ಬೆಂಗಳೂರು: ಮಂಚನಬೆಲೆ ಡ್ಯಾಂನಲ್ಲಿ ಮುಳುಗಿ ಡಿಪ್ಲೊಮಾ ವಿದ್ಯಾರ್ಥಿ ದಾರುಣ ಸಾವು

ಬುಧವಾರ ಮಧ್ಯಾಹ್ನ 12.30 ರ ಸುಮಾರಿಗೆ ಮೃತ ವಿದ್ಯಾರ್ಥಿ ವಿಕಾಸ್, ತನ್ನ ಸ್ನೇಹಿತರಾದ ಸೃಜನ್ ಮತ್ತು ಲೋಕೇಶ್ ಗೌಡ ಅವರೊಂದಿಗೆ ಮಂಚನಬೆಲೆ ಡ್ಯಾಂಗೆ ಈಜಲು ಹೋಗಿದ್ದಾರೆ.
Manchanabele dam
ಮಂಚನಬೆಲೆ ಡ್ಯಾಂ
Updated on

ಬೆಂಗಳೂರು: ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಡಿಪ್ಲೊಮಾ ವಿದ್ಯಾರ್ಥಿ ಮಂಚನಬೆಲೆ ಡ್ಯಾಂನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಮುರುಗೇಶಪಾಳ್ಯದ ನಿವಾಸಿ, ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿ ವಿಕಾಸ್ (19) ಎಂದು ಗುರುತಿಸಲಾಗಿದೆ.

ಬುಧವಾರ ಮಧ್ಯಾಹ್ನ 12.30 ರ ಸುಮಾರಿಗೆ ಮೃತ ವಿದ್ಯಾರ್ಥಿ ವಿಕಾಸ್, ತನ್ನ ಸ್ನೇಹಿತರಾದ ಸೃಜನ್ ಮತ್ತು ಲೋಕೇಶ್ ಗೌಡ ಅವರೊಂದಿಗೆ ಮಂಚನಬೆಲೆ ಡ್ಯಾಂಗೆ ಈಜಲು ಹೋಗಿದ್ದಾರೆ.

ನೀರಿನಲ್ಲಿ ಕೆಲವೇ ನಿಮಿಷಗಳಲ್ಲಿ ವಿಕಾಸ್ ಆಳಕ್ಕೆ ಸಿಲುಕಿ ಮುಳುಗಲು ಆರಂಭಿಸಿದ್ದಾನೆ. ಕೂಡಲೇ ಸ್ನೇಹಿತರು ಪೊಲೀಸರು ಹಾಗೂ ಅಗ್ನಿಶಾಮಕ ದಳ ಮತ್ತು ತುರ್ತು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಜಿದ್ದಾರೆ. ಬಳಿಕ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.

ಸುಮಾರು 6 ಗಂಟೆಗಳ ಹುಡುಕಾಟದ ಬಳಿಕ ವಿಕಾಸ್ ಮೃತದೇಹ ಪತ್ತೆಯಾಗಿದೆ. ಇದೀಗ ಮೃತದೇಹವ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅಸ್ವಾಭಾವಿಕ ಮರಣ ವರದಿ (ಯುಡಿಆರ್) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Manchanabele dam
ಬೆಳಗಿನ ಉಪಹಾರ ಸೇವಿಸದೆ ನಿತ್ರಾಣ: ಶಾಲಾ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com