ಲೋಕಾಯುಕ್ತರ ಹೆಸರಲ್ಲಿ ಹಣ ವಸೂಲಿ ಆರೋಪ: ನಿಂಗಪ್ಪಗೆ ಮಧ್ಯಂತರ ಜಾಮೀನು

ನಿಂಗಪ್ಪ ಪತ್ನಿ ಜಿ ಕೆ ಚಂದ್ರಕಲಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠವು ನ್ಯಾಯಾಲಯದ ವ್ಯಾಪ್ತಿ ತೊರೆಯುವಂತಿಲ್ಲ. ತನಿಖೆಗೆ ಸಹಕರಿಸಬೇಕು ಎಂಬ ಷರತ್ತುಗಳನ್ನು ವಿಧಿಸಿದೆ.
Karnataka high Court
ಕರ್ನಾಟಕ ಹೈಕೋರ್ಟ್
Updated on

ಬೆಂಗಳೂರು: ಲೋಕಾಯುಕ್ತರ ಹೆಸರಲ್ಲಿ ಹಲವಾರು ಸರ್ಕಾರಿ ಅಧಿಕಾರಿಗಳಿಂದ ಕೋಟ್ಯಂತರ ರೂಪಾಯಿ ಸುಲಿಗೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಿವೃತ್ತ ಹೆಡ್‌ ಕಾನ್‌ಸ್ಟೆಬಲ್‌ ನಿಂಗಪ್ಪ ಸಾವಂತ್‌ಗೆ ಹೈಕೋರ್ಟ್‌ ಗುರುವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ನಿಂಗಪ್ಪ ಪತ್ನಿ ಜಿ ಕೆ ಚಂದ್ರಕಲಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠವು ನ್ಯಾಯಾಲಯದ ವ್ಯಾಪ್ತಿ ತೊರೆಯುವಂತಿಲ್ಲ. ತನಿಖೆಗೆ ಸಹಕರಿಸಬೇಕು ಎಂಬ ಷರತ್ತುಗಳನ್ನು ವಿಧಿಸಿದೆ. ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಗಪ್ಪ ಮತ್ತು ಲೋಕಾಯುಕ್ತ ಪೊಲೀಸರು ಮಾಧ್ಯಮಗಳ ಜೊತೆ ಮಾತನಾಡುವಂತಿಲ್ಲ ಎಂಬ ಷರತ್ತನ್ನೂ ಇದೇ ವೇಳೆ ನ್ಯಾಯಾಲಯ ವಿಧಿಸಿದೆ.

ಸರ್ಕಾರಿ ಅಧಿಕಾರಿಗಳಿಂದ ಹಲವಾರು ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಜೂನ್ 2 ರಂದು ನಿಂಗಪ್ಪ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

Karnataka high Court
ಹೈಕೋರ್ಟ್ ತೀರ್ಪು ಎಫೆಕ್ಟ್: ಅನರ್ಹಗೊಂಡಿದ್ದ ಜರ್ನಾರ್ದನ ರೆಡ್ಡಿ ಶಾಸಕ ಸ್ಥಾನ ಮರುಸ್ಥಾಪನೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com