RCB ಸನ್ಮಾನ ಸಮಾರಂಭಕ್ಕೆ ರಾಜ್ಯಪಾಲರು ತಾವಾಗೆ ಬಂದಿಲ್ಲ, ನಾನೇ ಕರೆಸಿದ್ದು: ಸಿಎಂ ಸಿದ್ದರಾಮಯ್ಯ ಯೂಟರ್ನ್!

ಆರ್‌ಸಿಬಿ ಆಟಗಾರರ ಸನ್ಮಾನ ಸಮಾರಂಭಕ್ಕೆ ರಾಜ್ಯಪಾಲರು ತಾವಾಗೆ ಬಂದಿರಲಿಲ್ಲ. ಅವರನ್ನು ನಾನೇ ಆಹ್ವಾನಿಸಿದ್ದೆ ಎಂದು ಹೇಳಿದರು.
ಆರ್ ಸಿಬಿ ಸನ್ಮಾನ ಕಾರ್ಯಕ್ರಮ
ಆರ್ ಸಿಬಿ ಸನ್ಮಾನ ಕಾರ್ಯಕ್ರಮ
Updated on

ಚಿಕ್ಕಬಳ್ಳಾಪುರ: ವಿಧಾನಸೌಧದ ಮುಂಭಾಗ ನಡೆದ ಆರ್‌ಸಿಬಿ (RCB) ಆಟಗಾರರ ಸನ್ಮಾನ ಸಮಾರಂಭಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಆಹ್ವಾನಿಸಿದ್ದು ತಾನೇ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ಗೌರಿಬಿದನೂರು ಬಳಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆರ್‌ಸಿಬಿ ಆಟಗಾರರ ಸನ್ಮಾನ ಸಮಾರಂಭಕ್ಕೆ ರಾಜ್ಯಪಾಲರು ತಾವಾಗೆ ಬಂದಿರಲಿಲ್ಲ. ಅವರನ್ನು ನಾನೇ ಆಹ್ವಾನಿಸಿದ್ದೆ ಎಂದು ಹೇಳಿದರು. ಜೂನ್ 4ರಂದು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ​​ಮತ್ತು ಆರ್‌ಸಿಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಎಂದು ಸಿಎಂ ಹೇಳಿದರು.

ಆ ದಿನ ಬೆಳಿಗ್ಗೆ 11.29ಕ್ಕೆ ಕೆಎಸ್‌ಸಿಎಯಿಂದ (KSCA) ಶಂಕರ್ ಮತ್ತು ಜಯರಾಮ್ ನನ್ನನ್ನು ಆಹ್ವಾನಿಸಿದ್ದು ಅದಕ್ಕೆ ನಾನು ಒಪ್ಪಿಕೊಂಡೆ ಎಂದು ಸಿದ್ದರಾಮಯ್ಯ ಹೇಳಿದರು. ರಾಜ್ಯಪಾಲರು ತಾವಾಗಿಯೇ ಬಂದಿದ್ದಾರೆ ಎಂಬ ಸುದ್ದಿಯನ್ನು ಪತ್ರಿಕೆಗಳು ಮತ್ತು ಮಾಧ್ಯಮಗಳು ಪ್ರಸಾರ ಮಾಡಿದ್ದು ತಪ್ಪು ಎಂದು ಸಿಎಂ ಹೇಳಿದರು.

ಆರ್ ಸಿಬಿ ಸನ್ಮಾನ ಕಾರ್ಯಕ್ರಮ
RCB ಮಾರ್ಕೆಟಿಂಗ್ ಮುಖ್ಯಸ್ಥರ ಜಾಮೀನು ಅರ್ಜಿ: ಜೂನ್ 12ಕ್ಕೆ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದ ಗೋವಿಂದರಾಜು ಅವರು ರಾಜ್ಯಪಾಲರಿಗೆ ಕರೆ ಮಾಡಿ ನನಗೆ ಫೋನ್ ಕೊಟ್ಟರು. ನಾನು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೆನೆ. ಹೀಗಾಗಿ ರಾಜ್ಯಪಾಲರನ್ನು ಬರುವಂತೆ ಆಹ್ವಾನಿಸಿದೆ. ಅಭಿನಂದನಾ ಕಾರ್ಯಕ್ರಮವು 20 ನಿಮಿಷಗಳಲ್ಲಿ ಮುಗಿಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ರಾಜ್ಯಪಾಲರನ್ನು ಆಹ್ವಾನಿಸಿತ್ತು ಎಂಬ ಸಿದ್ದರಾಮಯ್ಯ ಅವರ ಹಿಂದಿನ ಹೇಳಿಕೆಗೆ ಇದು ವಿರುದ್ಧವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com