
ಬೆಂಗಳೂರು: ರಾಜ್ಯದಲ್ಲಿ ಬಾಕಿ ಉಳಿದಿದ್ದ 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ರಾಜ್ಯ ಬಿಜೆಪಿ ನೇಮಕ ಮಾಡಿದೆ.
ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ ಎಂದು ರಾಜ್ಯ ಚುನಾವಣಾಧಿಕಾರಿ ಕ್ಯಾ.ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.
ಪಕ್ಷ ನೇಮಿಸಿರುವ ರಾಜ್ಯ ಚುನಾವಣಾಧಿಕಾರಿಯಾಗಿ ಜಿಲ್ಲಾ ಅಧ್ಯಕ್ಷರನ್ನು ಅಭಿನಂದಿಸಿರುವ ಕ್ಯಾ. ಗಣೇಶ್ ಕಾರ್ಣಿಕ್, ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸಧೃಢಗೊಳಿಸುತ್ತಾ, ಮುಂಬರುವ ಎಲ್ಲ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸುವಿರೆಂದು ಆಶಿಸುತ್ತೇನೆಂದು ಹೇಳಿದ್ದಾರೆ.
ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪಟ್ಟಿ ಇಂತಿದೆ...
ಮೈಸೂರು ಗ್ರಾಮಾಂತರ - ಕೆಎನ್ ಸುಬ್ಬಣ್ಣ
ಹಾಸನ - ಸಿದ್ದೇಶ್ ನಾಗೇಂದ್ರ
ಕೊಡಗು - ರವಿ ಕಾಳಪ್ಪ
ಉಡುಪಿ - ಕುತ್ಯಾರು ನವೀನ್ ಶೆಟ್ಟಿ
ದಾವಣಗೆರೆ - ಎನ್ ರಾಜಶೇಖರ
ಹಾವೇರಿ - ವಿರೂಪಾಕ್ಷಪ್ಪ ಬಳ್ಳಾರಿ
ಚಿತ್ರದುರ್ಗ - ಕೆ.ಟಿ. ಕುಮಾರಸ್ವಾಮಿ
ತುಮಕೂರು - ಎಚ್.ಎಸ್. ರವಿಕುಮಾರ್ (ಹೆಬ್ಬಾಕ)
ಮಧುಗಿರಿ - ಚಿದಾನಂದ ಗೌಡ
Advertisement