ಬೆಂಗಳೂರಿನ ಕಾಲ್ತುಳಿತ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು

ಕಾನೂನು ಮತ್ತು ಸುರಕ್ಷತೆಯ ಬಗ್ಗೆ ಯಾವುದೇ ಪೂರ್ವ ಸಿದ್ಧತೆ ಇಲ್ಲದೆ ವಿಧಾನಸೌಧದ ಮುಂದೆ ತರಾತುರಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಿಂದ ಈ ದುರಂತ ಸಂಭವಿಸಿದೆ.
Snehamayi Krishna
ಸ್ನೇಹಮಯಿ ಕೃಷ್ಣ
Updated on

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶಿವಕುಮಾರ್ ಮತ್ತು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ​​ಪದಾಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದು, ಈ ದುರಂತಕ್ಕೆ ಸರ್ಕಾರದ ಬೇಜವಾಬ್ದಾರಿಯೇ ಕಾರಣ ಎಂದು ಆರೋಪಿಸಿದ್ದಾರೆ.

ಸ್ನೇಹಮಯಿ ಕೃಷ್ಣ ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಸಿಎಂ, ಡಿಸಿಎಂ ವಿರುದ್ಧ ದೂರು ನೀಡಿದ್ದು, "ಇದು ಸರ್ಕಾರದ ಬೇಜವಾಬ್ದಾರಿಯಿಂದ ಉಂಟಾದ ದುರಂತ. ಆರ್‌ಸಿಬಿ ರಾಜ್ಯವನ್ನು ಪ್ರತಿನಿಧಿಸುವ ತಂಡವಲ್ಲ. ಇದು ಮದ್ಯ ಮಾರಾಟಗಾರರು ಖರೀದಿಸಿದ ಖಾಸಗಿ ತಂಡ. ಹೀಗಾಗಿ ರಾಜ್ಯ ಸರ್ಕಾರ ಅವರನ್ನು ಆಹ್ವಾನಿಸಿ ಸನ್ಮಾನಿಸುವ ಅಗತ್ಯವಿರಲಿಲ್ಲ" ಎಂದು ಹೇಳಿದ್ದಾರೆ.

ಕಾನೂನು ಮತ್ತು ಸುರಕ್ಷತೆಯ ಬಗ್ಗೆ ಯಾವುದೇ ಪೂರ್ವ ಸಿದ್ಧತೆ ಇಲ್ಲದೆ ವಿಧಾನಸೌಧದ ಮುಂದೆ ತರಾತುರಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಿಂದ ಈ ದುರಂತ ಸಂಭವಿಸಿದೆ. ಈ ದುರಂತಕ್ಕೆ ಸಿಎಂ ಮತ್ತು ಡಿಸಿಎಂ ಅವರೇ ಹೊಣೆ ಎಂದು ಅವರು ಆರೋಪಿಸಿದ್ದಾರೆ.

Snehamayi Krishna
'ರಾಜಕೀಯ ಮಾಡುವುದಿಲ್ಲ, ಕ್ರಮ ಕೈಗೊಂಡಿದ್ದೇನೆ': ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರದ ಕ್ರಮಕ್ಕೆ ಸಿದ್ದರಾಮಯ್ಯ ಸಮರ್ಥನೆ

"ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಇದಕ್ಕೆ ಮುಖ್ಯಮಂತ್ರಿ ಮತ್ತು ಡಿಸಿಎಂ ಕಾರಣ. ಪೊಲೀಸರು ಯುಡಿಆರ್ (ಅಸ್ವಾಭಾವಿಕ ಸಾವಿನ ವರದಿ) ದಾಖಲಿಸಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಭಾರತೀಯ ದಂಡ ಸಂಹಿತೆಯ 106 ನೇ ವಿಧಿಯ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು" ಎಂದು ಅವರು ಮನವಿ ಮಾಡಿದ್ದಾರೆ.

ಇನ್ನು ವಿರೋಧ ಪಕ್ಷಗಳು ಸಹ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಟೀಕಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com