Bengaluru Molestation case: ಗಾಂಜಾ ಮತ್ತಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ; ಪುಂಡರ ಪೈಶಾಚಿಕ ಕೃತ್ಯ CCTVಯಲ್ಲಿ ಸೆರೆ!

ಬೆಂಗಳೂರಿನ ಆನೇಕಲ್ ತಾಲೂಕಿನ ಮೈಲಸಂದ್ರ ಬಳಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ನಡೆದಿದೆ. ದಿನಸಿ ಖರೀದಿಸಲು ಹೋಗುತ್ತಿದ್ದ ಯುವತಿಯ ಮೇಲೆ ಐದಾರು ಯುವಕರು ಲೈಂಗಿಕ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ್ದಾರೆ.
Ganja Gang Sexual Assault, Attack Young Woman
ಯುವತಿ ಮೇಲೆ ಪುಂಡರ ಗ್ಯಾಂಗ್ ಲೈಂಗಿಕ ದೌರ್ಜನ್ಯ
Updated on

ಬೆಂಗಳೂರು: ದಿನಸಿ ತರಲು ಹೋದ ಯುವತಿ ಮೇಲೆ ಪುಂಡರ ಗ್ಯಾಂಗ್ ವೊಂದು ಲೈಂಗಿಕ ದೌರ್ಜನ್ಯವೆಸಗಿರುವ ಭೀಕರ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.

ಬೆಂಗಳೂರಿನ ಆನೇಕಲ್ ತಾಲೂಕಿನ ಮೈಲಸಂದ್ರ ಬಳಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ನಡೆದಿದೆ. ದಿನಸಿ ಖರೀದಿಸಲು ಹೋಗುತ್ತಿದ್ದ ಯುವತಿಯ ಮೇಲೆ ಐದಾರು ಯುವಕರು ಲೈಂಗಿಕ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ್ದಾರೆ.

ಯುವತಿಯನ್ನು ರಕ್ಷಿಸಲು ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಹಲ್ಲೆಗೀಡಾದ ಯುವತಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಮೂಲಗಳ ಪ್ರಕಾರ ರೇಣುಕಾ ಯಲ್ಲಮ್ಮ ಬಡಾವಣೆ ನಿವಾಸಿಯಾಗಿರುವ ಯುವತಿ ಜೂನ್ 22ರಂದು ಅಂದರೆ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ದಿನಸಿ ತರಲು ಅಂಗಡಿಗೆ ಹೊರಟಿದ್ದಳು. ಈ ವೇಳೆ ಐದಾರು ಜನರು ಯುವಕರು ನಡುರಸ್ತೆಯಲ್ಲಿ ಯುವತಿಯನ್ನು ಅಡ್ಡ ಹಾಕಿದ್ದಾರೆ.

ಬಳಿಕ, ಓರ್ವ ಯುವಕ ಯುವತಿಯ ಮೈಕೈ ಮುಟ್ಟಿ ಎಳೆದಾಡಿದ್ದಾರೆ. ಇದಕ್ಕೆ ಯುವತಿ ಪ್ರತಿರೋಧ ತೋರಿದ್ದಾಳೆ. ಆಗ, ಓರ್ವ ಯುವಕ ಯುವತಿ ಮೇಲೆ ಹಲ್ಲೆ ಮಾಡಿದ್ದಾನೆ.

Ganja Gang Sexual Assault, Attack Young Woman
ಐಶ್ವರ್ಯ ಗೌಡ ವಂಚನೆ ಪ್ರಕರಣ: "ಯಾವುದೇ ಹಣಕಾಸಿನ ವಹಿವಾಟು ನಡೆದಿಲ್ಲ; ED ನಡೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ"; ಡಿ.ಕೆ ಸುರೇಶ್

