ಹಾಸನ: ಊಟಕ್ಕೆ ಕುಳಿತಿದ್ದಾಗಲೇ ಹೃದಯಾಘಾತ; ಕುಳಿತಲ್ಲೇ ಕುಸಿದುಬಿದ್ದ ಯುವಕ ಸಾವು

ಹಾಸನ ನಗರದ ಸತ್ಯಮಂಗಲ ಬಡಾವಣೆಯ 35 ವರ್ಷದ ಚೇತನ್ ಹೃದಯಾಘಾತದಿಂದ ಸಾವನ್ನಪ್ಪಿದವರು.
Chetan
ಚೇತನ್
Updated on

ಹಾಸನ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಸಣ್ಣ ವಯಸ್ಸಿನವರೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದು ಆತಂಕಕಾರಿಯಾಗಿದೆ. ಊಟಕ್ಕೆ ಕುಳಿತಿದ್ದ ವ್ಯಕ್ತಿಯೊಬ್ಬ ಎದೆನೋವೆಂದು ಹೇಳುತ್ತಿದ್ದಂತೆಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ನಗರದ ಸತ್ಯಮಂಗಲ ಬಡಾವಣೆಯ 35 ವರ್ಷದ ಚೇತನ್ ಹೃದಯಾಘಾತದಿಂದ ಸಾವನ್ನಪ್ಪಿದವರು. ಕಿಕ್ಕೇರಿ ಮೂಲದ ಚೇತನ್ ಹಾಸನದ ಹಳೇ ಬಸ್ ನಿಲ್ದಾಣದ ಬಳಿ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ವಾಸವಾಗಿದ್ದರು.

ರಾತ್ರಿ ಅಂಗಡಿ ಬಾಗಿಲು ಹಾಕಿಕೊಂಡು ಮನೆಗೆ ಚೇತನ್‌ ಮನೆಗೆ ಬಂದಿದ್ದರು. ಈ ವೇಳೆ ಅವರ ಪತ್ನಿ ಊಟಕ್ಕೆ ಕರೆದಿದ್ದು, ಊಟಕ್ಕೆ ಕುಳಿತುಕೊಳ್ಳುವಾಗ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಎದೆ ನೋಯುತ್ತಿದೆ ಎಂದು ಪತ್ನಿಗೆ ಹೇಳಿ, ಮೇಲೆ‌ ಎದ್ದೇಳುವಾಗಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲಿ ಚೇತನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Chetan
ಕಲಬುರಗಿ: ಕೋರ್ಟ್ ಹಾಲ್ ಗೆ ಬರುವ ಮುನ್ನ ಹೃದಯಾಘಾತ; ನ್ಯಾಯಾಧೀಶ ಸಾವು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com