CM Siddaramaiah and President Droupadi Murmu
ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿ ಮಾಡಿದ ಸಿಎಂ ಸಿದ್ಧರಾಮಯ್ಯ ಮತ್ತು ಸಚಿವರು

ರಾಜ್ಯದ 7 ಪ್ರಮುಖ ಮಸೂದೆಗಳಿಗೆ ರಾಷ್ಟ್ರಪತಿಗಳ ಅಂಗೀಕಾರ ಕೋರಿದ ಸಿಎಂ ಸಿದ್ದರಾಮಯ್ಯ

ರಾಷ್ಟ್ರಪತಿಗಳ ಅನುಮೋದನೆಗಾಗಿ ಕಾಯುತ್ತಿರುವ ಮಸೂದೆಗಳಲ್ಲಿ ಶಿಕ್ಷಣ, ಗಣಿಗಾರಿಕೆ ತೆರಿಗೆ, ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲು ಮತ್ತು ಆಡಳಿತ ಸುಧಾರಣೆಗಳನ್ನು ಒಳಗೊಂಡ ಮಹತ್ವದ ಶಾಸಕಾಂಗ ಕ್ರಮಗಳು ಸೇರಿವೆ.
Published on

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ರಾಜ್ಯ ಶಾಸಕಾಂಗವು ಅಂಗೀಕರಿಸಿದ ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡುವಂತೆ ಕೋರಿದರು.

ರಾಷ್ಟ್ರಪತಿಗಳ ಮುಂದೆ ಮಂಡಿಸಲಾದ ಪ್ರಮುಖ ಮಸೂದೆಗಳಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮಕ್ಕಳ ಹಕ್ಕು (ಕರ್ನಾಟಕ ತಿದ್ದುಪಡಿ) ಮಸೂದೆ, 2015 ಸೇರಿದ್ದು, ಇದು ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಆರ್‌ಟಿಇ ಚೌಕಟ್ಟನ್ನು ಮಾರ್ಪಡಿಸಲು ಪ್ರಯತ್ನಿಸುತ್ತದೆ.

ಕರ್ನಾಟಕ (ಖನಿಜ ಹಕ್ಕುಗಳು ಮತ್ತು ಖನಿಜ ಹೊಂದಿರುವ ಭೂಮಿ) ತೆರಿಗೆ ಮಸೂದೆ, 2024 ತನ್ನ ಖನಿಜ ಸಂಪನ್ಮೂಲಗಳಿಂದ ರಾಜ್ಯದ ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ರೂಪಿಸಲಾಗಿರುವ 'ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಕೆಟಿಪಿಪಿ) ತಿದ್ದುಪಡಿ ಕಾಯ್ದೆ 2025 ಮಸೂದೆಗೆ ಅನುಮೋದನೆ ಕೇಳಲಾಗಿದೆ.

ಆಡಳಿತ ಪ್ರಕ್ರಿಯೆಗಳನ್ನು ಸುಗಮಗೊಳಿಸುವತ್ತ ಗಮನಹರಿಸುವ ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ, 2025 ಮತ್ತು ಅದರ ಪ್ರತಿರೂಪವಾದ ನೋಟರಿಗಳು (ಕರ್ನಾಟಕ ತಿದ್ದುಪಡಿ) ಮಸೂದೆ, 2025 ಸಹ ಸೇರಿವೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆ, 2024 ಕ್ಕೆ ಕೂಡ ರಾಷ್ಟ್ರಪತಿಗಳ ಅನುಮೋದನೆ ಬೇಕಿದೆ.

ಈ ಮಸೂದೆಗಳು ರಾಜ್ಯದಲ್ಲಿ ಜಾರಿಗೆ ಬರುವ ಮೊದಲು ಕೇಂದ್ರ ಸರ್ಕಾರದ ಅನುಮೋದನೆಯನ್ನು ಕಡ್ಡಾಯಗೊಳಿಸುವ ನಿಬಂಧನೆಗಳ ಅಡಿಯಲ್ಲಿ ಬರುವುದರಿಂದ ರಾಷ್ಟ್ರಪತಿಗಳ ಒಪ್ಪಿಗೆ ಅಗತ್ಯವಿರುತ್ತದೆ.

CM Siddaramaiah and President Droupadi Murmu
ರಾಷ್ಟ್ರಪತಿ ಭವನದಲ್ಲಿ ಸಿಎಂ ಸಿದ್ದರಾಮಯ್ಯ- ಅಮೀರ್ ಖಾನ್ ಮುಖಾಮುಖಿ; ಶುಭಾಶಯ ವಿನಿಮಯ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com