ಯುವತಿ ನೆರವಿಗೆ ಬಂಧ ಸ್ಥಳೀಯರ ಮೇಲೂ ಹಲ್ಲೆ

ಈ ವೇಳೆ ಸ್ಥಳೀಯರು ಯುವತಿಯ ನೆರವಿಗೆ ಧಾವಿಸಿದ್ದಾರೆ. ನೆರವಿಗೆ ಧಾವಿಸಿದ ಸ್ಥಳೀಯರ ಮೇಲೂ ಯುವಕರು ಹಲ್ಲೆ ಮಾಡಿದ್ದಾರೆ. ಯುವತಿಯನ್ನು ಬಚಾವ್​ ಮಾಡಿ ಸ್ಥಳೀಯರು ಮನೆ ಬಳಿ ಕರೆದುಕೊಂಡು ಬಂದರೂ ಬಿಡದ ಯುವಕರು, ಆಕೆಯ ಮನೆ ಬಳಿ ಬಂದು ಗಲಾಟೆ ಮಾಡಿದ್ದಾರೆ. ಮನೆಯ ಕಾಪೌಂಡ್ ಒಳಗೆ ಬರಲು ಪುಂಡರು ಯತ್ನಿಸಿದ ವಿಡಿಯೋವನ್ನು ಸ್ಥಳೀಯರು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ.

ಸಿಸಿಟಿವಿಯಲ್ಲಿ ಯುವಕರ ಪುಂಡಾಟ ಸೆರೆ

ಇನ್ನು ಯುವತಿ ಮೇಲೆ ಪುಂಡರು ಹಲ್ಲೆ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬನ್ನೇರುಘಟ್ಟ ‌ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮುಟ್ಟಲು ಬಂದರು.. ತಡೆದಾಗ ಹಲ್ಲೆ ಮಾಡಿದರು

ಈ ಕರಾಳ ಘಟನೆ ಕುರಿತು ಯುವತಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, 'ನಾನು (ಯುವತಿ) ಅಂಗಡಿ ಹೋಗುವ ಸಂದರ್ಭದಲ್ಲಿ ಯುವಕರು ರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದರು. ಎಲ್ಲರೂ ಕುಡಿದಿದ್ದರು, ಗಾಂಜಾ ಹೊಡೆದಿದ್ದರು.

ಆಗ, ಅವರು ನನ್ನ ಅಡ್ಡಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಹೊಡೆಯಲು ಮತ್ತು ಮುಟ್ಟಲು ಬಂದರು. ಈ ವೇಳೆ ಸ್ಥಳೀಯರು ನನ್ನ ರಕ್ಷಿಸಿದರು. ಈ ವೇಳೆ ಅವರ ಮೇಲೂ ಹಲ್ಲೆ ಮಾಡಿದರು. ಅಲ್ಲದೇ, ನನ್ನ ಮನೆ ಗೇಟ್​ ಎಗರಿ ಒಳ ನುಗ್ಗಿದರು. ಏಳೆಂಟು ಜನ ಯುವಕರಿದ್ದರು. ಯುವಕರು ನಮ್ಮ ಮನೆ ಹಿಂದುಗಡೆ ವಾಸವಾಗಿದ್ದಾರಂತೆ. ಕಳೆದ ಒಂದು ವಾರದಿಂದ ಈ ಬಡವಾಣೆಯಲ್ಲಿ ವಾಸಿಸುತ್ತಿದ್ದೇನೆ ಎಂದರು.

ಅಂತೆಯೇ 'ಹಲ್ಲೆ ಮತ್ತು ದೌರ್ಜನ್ಯ ನಡೆಸಿದ ಯುವಕರು ಯಾರೆಂದು ಗೊತ್ತಿಲ್ಲ. ಈ ಸಂಬಂಧ ಬನ್ನೇರುಘಟ್ಟ ‌ಪೊಲೀಸ್ ಠಾಣೆಗೆ ನಾನು ದೂರು ನೀಡಿದ್ದೇನೆ. ನಾನು ನೀಡಿದ ದೂರು ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ. ವಾರದ ಹಿಂದೆ ರೇಣುಕಾ ಯಲ್ಲಮ್ಮ ಬಡಾವಣೆ ಮನೆಗೆ ಶಿಫ್ಟ್‌ ಆಗಿದ್ದೆವು ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ಮಕ್ಕಳ ಜೊತೆ ವಾಸವಿದ್ದೇನೆ' ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com