಇದೀಗ ಮುಂದಿನ ಐದು ವರ್ಷಗಳಲ್ಲಿ 5,000 ಕೋಟಿ ರೂ.ಗಳನ್ನು ತಲುಪುವ ಗುರಿಯನ್ನು ಹೊಂದಿದ್ದೇವೆ” ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com