ವಾರಕ್ಕೆ ಮೂರು ಬಾರಿ 'ಕಾವೇರಿ ಆರತಿ': DCM ಡಿ.ಕೆ ಶಿವಕುಮಾರ್

ಕೆಆರ್‌ಎಸ್‌ಗೆ ಬರುವ ಪ್ರವಾಸಿಗರ ಸಂಖ್ಯೆಯನ್ನು ಹೆಚ್ಚಿಸಬೇಕು, ಕಾವೇರಿಗೆ ನಮನ ಸಲ್ಲಿಸಲು ಸಾಕಷ್ಟು ಸಲಹೆಗಳು ಬಂದಿವೆ.
DK shivkumar
ಡಿಕೆ ಶಿವಕುಮಾರ್
Updated on

ಬೆಂಗಳೂರು: ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದ ಬಳಿ ವಾರಕ್ಕೆ ಮೂರು ಬಾರಿ ಕಾವೇರಿ ಆರತಿ ಆಯೋಜಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಜಲಸಂಪನ್ಮೂಲ ಖಾತೆಯನ್ನೂ ಹೊಂದಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದರು.

ಕಾವೇರಿ ಆರತಿ ಕಾರ್ಯಕ್ರಮ ಕುರಿತಂತೆ ಮಂಡ್ಯ ಜಿಲ್ಲೆಯ ರೈತ ಹಾಗೂ ಇತರೆ ಸಂಘಟನೆಗಳ ಮುಖಂಡರು ಹಾಗೂ ಜನಪ್ರತಿನಿಧಿಗಳ ಜೊತೆ ಬುಧವಾರ ಡಿಕೆ.ಶಿವಕುಮಾರ್ ಅವರು ಸಭೆ ನಡೆಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2–3 ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಿಸಲಾಗುವುದು. ಕಾರ್ಯಕ್ರಮಕ್ಕೆ ಜಲಸಂಪನ್ಮೂಲ, ಧಾರ್ಮಿಕ ದತ್ತಿ, ಕನ್ನಡ ಮತ್ತು ಸಂಸ್ಕೃತಿ, ಪಿಡಬ್ಲ್ಯೂಡಿ, ಪ್ರವಾಸೋದ್ಯಮ ಮತ್ತು ಇಂಧನ ಇಲಾಖೆಗಳಿಂದ ಅನುದಾನ ನೀಡಲಾಗುವುದು ಎಂದು ಹೇಳಿದರು.

ಪ್ರಯತ್ನ ವಿಫಲ ಆಗಬಹುದು, ಪ್ರಾರ್ಥನೆ ವಿಫಲ ಆಗಲ್ಲ. ಕೆಆರ್‌ಎಸ್‌ನಲ್ಲಿ ಹೊಸ ರೂಪ ಕೊಡಲು ಪ್ರಾರಂಭ ಮಾಡಿದ್ದೇವೆ. ವಾರಕ್ಕೆ ಮೂರು ದಿನ ಕಾವೇರಿ ಆರತಿ ನಡೆಯಲಿದೆ. 10 ಸಾವಿರ ಆಸನಗಳ ವ್ಯವಸ್ಥೆ ಮಾಡುತ್ತೇವೆ. ಇದರಲ್ಲಿ ಶೇ.70 ಆಸನಗಳು ಉಚಿತ, ಶೇ,30 ಟಿಕೆಟ್ ಮಾಡುತ್ತೇವೆ.

ಕೆಆರ್‌ಎಸ್‌ಗೆ ಬರುವ ಪ್ರವಾಸಿಗರ ಸಂಖ್ಯೆಯನ್ನು ಹೆಚ್ಚಿಸಬೇಕು, ಕಾವೇರಿಗೆ ನಮನ ಸಲ್ಲಿಸಲು ಸಾಕಷ್ಟು ಸಲಹೆಗಳು ಬಂದಿವೆ. ತಾಯಿ ಕಾವೇರಿಗೆ ಜಾತಿ, ಧರ್ಮ, ಬಣ್ಣ ಇಲ್ಲ, ಎಲ್ಲರ ಆಸ್ತಿ ಕಾವೇರಿ. ಕೆಲ ರೈತರು ಆತಂಕ ವ್ಯಕ್ತಪಡಿಸಿದರು. ಗೌರವಿಸಿ ಅವರ ಅಭಿಪ್ರಾಯವನ್ನು ಕೇಳಿದ್ದೇವೆ. ಡ್ಯಾಂಗೆ ತೊಂದರೆ ಆಗಬಹುದು ಎಂಬ ಆತಂಕ ರೈತರಿಗಿದೆ. ಆ ರೀತಿ ಆಗಲ್ಲ. ಕಾವೇರಿ ಆರತಿ ಯಾವ ರೀತಿ ನಡೆಯಲಿದೆ.

