ಬ್ಲ್ಯಾಕ್‌ಮೇಲ್, ಅತ್ಯಾಚಾರ ಯತ್ನ: ಬೆಂಗಳೂರು ಪೊಲೀಸರಿಂದ ಕೇರಳ ಅರ್ಚಕನ ಬಂಧನ

ಪೊಲೀಸರ ಪ್ರಕಾರ, ಬಂಧಿತ ವ್ಯಕ್ತಿಯನ್ನು ಕೇರಳದಲ್ಲಿರುವ ಪೆರಿಂಗೊಟ್ಟುಕರ ದೇವಸ್ಥಾನದ ಅರುಣ್ ಎಂದು ಗುರುತಿಸಲಾಗಿದೆ.
Representative image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಮಹಿಳೆಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಬೆಂಗಳೂರು ಪೊಲೀಸರು ಕೇರಳದ ಅರ್ಚಕರೊಬ್ಬರನ್ನು ಬಂಧಿಸಿದ್ದಾರೆ ಮತ್ತು ತಲೆಮರೆಸಿಕೊಂಡಿರುವ ಮತ್ತೊಬ್ಬ ಅರ್ಚಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಬಂಧಿತ ವ್ಯಕ್ತಿಯನ್ನು ಕೇರಳದಲ್ಲಿರುವ ಪೆರಿಂಗೊಟ್ಟುಕರ ದೇವಸ್ಥಾನದ ಅರುಣ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಾಲಯದ ಪ್ರಧಾನ ಅರ್ಚಕ ಉನ್ನಿ ದಾಮೋದರನ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಆರ್ಥಿಕ ತೊಂದರೆಗಳನ್ನು ಅನುಭವಿಸುತ್ತಿದ್ದ ಮಹಿಳೆಯ ಕುಟುಂಬಕ್ಕೆ ಪರಿಹಾರಕ್ಕಾಗಿ ಪೆರಿಂಗೊಟ್ಟುಕರ ದೇವಸ್ಥಾನಕ್ಕೆ ಭೇಟಿ ನೀಡುವಂತೆ ಆಕೆಯ ಸ್ನೇಹಿತರು ಸಲಹೆ ನೀಡಿದ್ದರು. ಬೆಂಗಳೂರಿನ ನಿವಾಸಿಯಾಗಿರುವ ಸಂತ್ರಸ್ತ ಮಹಿಳೆ ದೇವಾಲಯದ ಬಗ್ಗೆ ವಿಡಿಯೋವನ್ನು ಸಹ ನೋಡಿದ್ದರು ಮತ್ತು ಅಲ್ಲಿ ವಿಶೇಷ ಪೂಜೆ ಮಾಡುವುದರಿಂದ ಆಕೆಯ ಬಿಕ್ಕಟ್ಟು ಕೊನೆಗೊಳ್ಳುತ್ತದೆ ಎಂದು ಮನವರಿಕೆ ಮಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Representative image
ಮದುವೆ ಮನೆಯಿಂದ ಅಪಹರಿಸಿ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಬಂಧನ

ವಿಶೇಷ ಪೂಜೆ ಮಾಡಲು ಮಹಿಳೆ ದೇವಸ್ಥಾನಕ್ಕೆ ಹೋದಾಗ ಆರೋಪಿಗೆ ಪರಿಚಯವಾಯಿತು. ಆರೋಪಿ ಅರ್ಚಕರು ಆಕೆಯ ವಿಶ್ವಾಸವನ್ನು ಗಳಿಸಿದರು. ನಂತರ ಆಕೆಗೆ ವಾಟ್ಸಾಪ್ ವಿಡಿಯೋ ಕರೆಗಳನ್ನು ಮಾಡಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಆಕೆಯ ದುರ್ಬಲ ಪರಿಸ್ಥಿತಿಯ ಲಾಭ ಪಡೆದು, ಆರೋಪಿಯು ಸಂತ್ರಸ್ತೆಯನ್ನು ಮಾಟಮಂತ್ರ ಮಾಡುವ ನೆಪದಲ್ಲಿ ಬೆದರಿಸಿ ಅಪರಾಧ ಎಸಗಿದ್ದಾನೆ. ನಂತರ, ಅವರು ಆಕೆಯನ್ನು ದೇವಸ್ಥಾನಕ್ಕೆ ಕರೆಸಿ ಈ ಬಾರಿ ಲೈಂಗಿಕ ಕ್ರಿಯೆಗೆ ಸಹಕಾರ ನೀಡುವಂತೆ ಒತ್ತಾಯಿಸಿದ್ದು, ಅಸ್ವಾಭಾವಿಕ ಲೈಂಗಿಕ ಕ್ರಿಯೆಗೂ ಒತ್ತಾಯಿಸಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com