ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮಂಗಳೂರಿಗೆ ಆಗಮಿಸಿದ NIA ತಂಡ, ತನಿಖೆ ಆರಂಭ

ಎನ್‌ಐಎ ಉಪ ಪೊಲೀಸ್ ವರಿಷ್ಠಾಧಿಕಾರಿ ಪವನ್ ಕುಮಾರ್ ನೇತೃತ್ವದ ತಂಡ, ಸ್ಥಳೀಯ ಪೊಲೀಸರೊಂದಿಗೆ ಸಮನ್ವಯ ಸಾಧಿಸಲು ಪ್ರಾರಂಭಿಸಿದೆ.
Suhas Shetty
ಸುಹಾಸ್ ಶೆಟ್ಟಿ
Updated on

ಮಂಗಳೂರು: ಮೇ 1 ರಂದು ಬಜ್ಪೆ ಪಟ್ಟಣದಲ್ಲಿ ಹತ್ಯೆಯಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ವಹಿಸಿದ್ದು, ಶನಿವಾರ ಎನ್ಐಎ ಅಧಿಕಾರಿಗಳ ತಂಡ ಮಂಗಳೂರಿಗೆ ಆಗಮಿಸಿ ತನಿಖೆ ಆರಂಭಿಸಿದೆ.

ಎನ್‌ಐಎ ಉಪ ಪೊಲೀಸ್ ವರಿಷ್ಠಾಧಿಕಾರಿ ಪವನ್ ಕುಮಾರ್ ನೇತೃತ್ವದ ತಂಡ, ಸ್ಥಳೀಯ ಪೊಲೀಸರೊಂದಿಗೆ ಸಮನ್ವಯ ಸಾಧಿಸಲು ಪ್ರಾರಂಭಿಸಿದೆ.

ಮಂಗಳೂರು ಪೊಲೀಸರು ಎನ್‌ಐಎ ತಂಡದ ಆಗಮನವನ್ನು ದೃಢಪಡಿಸಿದ್ದು, ಪ್ರಾಥಮಿಕ ಮಾಹಿತಿಯನ್ನು ನಗರ ಅಪರಾಧ ಶಾಖೆ(ಸಿಸಿಬಿ) ಅಧಿಕಾರಿಗಳೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

Suhas Shetty
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: NIA ತನಿಖೆ ಕುರಿತು ಚರ್ಚಿಸಿ ತೀರ್ಮಾನ- ಸಚಿವ ಪರಮೇಶ್ವರ್

ಕೇಂದ್ರ ಗೃಹ ಸಚಿವಾಲಯ ಇತ್ತೀಚೆಗೆ ಪ್ರಕರಣವನ್ನು NIA ಗೆ ವರ್ಗಾಯಿಸಿತ್ತು.

ಅಧಿಕೃತ ಮೂಲಗಳ ಪ್ರಕಾರ, ಸುಹಾಸ್ ಶೆಟ್ಟಿ ಅವರ "ಹತ್ಯೆ", "ಜನರ ಮನಸ್ಸಿನಲ್ಲಿ ಭಯವನ್ನು ಸೃಷ್ಟಿಸುವ" ಉದ್ದೇಶಿತ ಕೃತ್ಯವಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ಎನ್ಐಎ ನಿರ್ದೇಶನ ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com