ಶಿಗ್ಗಾಂವಿಯಲ್ಲಿ ಗುತ್ತಿಗೆದಾರನ ಭೀಕರ ಹತ್ಯೆ: ಕೊಲೆ ಆರೋಪಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕುಟುಂಬ

ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
House Set on fire
ಪ್ರಾತಿನಿಧಿಕ ಚಿತ್ರ
Updated on

ಹಾವೇರಿ: ಸ್ಥಳೀಯ ಗುತ್ತಿಗೆದಾರ ಶಿವಾನಂದ್ ಕುನ್ನೂರ್ ಅವರ ಹತ್ಯೆಯ ನಂತರ, ಶಿಗ್ಗಾಂವ್‌ನಲ್ಲಿ ಪ್ರಮುಖ ಆರೋಪಿಯ ಮನೆಗೆ ಅವರ ಕುಟುಂಬದ ಸದಸ್ಯರು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ಮಂಗಳವಾರ ಶಿಗ್ಗಾಂವಿ ಹೊರವಲಯದಲ್ಲಿ ಊಟ ಮಾಡಿ ಮನೆಗೆ ಹಿಂದಿರುಗುತ್ತಿದ್ದಾಗ ಹಾಡಹಗಲೇ ಪ್ರಥಮ ದರ್ಜೆ ಗುತ್ತಿಗೆದಾರ ಶಿವಾನಂದ್ ಕುನ್ನೂರ್ (40) ಅವರ ಮೇಲೆ ಬರ್ಬರವಾಗಿ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.

ಕಬ್ಬಿಣದ ರಾಡ್‌ಗಳು, ಮಚ್ಚುಗಳು ಮತ್ತು ಕತ್ತಿಗಳನ್ನು ಹಿಡಿದ ದಾಳಿಕೋರರು ಅವರ ಕುತ್ತಿಗೆ ಮತ್ತು ತಲೆಯ ಮೇಲೆ ಪದೇ ಪದೆ ದಾಳಿ ನಡೆಸಿದ್ದಾರೆ. ಮತ್ತು ಈ ಕೃತ್ಯವು ಕೆಲವರ ಫೋನ್‌ನಲ್ಲಿ ರೆಕಾರ್ಡ್ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

House Set on fire
ಕಲಬುರಗಿ: ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ; ಮಾಜಿ ಕಾರ್ಪೊರೇಟರ್ ಸೇರಿ ಐವರ ವಿರುದ್ಧ FIR

ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಗರಾಜ್ ಸವದತ್ತಿ ಅವರನ್ನು ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿದೆ. ಉಳಿದಂತೆ ಹನುಮಂತ್, ಅಶ್ರಫ್, ಸುದೀಪ್ ಮತ್ತು ಸುರೇಶ್ ಅವರನ್ನು ಪ್ರಕರಣದಲ್ಲಿ ಆರೋಪಿಗಳನ್ನಾಗಿ ಮಾಡಲಾಗಿದೆ.

ಬುಧವಾರ ಬೆಳಿಗ್ಗೆ, ಕುನ್ನೂರ್ ಅವರ ಕುಟುಂಬವು ನಾಗರಾಜ್ ಅವರ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಕಿಯ ಪರಿಣಾಮವಾಗಿ ಕಟ್ಟಡಕ್ಕೆ ಗಣನೀಯ ಹಾನಿಯಾದರೂ, ಆ ಸಮಯದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಕಾರಣ, ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com