ಬೆಂಗಳೂರು: ಮೇಲ್ಸೇತುವೆಯಿಂದ ಬಿದ್ದು ಯುವಕ ಅನುಮಾನಾಸ್ಪದ ಸಾವು!

ಮೃತ ಯುವಕನನ್ನು ಹೆಬ್ಬಾಳದ ಶಿವಶಂಕರ್ ಲೇಔಟ್ ನಿವಾಸಿ ಮುನಿರಾಜು (22) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ 12:30ರ ಸುಮಾರಿಗೆ ಈ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಮಾಲ್ ಆಫ್ ಏಷ್ಯಾದ ಮುಂಭಾಗದಲ್ಲಿರುವ ಜಕ್ಕೂರು ಮೇಲ್ಸೇತುವೆಯಿಂದ ಬಿದ್ದುಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.

ಮೃತ ಯುವಕನನ್ನು ಹೆಬ್ಬಾಳದ ಶಿವಶಂಕರ್ ಲೇಔಟ್ ನಿವಾಸಿ ಮುನಿರಾಜು (22) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ 12:30ರ ಸುಮಾರಿಗೆ ಈ ಘಟನೆ ನಡೆದಿದೆ.

ತಾಯಿಗೆ ಸ್ನೇಹಿತರನ್ನು ಭೇಟಿಯಾಗಿ ಬರುತ್ತೇನೆಂದು ಹೇಳಿ ಹೊರಟಿದ್ದ ಯುವಕ, ಫ್ಲೈಓವರ್ ಮೇಲೆ ಬೈಕ್ ನಿಲ್ಲಿಸಿ ಬಳಿಕ ಮೇಲ್ಸೇತುವೆಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಕುರಿತು ಪೊಲೀಸರು ಹೆದ್ದಾರಿಯ ಸಿಸಿಟಿವಿಗಳ ಪರಿಶೀಲನೆ ನಡೆಸುತ್ತಿದ್ದು, ಸಾವನ್ನಪ್ಪಿದ್ದು ಹೇಗೆ ಎಂದು ತನಿಖೆಯಿಂದ ಹೊರಬರಬೇಕಿದೆ. ಸದ್ಯ ಘಟನೆ ಸಂಬಂಧ ಕೊಡಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಂದರ್ಭಿಕ ಚಿತ್ರ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ: ಭೀಕರ ಅಪಘಾತ; ಇಬ್ಬರು ಸಾವು, ನಾಲ್ವರ ಸ್ಥಿತಿ ಗಂಭೀರ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com