DK shivkumar
ಕಾವೇರಿ ಆರತಿ ಯೋಜನೆಗೆ 100 ಕೋಟಿ ರೂ ಏಕೆ ಬೇಕು?: ರಾಜ್ಯ ಸರ್ಕಾರದ ವಿರುದ್ಧ HDK ಕಿಡಿ

ಒಂದು ವರ್ಗದ ಜನರು ಕಾರ್ಯಕ್ರಮವನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಮತ್ತು ತಮ್ಮ ವಿರೋಧವನ್ನು ವ್ಯಕ್ತಪಡಿಸುತ್ತಿದ್ದಾರೆ.ನಾವು ಪ್ರತಿಯೊಬ್ಬರೊಂದಿಗೂ ಮಾತುಕತೆ ನಡೆಸಿ ಅವರ ಮನವೊಲಿಸಲಿದ್ದೇವೆ. ಈ ಕಾರ್ಯಕ್ರಮದೊಂದಿಗೆ ಮುಂದುವರಿಯಲಿದೆ, ಮುಂದಿನ ಮೂರು ದಿನಗಳಲ್ಲಿ ನಾವು ಕಾರ್ಯಕ್ರಮದ ವಿವರಗಳನ್ನು ಬಿಡುಗಡೆ ಮಾಡುತ್ತೇವೆ.

ಪ್ರಸ್ತಾವಿತ ಕಾವೇರಿ ಆರತಿಯಿಂದ ಕನಿಷ್ಠ 2,000 ಜನರಿಗೆ ಉದ್ಯೋಗ ಸೃಷ್ಟಿಯಾಗುತ್ತದೆ. ಈ ಕಾರ್ಯಕ್ರಮವು ಮಂಡ್ಯ, ಮೈಸೂರು, ಕೊಡಗು ಮತ್ತು ಮಂಗಳೂರು ಪ್ರದೇಶಗಳ ಸಂಸ್ಕೃತಿಯನ್ನು ಸಹ ಪ್ರದರ್ಶಿಸುತ್ತದೆ. ಸ್ಥಳೀಯ ಪುರೋಹಿತರು ಮತ್ತು ಕಲಾವಿದರಿಗೆ ಅವಕಾಶಗಳನ್ನು ನೀಡಲಾಗುವುದು. ಆದಿ ಚುಂಚುಂಗಿರಿ ಮಠದಲ್ಲಿ ಪುರೋಹಿತರಿಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

ಕಾವೇರಿ ಆರತಿಯನ್ನು ಜಲಸಂಪನ್ಮೂಲ, ದತ್ತಿ, ಕನ್ನಡ ಮತ್ತು ಸಂಸ್ಕೃತಿ, ಪಿಡಬ್ಲ್ಯೂಡಿ, ಪ್ರವಾಸೋದ್ಯಮ ಮತ್ತು ಇಂಧನ ಇಲಾಖೆಗಳು ಆಯೋಜಿಸುತ್ತವೆ.

ರಾಜ್ಯದ ಶಾಸಕರ ತಂಡವು ಇದೇ ರೀತಿಯ ಆರತಿಗಳನ್ನು ಅಧ್ಯಯನ ಮಾಡಲು ಉತ್ತರ ಭಾರತದ ರಾಜ್ಯಗಳಿಗೆ ಭೇಟಿ ನೀಡಿದ್ದು, ಅವರು ವರದಿಯನ್ನು ಸಲ್ಲಿಸಿದ್ದಾರೆ. ವರದಿಯ ಆಧಾರದ ಮೇಲೆ, ನಾವು ಕಾವೇರಿ ಆರತಿಯನ್ನು ವಿನ್ಯಾಸಗೊಳಿಸಿದ್ದೇವೆ. ಕಾವೇರಿ ಎಲ್ಲರಿಗೂ ಸೇರಿದ್ದು. ಕಾವೇರಿ ಇಲ್ಲದಿದ್ದರೆ, ಬೆಂಗಳೂರಿಗೆ ಕುಡಿಯುವ ನೀರಿಲ್ಲ, ಕೃಷಿ ಮತ್ತು ಕೈಗಾರಿಕೆಗಳಿಗೆ ನೀರಿಲ್ಲ. ಕರ್ನಾಟಕ ಮತ್ತು ತಮಿಳುನಾಡಿಗೆ ಕಾವೇರಿ ನೀರು ಬೇಕು. ಆದ್ದರಿಂದ, ನಾವು ಮೇಕೆದಾಟು ಯೋಜನೆಗೆ ಒತ್ತಾಯಿಸುತ್ತಿದ್ದೇವೆಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com