ತುಮಕೂರು ಜಿಲ್ಲೆ ಹೆಸರನ್ನು ಯಾವುದೇ ಕಾರಣಕ್ಕೂ ಬದಲಿಸಲ್ಲ: ಸಚಿವ ಪರಮೇಶ್ವರ್ ಯೂ-ಟರ್ನ್

ನಮ್ಮ ಕಲೆ ಸಂಸ್ಕೃತಿನೇ ಬೇರೆ ಇದೆ. ಅನೇಕ ದೊಡ್ಡ ದೊಡ್ಡ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ದೊಡ್ಡ ರಂಗೇಗೌಡರು, ನರಹರಿ ಶಾಸ್ತ್ರಿಗಳು ಸೇರಿದಂತೆ ಅನೇಕರು ಗಣ್ಯ ವ್ಯಕ್ತಿಗಳಿದ್ದಾರೆ.
G Parameshwar
ಗೃಹ ಸಚಿವ ಜಿ ಪರಮೇಶ್ವರ್
Updated on

ಬೆಂಗಳೂರು: ತುಮಕೂರು ಜಿಲ್ಲೆ ಹೆಸರನ್ನು ಯಾವುದೇ ಕಾರಣಕ್ಕೂ ಬದಲಿಸಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕಲೆ ಮತ್ತು ಸಂಸ್ಕೃತಿ ವಿಭಿನ್ನವಾಗಿದೆ, ಅದರ ಬಗ್ಗೆ ನಾವು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ತುಮಕೂರನ್ನು ಬೆಂಗಳೂರು ಉತ್ತರ ಎಂದು ಮರುನಾಮಕರಣ ಮಾಡುವುದಿಲ್ಲ. ತುಮಕೂರು ವೇಗವಾಗಿ ಬೆಳೆಯುತ್ತಿದೆ ಎಂಬುದು ನಿಜ. ನಮ್ಮ ಮೆಟ್ರೋ ಜಾಲವನ್ನು ಜಿಲ್ಲೆಗೆ ವಿಸ್ತರಿಸಲು ಮತ್ತು ಇಲ್ಲಿಗೆ ಹೆಚ್ಚಿನ ಕೈಗಾರಿಕೆಗಳನ್ನು ಆಹ್ವಾನಿಸಲು ನಮ್ಮ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಹೇಳಿದರು.

ತುಮಕೂರು ಬೆಂಗಳೂರಿನ ದಕ್ಷಿಣ ಆಗಬಹುದು ಎಂದು ಕೇಳಿದಾಗ ನಾನು ಆದರೂ ಆಗಬಹುದು ಎಂದು ಹೇಳಿದ್ದೆ. ಆದರೆ ತುಮಕೂರಿನ ಜಿಲ್ಲೆಯ ಹೆಸರು ಬದಲಾಯಿಸುತ್ತೇವೆಂದು ಹೇಳಿರಲಿಲ್ಲ. ತುಮಕೂರಿನ ಹೆಸರನ್ನು ಯಾವುದೇ ಕಾರಣಕ್ಕೂ ಬದಲಾಯಿಸುವುದಿಲ್ಲ. ಅದಕ್ಕೆ ಅದರದೇ ಆದಂತ ಇತಿಹಾಸ ಸಂಸ್ಕೃತಿ ಇದೆ. ಯಾವುದೇ ಕಾರಣಕ್ಕೂ ತುಮಕೂರು ಜಿಲ್ಲೆಯ ಹೆಸರು ಬದಲಾಯಿಸುವುದಿಲ್ಲ ಎಂದು ತಿಳಿಸಿದರು.

ಬೆಂಗಳೂರು ವ್ಯಾಪ್ತಿಗೆ ಸೇರಿಸುವ ಪ್ರಶ್ನೆಗೆ ನಾನು ಉತ್ತರಿಸಿದ್ದೆ. ಆದರೂ ಆಗಬಹುದು ಎಂದಿದ್ದೆ. ಆದರೆ, ತುಮಕೂರು ಹೆಸರು ಬದಲಾಯಿಸುತ್ತೇವೆ ಅಂತ ಹೇಳಿಲ್ಲ. ಜಿಲ್ಲೆಯ ಹೆಸರು ಯಾವುದೇ ಕಾರಣಕ್ಕೂ ಬದಲಿಸುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.

ನಮ್ಮ ಕಲೆ ಸಂಸ್ಕೃತಿನೇ ಬೇರೆ ಇದೆ.ಅನೇಕ ದೊಡ್ಡ ದೊಡ್ಡ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ದೊಡ್ಡ ರಂಗೇಗೌಡರು, ನರಹರಿ ಶಾಸ್ತ್ರಿಗಳು ಸೇರಿದಂತೆ ಅನೇಕರು ಗಣ್ಯ ವ್ಯಕ್ತಿಗಳಿದ್ದಾರೆ. ಅದಕ್ಕಾಗಿ ತುಮಕೂರು ಹೆಸರನ್ನು ಯಾವುದೇ ಕಾರಣಕ್ಕೂ ಎಷ್ಟೇ ಬದಲಾವಣೆ ಅಭಿವೃದ್ಧಿ ಆದರೂ ಹೆಸರನ್ನು ಮಾತ್ರ ಬದಲಾಯಿಸುವುದಿಲ್ಲ ಎಂದು ಪರಮೇಶ್ವರ್ ಸ್ಪಷ್ಟನೆ ನೀಡಿದರು.

G Parameshwar
ತುಮಕೂರು ಜಿಲ್ಲೆಗೆ 'ಬೆಂಗಳೂರು ಉತ್ತರ' ಮರುನಾಮಕರಣಕ್ಕೆ ಸರ್ಕಾರ ಚಿಂತನೆ?

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com