Virat Kohli shed tears on the field!
ವಿರಾಟ್ ಕೊಹ್ಲಿ

ಬೆಂಗಳೂರು ಕಾಲ್ತುಳಿತ: ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ RCB, KSCA, DNA ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ.
Published on

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ RCB ಸ್ಟಾರ್​ ಆಟಗಾರ ವಿರಾಟ್ ಕೊಹ್ಲಿ ವಿರುದ್ಧವೂ ಪೊಲೀಸರಿಗೆ ಶುಕ್ರವಾರ ದೂರು ನೀಡಲಾಗಿದೆ.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ RCB, KSCA, DNA ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ.

ಇದೀಗ ವಿರಾಟ್ ಕೊಹ್ಲಿ ವಿರುದ್ಧವೂ ಎಫ್​ಐಆರ್ ದಾಖಲಿಸುವಂತೆ ನೈಜ ಹೋರಾಟಗಾರರ ವೇದಿಕೆ ಆಗ್ರಹಿಸಿದೆ. ಅಲ್ಲದೆ ಈ ಸಂಬಂಧ ನೈಜ ಹೋರಾಟಗಾರರ ವೇದಿಕೆಯ ಎಚ್ ಎಂ ವೆಂಕಟೇಶ್ ಅವರು ವಿರಾಟ್ ಕೊಹ್ಲಿ ವಿರುದ್ಧ ದೂರು ನೀಡಿದ್ದಾರೆ.

Virat Kohli shed tears on the field!
ಬೆಂಗಳೂರಿನಲ್ಲಿ ಕಾಲ್ತುಳಿತ: X ನಲ್ಲಿ #arrestkohli ಟ್ರೆಂಡ್‌; ಲಂಡನ್‌ಗೆ ಹಾರಿದ RCB ಆಟಗಾರ?

ಮೊದಲು ದೂರು ಸ್ವೀಕರಿಸಲು ಹಿಂದೇಟು ಹಾಕಿದ ಕಬ್ಬನ್ ಪಾರ್ಕ್ ಪೊಲೀಸರು, ಹಲವು ಗಂಟೆಗಳ ಬಳಿಕ ಕೊನೆಗೂ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಈಗಾಗಲೇ ದಾಖಲಾಗಿರುವ ಎಫ್ಐಆರ್ ಜತೆ ಇದನ್ನು ಪರಿಗಣಿಸುವುದಾಗಿ ಹಿಂಬರಹ ನೀಡಿದ್ದಾರೆ.

ಮೊದಲ ಬಾರಿ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ(RCB)ದ ಸಂಭ್ರಮಾಚರಣೆ ವೇಳೆ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com