ಕಲಬುರಗಿ: ಕೋರ್ಟ್ ಹಾಲ್ ಗೆ ಬರುವ ಮುನ್ನ ಹೃದಯಾಘಾತ; ನ್ಯಾಯಾಧೀಶ ಸಾವು

ಕಳೆದ ವಾರವೇ ಕಲಬುರಗಿ ಕೋರ್ಟ್‌ಗೆ ವಿಶ್ವನಾಥ್ ಅವರು ವರ್ಗಾವಣೆಯಾಗಿದ್ದರು. ಇಂದು ಬೆಳಗ್ಗೆ ಎಂದಿನಂತೆ ಕೋರ್ಟ್‌ಗೆ ಬಂದಿದ್ದರು.
Vishwanath
ವಿಶ್ವನಾಥ್ ವಿ ಮೂಗತಿ
Updated on

ಕಲಬುರಗಿ: ಕೋರ್ಟ್ ಹಾಲ್‌ಗೆ ತೆರಳುವ ಕೆಲವೇ ನಿಮಿಷಗಳಿಗೂ ಮುನ್ನ ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶರು ಸಾವನಪ್ಪಿರುವ ಘಟನೆ, ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ.

ಕಲಬುರಗಿ ಜಿಲ್ಲಾ 3ನೇ ಹಿರಿಯ ಶ್ರೇಣಿ ನ್ಯಾಯಾಧೀಶರಾದ ವಿಶ್ವನಾಥ್ ವಿ ಮೂಗತಿ (44) ಸಾವನ್ನಪ್ಪಿದ ದುರ್ದೈವಿ. ಕಳೆದ ವಾರವೇ ಕಲಬುರಗಿ ಕೋರ್ಟ್‌ಗೆ ವಿಶ್ವನಾಥ್ ಅವರು ವರ್ಗಾವಣೆಯಾಗಿದ್ದರು. ಇಂದು ಬೆಳಗ್ಗೆ ಎಂದಿನಂತೆ ಕೋರ್ಟ್‌ಗೆ ಬಂದಿದ್ದರು.

ಆದರೆ ಕೋರ್ಟ್ ಹಾಲ್‌ಗೆ ಬರುವುದಕ್ಕಿಂತ ಮುಂಚೆ ಎದೆಯಲ್ಲಿ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಲಾಗಿದೆ. ಆದರೆ ಆಸ್ಪತ್ರೆ ಕರೆತರುವ ಮುನ್ನವೇ ನ್ಯಾಯಧೀಶರು ಕೊನೆ ಉಸಿರೆಳೆದಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com